ಸಾರ್ವಜನಿಕ ಗಣಪತಿ ಕಾರ್ಯಕ್ರಮಕ್ಕೆ ಸಿಂಗಲ್ ವಿಂಡೋ ಅನುಮತಿ ನೀಡಿ…ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಯಿಂದ ಮನವಿ…

ಸಾರ್ವಜನಿಕ ಗಣಪತಿ ಕಾರ್ಯಕ್ರಮಕ್ಕೆ ಸಿಂಗಲ್ ವಿಂಡೋ ಅನುಮತಿ ನೀಡಿ…ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಯಿಂದ ಮನವಿ…

ಮೈಸೂರು,ಆ22,Tv10 ಕನ್ನಡ

ಸಾರ್ವಜನಿಕವಾಗಿ
ಗಣಪತಿ ಪ್ರತಿಷ್ಠಾಪಿಸು ಕಾರ್ಯಕ್ರಮಕ್ಕೆ ಸಿಂಗಲ್ ವಿಂಡೋ ಪರ್ಮಿಷನ್ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಸ್ಥಳೀಯ ಮುಖಂಡರು ಪ್ರಧಾನ ಕಾರ್ಯದರ್ಶಿ ಹೆಚ್.ಜಿ.ಗಿರಿಧರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಪಿ ಶಿವರಾಜು ರವರು ಮನವಿ ಪತ್ರ ಸ್ವೀಕರಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕವಾಗಿ ಅನೇಕ ಸಂಘ ಸಂಸ್ಥೆಗಳು ಮತ್ತು ಯುವಕರು ರಸ್ತೆ ಬದಿಯಲ್ಲಿ ಹಾಗೂ ಪಾರ್ಕ್ ಗಳಲ್ಲಿ ಮತ್ತು ಸ್ಥಳೀಯ ಪ್ರದೇಶಗಳಲ್ಲಿ ಸಾಮೂಹಿಕವಾಗಿ ಗಣಪತಿಗಳನ್ನ ಪ್ರತಿಷ್ಠಾಪಿಸಿ ಹಬ್ಬ ಆಚರಣೆ ಮಾಡುವ ಕಾರ್ಯಕ್ರಮಕ್ಕೆ ಅವಶ್ಯಕತೆ ಇರುವ ಎಲ್ಲಾ ಅನುಮತಿ ಗಳನ್ನು ಒಂದೇ ಕಡೆ ನೀಡಬೇಕು ಎಂದು ಒತ್ತಾಯಿಸಿದರು. ಕಾರ್ಪೊರೇಷನ್, ಕೆಇಬಿ, ಕೆಎಸ್ಆರ್ಟಿಸಿ ಮತ್ತು ಪೊಲೀಸ್ ಹಾಗೂ ಅಗ್ನಿಶಾಮಕ ದಳ ಈ ಎಲ್ಲವೂ ಒಂದೇ ಕಡೆ ಅರ್ಜಿಗಳನ್ನು ತೆಗೆದುಕೊಂಡು 24 ಗಂಟೆಗಳಲ್ಲಿ ಪರಿಶೀಲಿಸಿ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಿ ಸರಳವಾಗಿ ಅನುಮತಿ ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡಿದರು.ಪುಟ್ಡ ಮಕ್ಕಳು ಆಯೋಜಿಸುವ ಕಾರ್ಯಕ್ರಮಕ್ಕೆ ಅನುಮತಿ ಅಗತ್ಯವಿಲ್ಲವೆಂದು ಘೋಷಿಸಬೇಕೆಂದು ಮನವಿ ಮಾಡಿದರು…

ಈ ಸಂದರ್ಭದಲ್ಲಿ ಬಿಜೆಪಿ ನಗರ ಉಪಾಧ್ಯಕ್ಷರಾದ ಎಸ್ ಕೆ ದಿನೇಶ್, ಜೋಗಿ ಮಂಜು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ರಾಕೇಶ್ ಗೌಡ, ಎನ್ ಆರ್ ಕ್ಷೇತ್ರದ ಅಧ್ಯಕ್ಷರಾದ ಸ್ಮಾರ್ಟ್ ಮಂಜು, ಎನ್ ಆರ್ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ನವೀನ್ ರಾಜ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *