ಸಾರ್ವಜನಿಕ ಗಣಪತಿ ಕಾರ್ಯಕ್ರಮಕ್ಕೆ ಸಿಂಗಲ್ ವಿಂಡೋ ಅನುಮತಿ ನೀಡಿ…ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಯಿಂದ ಮನವಿ…

ಸಾರ್ವಜನಿಕ ಗಣಪತಿ ಕಾರ್ಯಕ್ರಮಕ್ಕೆ ಸಿಂಗಲ್ ವಿಂಡೋ ಅನುಮತಿ ನೀಡಿ…ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಯಿಂದ ಮನವಿ…

ಮೈಸೂರು,ಆ22,Tv10 ಕನ್ನಡ

ಸಾರ್ವಜನಿಕವಾಗಿ
ಗಣಪತಿ ಪ್ರತಿಷ್ಠಾಪಿಸು ಕಾರ್ಯಕ್ರಮಕ್ಕೆ ಸಿಂಗಲ್ ವಿಂಡೋ ಪರ್ಮಿಷನ್ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಸ್ಥಳೀಯ ಮುಖಂಡರು ಪ್ರಧಾನ ಕಾರ್ಯದರ್ಶಿ ಹೆಚ್.ಜಿ.ಗಿರಿಧರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಪಿ ಶಿವರಾಜು ರವರು ಮನವಿ ಪತ್ರ ಸ್ವೀಕರಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕವಾಗಿ ಅನೇಕ ಸಂಘ ಸಂಸ್ಥೆಗಳು ಮತ್ತು ಯುವಕರು ರಸ್ತೆ ಬದಿಯಲ್ಲಿ ಹಾಗೂ ಪಾರ್ಕ್ ಗಳಲ್ಲಿ ಮತ್ತು ಸ್ಥಳೀಯ ಪ್ರದೇಶಗಳಲ್ಲಿ ಸಾಮೂಹಿಕವಾಗಿ ಗಣಪತಿಗಳನ್ನ ಪ್ರತಿಷ್ಠಾಪಿಸಿ ಹಬ್ಬ ಆಚರಣೆ ಮಾಡುವ ಕಾರ್ಯಕ್ರಮಕ್ಕೆ ಅವಶ್ಯಕತೆ ಇರುವ ಎಲ್ಲಾ ಅನುಮತಿ ಗಳನ್ನು ಒಂದೇ ಕಡೆ ನೀಡಬೇಕು ಎಂದು ಒತ್ತಾಯಿಸಿದರು. ಕಾರ್ಪೊರೇಷನ್, ಕೆಇಬಿ, ಕೆಎಸ್ಆರ್ಟಿಸಿ ಮತ್ತು ಪೊಲೀಸ್ ಹಾಗೂ ಅಗ್ನಿಶಾಮಕ ದಳ ಈ ಎಲ್ಲವೂ ಒಂದೇ ಕಡೆ ಅರ್ಜಿಗಳನ್ನು ತೆಗೆದುಕೊಂಡು 24 ಗಂಟೆಗಳಲ್ಲಿ ಪರಿಶೀಲಿಸಿ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಿ ಸರಳವಾಗಿ ಅನುಮತಿ ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡಿದರು.ಪುಟ್ಡ ಮಕ್ಕಳು ಆಯೋಜಿಸುವ ಕಾರ್ಯಕ್ರಮಕ್ಕೆ ಅನುಮತಿ ಅಗತ್ಯವಿಲ್ಲವೆಂದು ಘೋಷಿಸಬೇಕೆಂದು ಮನವಿ ಮಾಡಿದರು…

ಈ ಸಂದರ್ಭದಲ್ಲಿ ಬಿಜೆಪಿ ನಗರ ಉಪಾಧ್ಯಕ್ಷರಾದ ಎಸ್ ಕೆ ದಿನೇಶ್, ಜೋಗಿ ಮಂಜು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ರಾಕೇಶ್ ಗೌಡ, ಎನ್ ಆರ್ ಕ್ಷೇತ್ರದ ಅಧ್ಯಕ್ಷರಾದ ಸ್ಮಾರ್ಟ್ ಮಂಜು, ಎನ್ ಆರ್ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ನವೀನ್ ರಾಜ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *