
ಅರಮನೆ ಅಂಗಳಕ್ಕೆ ಗಜಪಡೆ ಗ್ರ್ಯಾಂಡ್ ಎಂಟ್ರಿ…ಜಿಲ್ಲಾಡಳಿತದಿಂದ ಅದ್ದೂರಿ ಸ್ವಾಗತ…
- MysoreTV10 Kannada Exclusive
- August 23, 2024
- No Comment
- 148
ಮೈಸೂರು,ಆ23,Tv10 ಕನ್ನಡವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024 ರಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದ ಗಜಪಡೆ ಇಂದು ಅರಮನೆ ಆವರಣ ಪ್ರವೇಶಿಸಿತು.ಜಿಲ್ಲಾಡಳಿತ ಹಾಗೂ ಅರಮನೆ ಆಡಳಿತ ಮಂಡಳಿ ವತಿಯಿಂದ ಅಭಿಮನ್ಯು ಅಂಡ್ ಟೀಂ ಗೆ ಅದ್ದೂರಿ ಸ್ವಾಗತ ಕೋರಲಾಯಿತು.
ಆನೆಗಳ ಆಗಮನದಿಂದ ದಸರೆಯ ವೈಭವ ಸಾಂಸ್ಕೃತಿಕ ನಗರಿಯಲ್ಲಿ ಕಳೆಗಟ್ಟಿದಂತಾಗಿದೆ.
ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಗಜಪಡೆಗೆ ಬೆಳಿಗ್ಗೆ 10.10 ರಿಂದ 10.30 ರೊಳಗೆ ಸಲ್ಲುವ ಶುಭಗಳಿಗೆಯಲ್ಲಿಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು.ಮೈಸೂರಿನ ಅಶೋಕಪುರಂನ ಅರಣ್ಯಭವನದಲ್ಲಿ ತಂಗಿದ್ದ ಆನೆಗಳಿಗೆ ಇಲಾಖೆ ವತಿಯಿಂದ ಪುಜೆ ಸಲ್ಲಿಸಿ ಬೀಳ್ಕೊಡಲಾಯಿತು.
ನಂತರ ಅರಣ್ಯಭವನದಿಂದ ಕಾಲ್ನಡಿಗೆ ಮೂಲಕ ಅರಮನೆಗೆ ಗಜಪಡೆ ತೆರಳಿತು.ಅಭಿಮನ್ಯು ಸೇರಿದಂತೆ ಏಕಲವ್ಯ, ಭೀಮ, ಕಂಜನ್, ಲಕ್ಷ್ಮೀ, ವರಲಕ್ಷ್ಮೀ, ರೋಹಿತ್, ಗೋಪಿ, ಧನಂಜಯ ಆನೆಗಳು ಅರಮನೆ ಕಡೆ ಹೆಜ್ಜೆ ಹಾಕಿ ಜನರ ಗಮನ ಸೆಳೆಯಿತು.ಪೂಜಾ ಕಾರ್ಯಕ್ರಮದಲ್ಲಿ ಶಾಸಕರಾದ ತನ್ವೀರ್ ಸೇಠ್, ಶ್ರೀವತ್ಸ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಟ್ಕಾರ್, ಸಿಎಫ್ಒ ಮಾಲತಿ ಪ್ರಿಯ, ಡಿಸಿಪಿ ಮುತ್ತುರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು…