ಕೊರಗಜ್ಜ ದೇವಸ್ಥಾನ ತೆರುವು…ರಾಜಾಕಾಲುವೆ ಮೇಲೆ ನಿರ್ಮಾಣವಾಗಿದ್ದ ದೇವಸ್ಥಾನ…ಜಿಲ್ಲಾಡಳಿತ ಕಾರ್ಯಾಚರಣೆ…

ಕೊರಗಜ್ಜ ದೇವಸ್ಥಾನ ತೆರುವು…ರಾಜಾಕಾಲುವೆ ಮೇಲೆ ನಿರ್ಮಾಣವಾಗಿದ್ದ ದೇವಸ್ಥಾನ…ಜಿಲ್ಲಾಡಳಿತ ಕಾರ್ಯಾಚರಣೆ…

ಮೈಸೂರು,ಆ26,Tv10 ಕನ್ನಡ

ಬೆಳ್ಳಂಬೆಳಗ್ಗೆ ಮೈಸೂರು ತಾಲೂಕು ಕೇರ್ಗಳ್ಳಿ ಗ್ರಾಮದಲ್ಲಿ ಜೆಸಿಬಿಘರ್ಜಿಸಿದೆ.ರಾಜಾಕಾಲುವೆ ಮೇಲೆ ನಿರ್ಮಿಸಲಾಗಿದ್ದ ಪವಾಡ ಪುರುಷ ಕೊರಗಜ್ಜ ದೇವಾಲಯವನ್ನ ಜಿಲ್ಲಾಡಳಿತ ನೆಲಸಮ ಮಾಡಿದೆ.ದಾಖಲೆಗಳನ್ನ ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ. R ರಕ್ಷಿತ್ ರವರ ಆದೇಶದಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ದೇವಾಲಯವನ್ನ ಡೆಮಾಲಿಷ್ ಮಾಡಿದ್ದಾರೆ.ಕೇರ್ಗಳ್ಳಿ ಗ್ರಾಮದ ಸ ನಂ. 60 ರಲ್ಲಿ ಹಾದುಹೋಗಿದ್ದ ರಾಜ ಕಾಲುವೆ ಒತ್ತುವರಿ ಆಗಿದೆ ಎಂಬ ದೂರು ತಾಲೂಕು ಆಡಳಿತಕ್ಕೆ ಬಂದಿತ್ತು.ಅಕ್ರಮವಾಗಿ ದೇವಾಲಯ ನಿರ್ಮಿಸಲಾಗಿದೆ ಎಂಬ ಮಾಹಿತಿ ಇತ್ತು.ಈ ಸಂಭಂಧ ದಾಖಲೆಗಳನ್ನ ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ.ರಕ್ಷಿತ್ ಒತ್ತುವರಿಯಾಗಿರುವ ಬಗ್ಗೆ ಖಚಿತಪಡಿಸಿಕೊಂಡಿದ್ದಾರೆ.ಹಾಗೂ ಒತ್ತುವರಿಯನ್ನ ತೆರುವುಗೊಳಿಸುವಂತೆ ಆದೇಶಿಸಿದ್ದಾರೆ.ಅದರಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ರವರು ಜಯಪುರ ಪೊಲೀಸರ ಭದ್ರತೆಯೊಂದಿಗೆ ಕಾರ್ಯಾಚರಣೆ ಮಾಡಿ ರಾಜಾಕಾಲುವೆಯನ್ನ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಕೊರಗಜ್ಜ ದೇವಾಲಯವನ್ನ ನೆಲಸಮಗೊಳಿಸಿ ತೆರವುಗೊಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಜಯಪುರ ಹೋಬಳಿ ಉಪತಹಸೀಲ್ದಾರ್ ನಿಂಗಪ್ಪ, ರಾಜಸ್ವ ನಿರೀಕ್ಷಕರಾದ ಲೋಹಿತ್, ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳು. ಬೋಗಾದಿ ಪಟ್ಟ ಪಂಚಾಯಿತಿ ಅಧಿಕಾರಿಗಳು, ಸಿಬಂದಿ ವರ್ಗದವರು,ನಗರಮಾಪನ ಯೋಜನಾಧಿಕಾರಿಗಳ ಕಚೇರಿ ಸಿಬ್ಬಂದಿಗಳು ಹಾಗೂ ಜಯಪುರ ಪೋಲೀಸ್ ಠಾಣೆ ಅಧಿಕಾರಿ ಹಾಗೂ ಸಿಬಂದಿಗಳು ಭಾಗವಹಿಸಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *