ಕೊರಗಜ್ಜ ದೇವಸ್ಥಾನ ತೆರುವು…ರಾಜಾಕಾಲುವೆ ಮೇಲೆ ನಿರ್ಮಾಣವಾಗಿದ್ದ ದೇವಸ್ಥಾನ…ಜಿಲ್ಲಾಡಳಿತ ಕಾರ್ಯಾಚರಣೆ…

ಕೊರಗಜ್ಜ ದೇವಸ್ಥಾನ ತೆರುವು…ರಾಜಾಕಾಲುವೆ ಮೇಲೆ ನಿರ್ಮಾಣವಾಗಿದ್ದ ದೇವಸ್ಥಾನ…ಜಿಲ್ಲಾಡಳಿತ ಕಾರ್ಯಾಚರಣೆ…

ಮೈಸೂರು,ಆ26,Tv10 ಕನ್ನಡ

ಬೆಳ್ಳಂಬೆಳಗ್ಗೆ ಮೈಸೂರು ತಾಲೂಕು ಕೇರ್ಗಳ್ಳಿ ಗ್ರಾಮದಲ್ಲಿ ಜೆಸಿಬಿಘರ್ಜಿಸಿದೆ.ರಾಜಾಕಾಲುವೆ ಮೇಲೆ ನಿರ್ಮಿಸಲಾಗಿದ್ದ ಪವಾಡ ಪುರುಷ ಕೊರಗಜ್ಜ ದೇವಾಲಯವನ್ನ ಜಿಲ್ಲಾಡಳಿತ ನೆಲಸಮ ಮಾಡಿದೆ.ದಾಖಲೆಗಳನ್ನ ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ. R ರಕ್ಷಿತ್ ರವರ ಆದೇಶದಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ದೇವಾಲಯವನ್ನ ಡೆಮಾಲಿಷ್ ಮಾಡಿದ್ದಾರೆ.ಕೇರ್ಗಳ್ಳಿ ಗ್ರಾಮದ ಸ ನಂ. 60 ರಲ್ಲಿ ಹಾದುಹೋಗಿದ್ದ ರಾಜ ಕಾಲುವೆ ಒತ್ತುವರಿ ಆಗಿದೆ ಎಂಬ ದೂರು ತಾಲೂಕು ಆಡಳಿತಕ್ಕೆ ಬಂದಿತ್ತು.ಅಕ್ರಮವಾಗಿ ದೇವಾಲಯ ನಿರ್ಮಿಸಲಾಗಿದೆ ಎಂಬ ಮಾಹಿತಿ ಇತ್ತು.ಈ ಸಂಭಂಧ ದಾಖಲೆಗಳನ್ನ ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ.ರಕ್ಷಿತ್ ಒತ್ತುವರಿಯಾಗಿರುವ ಬಗ್ಗೆ ಖಚಿತಪಡಿಸಿಕೊಂಡಿದ್ದಾರೆ.ಹಾಗೂ ಒತ್ತುವರಿಯನ್ನ ತೆರುವುಗೊಳಿಸುವಂತೆ ಆದೇಶಿಸಿದ್ದಾರೆ.ಅದರಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ರವರು ಜಯಪುರ ಪೊಲೀಸರ ಭದ್ರತೆಯೊಂದಿಗೆ ಕಾರ್ಯಾಚರಣೆ ಮಾಡಿ ರಾಜಾಕಾಲುವೆಯನ್ನ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಕೊರಗಜ್ಜ ದೇವಾಲಯವನ್ನ ನೆಲಸಮಗೊಳಿಸಿ ತೆರವುಗೊಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಜಯಪುರ ಹೋಬಳಿ ಉಪತಹಸೀಲ್ದಾರ್ ನಿಂಗಪ್ಪ, ರಾಜಸ್ವ ನಿರೀಕ್ಷಕರಾದ ಲೋಹಿತ್, ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳು. ಬೋಗಾದಿ ಪಟ್ಟ ಪಂಚಾಯಿತಿ ಅಧಿಕಾರಿಗಳು, ಸಿಬಂದಿ ವರ್ಗದವರು,ನಗರಮಾಪನ ಯೋಜನಾಧಿಕಾರಿಗಳ ಕಚೇರಿ ಸಿಬ್ಬಂದಿಗಳು ಹಾಗೂ ಜಯಪುರ ಪೋಲೀಸ್ ಠಾಣೆ ಅಧಿಕಾರಿ ಹಾಗೂ ಸಿಬಂದಿಗಳು ಭಾಗವಹಿಸಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *