ಕೊರಗಜ್ಜ ದೇವಸ್ಥಾನ ತೆರುವು…ರಾಜಾಕಾಲುವೆ ಮೇಲೆ ನಿರ್ಮಾಣವಾಗಿದ್ದ ದೇವಸ್ಥಾನ…ಜಿಲ್ಲಾಡಳಿತ ಕಾರ್ಯಾಚರಣೆ…

ಕೊರಗಜ್ಜ ದೇವಸ್ಥಾನ ತೆರುವು…ರಾಜಾಕಾಲುವೆ ಮೇಲೆ ನಿರ್ಮಾಣವಾಗಿದ್ದ ದೇವಸ್ಥಾನ…ಜಿಲ್ಲಾಡಳಿತ ಕಾರ್ಯಾಚರಣೆ…

ಮೈಸೂರು,ಆ26,Tv10 ಕನ್ನಡ

ಬೆಳ್ಳಂಬೆಳಗ್ಗೆ ಮೈಸೂರು ತಾಲೂಕು ಕೇರ್ಗಳ್ಳಿ ಗ್ರಾಮದಲ್ಲಿ ಜೆಸಿಬಿಘರ್ಜಿಸಿದೆ.ರಾಜಾಕಾಲುವೆ ಮೇಲೆ ನಿರ್ಮಿಸಲಾಗಿದ್ದ ಪವಾಡ ಪುರುಷ ಕೊರಗಜ್ಜ ದೇವಾಲಯವನ್ನ ಜಿಲ್ಲಾಡಳಿತ ನೆಲಸಮ ಮಾಡಿದೆ.ದಾಖಲೆಗಳನ್ನ ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ. R ರಕ್ಷಿತ್ ರವರ ಆದೇಶದಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ದೇವಾಲಯವನ್ನ ಡೆಮಾಲಿಷ್ ಮಾಡಿದ್ದಾರೆ.ಕೇರ್ಗಳ್ಳಿ ಗ್ರಾಮದ ಸ ನಂ. 60 ರಲ್ಲಿ ಹಾದುಹೋಗಿದ್ದ ರಾಜ ಕಾಲುವೆ ಒತ್ತುವರಿ ಆಗಿದೆ ಎಂಬ ದೂರು ತಾಲೂಕು ಆಡಳಿತಕ್ಕೆ ಬಂದಿತ್ತು.ಅಕ್ರಮವಾಗಿ ದೇವಾಲಯ ನಿರ್ಮಿಸಲಾಗಿದೆ ಎಂಬ ಮಾಹಿತಿ ಇತ್ತು.ಈ ಸಂಭಂಧ ದಾಖಲೆಗಳನ್ನ ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ.ರಕ್ಷಿತ್ ಒತ್ತುವರಿಯಾಗಿರುವ ಬಗ್ಗೆ ಖಚಿತಪಡಿಸಿಕೊಂಡಿದ್ದಾರೆ.ಹಾಗೂ ಒತ್ತುವರಿಯನ್ನ ತೆರುವುಗೊಳಿಸುವಂತೆ ಆದೇಶಿಸಿದ್ದಾರೆ.ಅದರಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ರವರು ಜಯಪುರ ಪೊಲೀಸರ ಭದ್ರತೆಯೊಂದಿಗೆ ಕಾರ್ಯಾಚರಣೆ ಮಾಡಿ ರಾಜಾಕಾಲುವೆಯನ್ನ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಕೊರಗಜ್ಜ ದೇವಾಲಯವನ್ನ ನೆಲಸಮಗೊಳಿಸಿ ತೆರವುಗೊಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಜಯಪುರ ಹೋಬಳಿ ಉಪತಹಸೀಲ್ದಾರ್ ನಿಂಗಪ್ಪ, ರಾಜಸ್ವ ನಿರೀಕ್ಷಕರಾದ ಲೋಹಿತ್, ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳು. ಬೋಗಾದಿ ಪಟ್ಟ ಪಂಚಾಯಿತಿ ಅಧಿಕಾರಿಗಳು, ಸಿಬಂದಿ ವರ್ಗದವರು,ನಗರಮಾಪನ ಯೋಜನಾಧಿಕಾರಿಗಳ ಕಚೇರಿ ಸಿಬ್ಬಂದಿಗಳು ಹಾಗೂ ಜಯಪುರ ಪೋಲೀಸ್ ಠಾಣೆ ಅಧಿಕಾರಿ ಹಾಗೂ ಸಿಬಂದಿಗಳು ಭಾಗವಹಿಸಿದ್ದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *