ವಾರ್ಡ್ 50 ರಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ…

ವಾರ್ಡ್ 50 ರಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ…

  • Politics
  • August 27, 2024
  • No Comment
  • 237

ಮೈಸೂರು,ಆ27,Tv10 ಕನ್ನಡ

ವಲಯ 1 ರ ವ್ಯಾಪ್ತಿಯ ನಗರಪಾಲಿಕೆ 50 ನೇ ವಾರ್ಡ್ ವ್ಯಾಪ್ತಿಯ ಸುಣ್ಣದಕೇರಿ ಹಾಗೂ ಬೆಸ್ತರಗೇರಿ ಭಾಗದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಇಂದು ಪಾದಯಾತ್ರೆ ನಡೆಸಿ ಸ್ಥಳೀಯ ನಿವಾಸಿಗಳ ಸಮಸ್ಯೆ ಆಲಿಸಿ ಕೂಡಲೇ ಬಗೆಹರಿಸುವ ಭರವಸೆ ನೀಡಿದರು.
ಸುಣ್ಣದಕೇರಿಯ 4 ನೇ ಕ್ರಾಸ್‌ನಿಂದ 9 ನೇ ಕ್ರಾಸ್‌ವರೆಗೆ ಪಾದಯಾತ್ರೆ ನಡೆಸಿ ನಿವಾಸಿಗಳು ಕುಂದು-ಕೊರತೆ ಆಲಿಸಿದರು. ಈ ವೇಳೆ ಕಳೆದ 2_3 ದಿನಗಳಿಂದ ಸುಣ್ಣದಕೇರಿಗೆ ನೀರು ಸರಬರಾಜಿನಲ್ಲಿ ತೊಂದರೆಯಾಗಿದೆ. ಒಳಚರಂಡಿ ವ್ಯವಸ್ಥೆ ಸರಿಯಿಲ್ಲ.ಕೆಲ ರಸ್ತೆಗಳು ಹಾಳಾಗಿವೆ. ಪಾಲಿಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೂಡಲೇ ಕುಡಿಯುವ ನೀರು ಸರಬರಾಜು ಮಾಡಿ ಎಂದು ಮನವಿ ಮಾಡಿದರು.
ನಿವಾಸಿಗಳಿಗೆ ಮನವಿಗೆ ಸ್ಪಂದಿಸಿದ ಶಾಸಕರು, ನೀರು ಸರಬರಾಜಿನ ಪೈಪ್‌ಲೈನ್ ವಾಲ್ವ್ ಬ್ಲಾಕ್ ಆಗಿರುವುದರಿಂದ ಸರಬರಾಜಿನಲ್ಲಿ ತೊಂದರೆಯಾಗಿದೆ. ಕೂಡಲೇ ದುರಸ್ಥಿ ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.ನಂತರ ಸುಣ್ಣದಕೇರಿ 7 ಮತ್ತು 9 ಕ್ರಾಸ್ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿ, ಕಾಂಕ್ರೀಟ್ ರಸ್ತೆ ಅಭಿವೃದ್ಧಿಯಲ್ಲಿ ಯಾವುದೇ ಲೋಪವಾಗಬಾರದು ಎಂದು ಗುತ್ತಿಗೆದಾರರಿಗೆ ಎಚ್ಚರಿಸಿದರು.

ಪಾಲಿಕೆ ಎಇಇ ಧನುಷ್, ಎಇ ಪ್ರಶಾಂತ್, ವಾಟರ್ ಇನ್ಸ್‌ಫೆಕ್ಟರ್ ಮಧು, ಬಿಜೆಪಿ ಮುಖಂಡರಾದ ಜೋಗಿ ಮಂಜು, ಕೃಷ್ಣನಾಯಕ, ಜೋಗಪ್ಪ, ರಾಕೇಶ್‌ಗೌಡ, ಲೋಕೇಶ್, ಜಯಸಿಂಹ, ಜಗದೀಶ್, ರಾಜೇಶ್, ಪ್ರದೀಪ್, ಕಿಶೋರ್,ಕೀರ್ತಿ, ಸ್ಥಳೀಯ ನಿವಾಸಿಗಳಾದ ದಾಸಪ್ಪ, ಅಶ್ವಥ್, ಮಹೇಶ್ ನಾಯಕ್ ಮತ್ತಿತರರು ಸಾಥ್ ನೀಡಿದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *