ವಾರ್ಡ್ 50 ರಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ…

ವಾರ್ಡ್ 50 ರಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ…

  • Politics
  • August 27, 2024
  • No Comment
  • 221

ಮೈಸೂರು,ಆ27,Tv10 ಕನ್ನಡ

ವಲಯ 1 ರ ವ್ಯಾಪ್ತಿಯ ನಗರಪಾಲಿಕೆ 50 ನೇ ವಾರ್ಡ್ ವ್ಯಾಪ್ತಿಯ ಸುಣ್ಣದಕೇರಿ ಹಾಗೂ ಬೆಸ್ತರಗೇರಿ ಭಾಗದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಇಂದು ಪಾದಯಾತ್ರೆ ನಡೆಸಿ ಸ್ಥಳೀಯ ನಿವಾಸಿಗಳ ಸಮಸ್ಯೆ ಆಲಿಸಿ ಕೂಡಲೇ ಬಗೆಹರಿಸುವ ಭರವಸೆ ನೀಡಿದರು.
ಸುಣ್ಣದಕೇರಿಯ 4 ನೇ ಕ್ರಾಸ್‌ನಿಂದ 9 ನೇ ಕ್ರಾಸ್‌ವರೆಗೆ ಪಾದಯಾತ್ರೆ ನಡೆಸಿ ನಿವಾಸಿಗಳು ಕುಂದು-ಕೊರತೆ ಆಲಿಸಿದರು. ಈ ವೇಳೆ ಕಳೆದ 2_3 ದಿನಗಳಿಂದ ಸುಣ್ಣದಕೇರಿಗೆ ನೀರು ಸರಬರಾಜಿನಲ್ಲಿ ತೊಂದರೆಯಾಗಿದೆ. ಒಳಚರಂಡಿ ವ್ಯವಸ್ಥೆ ಸರಿಯಿಲ್ಲ.ಕೆಲ ರಸ್ತೆಗಳು ಹಾಳಾಗಿವೆ. ಪಾಲಿಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೂಡಲೇ ಕುಡಿಯುವ ನೀರು ಸರಬರಾಜು ಮಾಡಿ ಎಂದು ಮನವಿ ಮಾಡಿದರು.
ನಿವಾಸಿಗಳಿಗೆ ಮನವಿಗೆ ಸ್ಪಂದಿಸಿದ ಶಾಸಕರು, ನೀರು ಸರಬರಾಜಿನ ಪೈಪ್‌ಲೈನ್ ವಾಲ್ವ್ ಬ್ಲಾಕ್ ಆಗಿರುವುದರಿಂದ ಸರಬರಾಜಿನಲ್ಲಿ ತೊಂದರೆಯಾಗಿದೆ. ಕೂಡಲೇ ದುರಸ್ಥಿ ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.ನಂತರ ಸುಣ್ಣದಕೇರಿ 7 ಮತ್ತು 9 ಕ್ರಾಸ್ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿ, ಕಾಂಕ್ರೀಟ್ ರಸ್ತೆ ಅಭಿವೃದ್ಧಿಯಲ್ಲಿ ಯಾವುದೇ ಲೋಪವಾಗಬಾರದು ಎಂದು ಗುತ್ತಿಗೆದಾರರಿಗೆ ಎಚ್ಚರಿಸಿದರು.

ಪಾಲಿಕೆ ಎಇಇ ಧನುಷ್, ಎಇ ಪ್ರಶಾಂತ್, ವಾಟರ್ ಇನ್ಸ್‌ಫೆಕ್ಟರ್ ಮಧು, ಬಿಜೆಪಿ ಮುಖಂಡರಾದ ಜೋಗಿ ಮಂಜು, ಕೃಷ್ಣನಾಯಕ, ಜೋಗಪ್ಪ, ರಾಕೇಶ್‌ಗೌಡ, ಲೋಕೇಶ್, ಜಯಸಿಂಹ, ಜಗದೀಶ್, ರಾಜೇಶ್, ಪ್ರದೀಪ್, ಕಿಶೋರ್,ಕೀರ್ತಿ, ಸ್ಥಳೀಯ ನಿವಾಸಿಗಳಾದ ದಾಸಪ್ಪ, ಅಶ್ವಥ್, ಮಹೇಶ್ ನಾಯಕ್ ಮತ್ತಿತರರು ಸಾಥ್ ನೀಡಿದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *