ಬೀದಿ ಪಾಲಾಗಿದ್ದ ಸಾಧುಸಂತನ ನೆರವಿಗೆ ಧಾವಿಸಿದ SDPI ಮುಖಂಡರು…ಆಶ್ರಯ ಕಲ್ಪಿಸಿ ಮಾನವೀಯತೆ…

ಬೀದಿ ಪಾಲಾಗಿದ್ದ ಸಾಧುಸಂತನ ನೆರವಿಗೆ ಧಾವಿಸಿದ SDPI ಮುಖಂಡರು…ಆಶ್ರಯ ಕಲ್ಪಿಸಿ ಮಾನವೀಯತೆ…

ಮೈಸೂರು,ಆ30,Tv10 ಕನ್ನಡ

ಬಾಡಿಗೆ ನೀಡದ ಹಿನ್ನಲೆ ಮನೆಯಿಂದ ಹೊರದೂಡಿ ಬೀದಿ ಪಾಲಾಗಿದ್ದ ಸಾಧು ಸಂತನ ನೆರವಿಗೆ SDPI ಮುಖಂಡರು ಧಾವಿಸಿ ಆಶ್ರಯ ನೀಡಿ ಮಾನವೀಯತೆ ಪ್ರದರ್ಶಿಸಿದ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.SDPI ಸಂಘಟನೆಯ ಮುಖಂಡರಾದ ಅಮೀನ್ ಸೇಠ್ ಹಾಗೂ ಜಭಿ ಎಂಬುವರು ಸಾಧುಸಂತನ ಪರಿಸ್ಥಿತಿಗೆ ಮರುಗಿ ನೆರವಿಗೆ ಧಾವಿಸಿದವರು.ಬೀದಿಪಾಲಾಗಿದ್ದ ವೃದ್ದ ಸಾಧುಸಂತನಿಗೆ ಮತ್ತೆ ಮನೆ ಮಾಲೀಕರ ಮನ ಒಲಿಸಿ ಆಶ್ರಯ ಕಲ್ಪಿಸುವ ಮೂಲಕ ಮಾನವೀಯತೆ ಪ್ರದರ್ಶಿಸಿದ್ದಾರೆ.

ಮೈಸೂರಿನ ನೆಹರು ನಗರದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.ವಾಸು ಎಂಬ ವೃದ್ದ ಸಾಧು ಸಂತರೊಬ್ಬರು ಬೀದಿ ಪಾಲಾಗಿದ್ದರು.ಶ್ರೀನಿವಾಸ್ ಎಂಬುವರ ಮನೆಯಲ್ಲಿ ವಾಸು ಬಾಡಿಗೆಯಲ್ಲಿದ್ದರು.ದೇವಾಲಯಗಳಲ್ಲಿ ಪೂಜೆಗಳನ್ನ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ವಾಸು ರವರು 6 ತಿಂಗಳ ಹಿಂದೆ ಪಾರ್ಶ್ವವಾಯು ರೋಗಕ್ಕೆ ತುತ್ತಾದರು.ಆಗಿನಿಂದ ಓಡಾಡಲು ಶಕ್ತಿ ಇಲ್ಲದ ಕಾರಣ ವರಮಾನ ಸ್ಥಗಿತವಾಗಿತ್ತು.ಈ ಹಿನ್ನಲೆ ಬಾಡಿಗೆ ನೀಡಲು ಅಶಕ್ತರಾದರು.ಇದರಿಂದಾಗಿ ಮನೆ ಮಾಲೀಕರು ಇಂದು ಬೆಳಿಗ್ಗೆ ವಾಸು ರವರನ್ನ ಮನೆಯಿಂದ ಹೊರಹಾಕಿದ್ದರು.ಆಶ್ರಯವಿಲ್ಲದ ವಾಸು ಬೀದಿಯಲ್ಲಿ ಅನಾಥವಾಗಿ ಕಂಡುಬಂದರು.ಈ ಮಾಹಿತಿ ಅರಿತ SDPI ಸಂಘಟನೆಯ ಮುಖಂಡರು ವಾಸು ರವರ ನೆರವಿಗೆ ಧಾವಿಸಿದ್ದಾರೆ.ವಾಸು ರವರಿಂದ ಮಾಹಿತಿ ಪಡೆದು ನಂತರ ಮನೆ ಮಾಲೀಕ ಶ್ರೀನಿವಾಸ್ ರವರ ಮನ ಒಲಿಸಿ ಮತ್ತೆ ಮನೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೀಘ್ರದಲ್ಲಿ ವಾಸು ರವರನ್ನ ವೃದ್ದಾಶ್ರಮಕ್ಕೆ ಸೇರಿಸಲು ನಿರ್ಧರಿಸಿದ್ದಾರೆ.ಕೋಮು ಸಂಘರ್ಷಗಳ ಪ್ರಕರಣಗಳ ಮಧ್ಯೆ SDPI ಮುಖಂಡರ ಈ ಮಾನವೀಯತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.ನಾವೆಲ್ಲಾ ಒಂದೇ ಎಂಬ ಸಂದೇಶವನ್ನ ಈ ಮುಖಂಡರು ಧ್ವೇಷಗಳನ್ನ ಬಿತ್ತುವ ಕಿಡಿಗೇಡಿಗಳಿಗೆ ಈ ಪ್ರಕರಣದ ಮೂಲಕ ರವಾನಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *