ಗಜಪಡೆಗೆ ಭಾರ ಹೊರುವ ತಾಲೀಮು…600 ಕೆಜಿ ಮರಳು ಮೂಟೆ ಹೊತ್ತು ಸಾಗಿದ ಅಭಿಮನ್ಯು…

ಗಜಪಡೆಗೆ ಭಾರ ಹೊರುವ ತಾಲೀಮು…600 ಕೆಜಿ ಮರಳು ಮೂಟೆ ಹೊತ್ತು ಸಾಗಿದ ಅಭಿಮನ್ಯು…

ಮೈಸೂರು,ಸೆ1,Tv10 ಕನ್ನಡದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ.ಕಾಡಿನಿಂದ ನಾಡಿಗೆ ಬಂದ ಗಜಪಡೆ ದಸರಾ ಯಶಸ್ವಿಗೆ ಸಜ್ಜಾಗುತ್ತಿದೆ.ಈಗಾಗಲೇ ತಾಲೀಮು ಆರಂಭಿಸಿರುವ ಅಭಿಮನ್ಯು ಅಂಡ್ ಟೀಂ ಜಂಬೂಸವಾರಿಗೆ ಫಿಟ್ ಎಂದು ಹೇಳುತ್ತಿದೆ.ಇಂದು ಗಜಪಡೆಗೆ ಭಾರಹೊರೆಸಿ ತಾಲೀಮು ನಡೆಸಲಾಗಿದೆ.ಜಂಬೂಸವಾರಿ ಮೆರವಣಿಗೆ ದಿನ ಕ್ಯಾಪ್ಟನ್ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡ ದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಐದು ಕಿಲೋಮೀಟರ್ ದೂರ ಸಾಗಲಿದ್ದಾನೆ. ಈ ಹಿನ್ನೆಲೆಯಲ್ಲಿ ಅಭಿಮನ್ಯುಗೆ ಭಾರ ಹೊರೆಸಿ ತಾಲೀಮು ನೀಡಲಾಗಿದೆ.ಮೊದಲ ದಿನವಾದ ಇಂದು ಅಭಿಮನ್ಯು 600 ಕೆಜಿ ತೂಕ ಹೊತ್ತು ಸಾಗಿದ್ದಾನೆ.ಅಭಿಮನ್ಯು ಸೇರಿದಂತೆ ಇತರ ಆನೆಗಳಿಗೂ ಭಾರ ಹೊರುವ ತಾಲೀಮು ನೀಡಲಾಗುತ್ತದೆ.
ಮೈಸೂರು ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಗಜಪಡೆ ಶೆಡ್ ನಲ್ಲಿ ಇಂದು ಬೆಳಿಗ್ಗೆ 7.30ಕ್ಕೆ ಪೂಜೆ ಸಲ್ಲಿಸಿ ಆನಂತರ ಅಭಿಮನ್ಯು ಮೇಲೆ 600 ಕೆಜಿ ತೂಕದ ಮರಳಿನ ಮೂಟೆಯನ್ನು ಹೊರಿಸಿ ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗೂ ತಾಲೀಮು ನಡೆಸಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *