ಮಹಿಳೆ ಬಲತ್ಕಾರಕ್ಕೆ ಯತ್ನ…ಗಂಡನ ಮುಂದೆಯೇ ಕೃತ್ಯ…ದೃಶ್ಯಗಳನ್ನ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟ ಪತಿರಾಯ…

ಮಹಿಳೆ ಬಲತ್ಕಾರಕ್ಕೆ ಯತ್ನ…ಗಂಡನ ಮುಂದೆಯೇ ಕೃತ್ಯ…ದೃಶ್ಯಗಳನ್ನ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟ ಪತಿರಾಯ…

ಮೈಸೂರು,ಸೆ4,Tv10 ಕನ್ನಡ

ಪತ್ನಿಯ ಮೇಲೆ ಮತ್ತೊಬ್ಬ ವ್ಯಕ್ತಿ ಬಲತ್ಕಾರಕ್ಕೆ ಯತ್ನಿಸಿದ ದೃಶ್ಯಗಳನ್ನ ಪತಿರಾಯನೇ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟ ಪ್ರಕರಣವೊಂದು ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಭಂಧ ಪತ್ನಿ ತನ್ನ ಪತಿ ಅಬ್ದುಲ್ ಫಾರೂಖ್,ನಜೀರ್ ಮಹಮದ್ ಹನೀಫಾ ಸೇರಿದಂತೆ 9 ಮಂದಿ ವಿರುದ್ದ FIR ದಾಖಲಿಸಿದ್ದಾರೆ.

ಮೈಸೂರಿನ ಕಲ್ಯಾಣಗಿರಿಯಲ್ಲಿ ವಾಸವಿರುವ ಮುನ್ನಿ(ಹೆಸರು ಬದಲಿಸಲಾಗಿದೆ) ಗಂಡನ ಕಿರುಕುಳಕ್ಕೆ ಒಳಗಾದ ಮಹಿಳೆ.19 ವರ್ಷಗಳ ಹಿಂದೆ ಮುನ್ನಿ ಹಾಗೂ ಅಬ್ದುಲ್ ಫಾರೂಖ್ ವಿವಾಹವಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.ಅಬ್ದುಲ್ ಫಾರೂಖ್ ಮತ್ತೊಬ್ಬ ಮಹಿಳೆ ಜೊತೆ ಸಂಭಂಧ ಬೆಳೆಸಿ ಪತ್ನಿಯನ್ನ ನಿರ್ಲಕ್ಷಿಸಿದ್ದಾನೆ.ಜೀವನೋಪಾಯಕ್ಕಾಗಿ ಮುನ್ನಿ ಹೈದರಾಬಾದ್ ಗೆ ತೆರಳಿ ನಂತರ ಮೈಸೂರಿಗೆ ಹಿಂದಿರುಗಿ ಕಲ್ಯಾಣಗಿರಿಯಲ್ಲಿ ಮನೆ ಬಾಡಿಗೆ ಪಡೆದುಕೊಂಡಿದ್ದಾರೆ.ಜೀವನಾಂಶಕ್ಕಾಗಿ ಮುನ್ನಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.ಜೀವನಾಂಶ ನೀಡುವಂತೆ ನ್ಯಾಯಾಲಯ ಆದೇಶ ನೀಡಿದ್ದರೂ ಅಬ್ದುಲ್ ಫಾರೂಖ್ ಪಾಲಿಸಿಲ್ಲ.ಜೀವನೋಪಾಯಕ್ಕಾಗಿ ಮುನ್ನಿ ಸಾಕಷ್ಟು ಸಾಲ ಮಾಡಿದ್ದಾರೆ.ಎರಡು ತಿಂಗಳ ಹಿಂದೆ ಸಾಲದ ಹಣ ಪಡೆಯಲು ಹರ್ಷದ್ ಖಾನ್ ಎಂಬಾತ ಮನೆಗೆ ಬಂದಿದ್ದಾನೆ.ಈ ವೇಳೆ ಮನೆಗೆ ನುಗ್ಗಿದ ಅಬ್ದುಲ್ ಫಾರೂಖ್,ನಾಸಿರ್,ಮಹಮದ್ ಹನೀಫ್ ಹಾಗೂ ಇತರರು ಮುನ್ನಿ ಹಾಗೂ ಹರ್ಷದ್ ಖಾನ್ ಮೇಲೆ ಹಲ್ಲೆ ನಡೆಸಿದ್ದಾರೆ.ನಂತರ ಮುನ್ನಿ ರವರ ಬಟ್ಟೆಗಳನ್ನ ಹರಿದುಹಾಕಿ ವಿಡಿಯೋ ಚಿತ್ರೀಕರಿಸಿದ್ದಾರೆ.ಅಬ್ದುಲ್ ಫಾರೂಖ್ ಜೊತೆ ಬಂದಿದ್ದ ನಾಜಿರ್ ಎಂಬಾತ ಮುನ್ನಿ ಮೇಲೆ ಎರಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.ಈ ದೃಶ್ಯಗಳನ್ನ ಪತಿ ಅಬ್ದುಲ್ ಫಾರೂಖ್ ತನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾನೆ.ಕೆಲ ಸಮಯದಲ್ಲಿ ವಿಡಿಯೋ ಡಿಲೀಟ್ ಮಾಡಿ ನಂತರ ಎಡಿಡ್ ಮಾಡಿ ಮತ್ತೆ ಅಪ್ ಲೋಡ್ ಮಾಡಿ ಪತ್ನಿಯನ್ನ ತೇಜೋವಧೆ ಮಾಡಿದ್ದಾನೆ.ಈ ಎಲ್ಲ ಬೆಳವಣಿಗೆಯಿಂದ ನೊಂದ ಮುನ್ನಿ ಉದಯಗಿರಿ ಠಾಣೆಗೆ ದೂರು ನೀಡಿದ್ದಾರೆ.ಎರಡು ತಿಂಗಳ ನಂತರ ಉದಯಗಿರಿ ಠಾಣೆ ಪೊಲೀಸರು ಅಬ್ದುಲ್ ಫಾರೂಕ್, ನ ಜೀರ್,ಮಹಮದ್ ಹನೀಫ್ ಹಾಊ 6 ಮಂದಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *