ಮಹಿಳೆ ಬಲತ್ಕಾರಕ್ಕೆ ಯತ್ನ…ಗಂಡನ ಮುಂದೆಯೇ ಕೃತ್ಯ…ದೃಶ್ಯಗಳನ್ನ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟ ಪತಿರಾಯ…

ಮಹಿಳೆ ಬಲತ್ಕಾರಕ್ಕೆ ಯತ್ನ…ಗಂಡನ ಮುಂದೆಯೇ ಕೃತ್ಯ…ದೃಶ್ಯಗಳನ್ನ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟ ಪತಿರಾಯ…

ಮೈಸೂರು,ಸೆ4,Tv10 ಕನ್ನಡ

ಪತ್ನಿಯ ಮೇಲೆ ಮತ್ತೊಬ್ಬ ವ್ಯಕ್ತಿ ಬಲತ್ಕಾರಕ್ಕೆ ಯತ್ನಿಸಿದ ದೃಶ್ಯಗಳನ್ನ ಪತಿರಾಯನೇ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟ ಪ್ರಕರಣವೊಂದು ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಭಂಧ ಪತ್ನಿ ತನ್ನ ಪತಿ ಅಬ್ದುಲ್ ಫಾರೂಖ್,ನಜೀರ್ ಮಹಮದ್ ಹನೀಫಾ ಸೇರಿದಂತೆ 9 ಮಂದಿ ವಿರುದ್ದ FIR ದಾಖಲಿಸಿದ್ದಾರೆ.

ಮೈಸೂರಿನ ಕಲ್ಯಾಣಗಿರಿಯಲ್ಲಿ ವಾಸವಿರುವ ಮುನ್ನಿ(ಹೆಸರು ಬದಲಿಸಲಾಗಿದೆ) ಗಂಡನ ಕಿರುಕುಳಕ್ಕೆ ಒಳಗಾದ ಮಹಿಳೆ.19 ವರ್ಷಗಳ ಹಿಂದೆ ಮುನ್ನಿ ಹಾಗೂ ಅಬ್ದುಲ್ ಫಾರೂಖ್ ವಿವಾಹವಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.ಅಬ್ದುಲ್ ಫಾರೂಖ್ ಮತ್ತೊಬ್ಬ ಮಹಿಳೆ ಜೊತೆ ಸಂಭಂಧ ಬೆಳೆಸಿ ಪತ್ನಿಯನ್ನ ನಿರ್ಲಕ್ಷಿಸಿದ್ದಾನೆ.ಜೀವನೋಪಾಯಕ್ಕಾಗಿ ಮುನ್ನಿ ಹೈದರಾಬಾದ್ ಗೆ ತೆರಳಿ ನಂತರ ಮೈಸೂರಿಗೆ ಹಿಂದಿರುಗಿ ಕಲ್ಯಾಣಗಿರಿಯಲ್ಲಿ ಮನೆ ಬಾಡಿಗೆ ಪಡೆದುಕೊಂಡಿದ್ದಾರೆ.ಜೀವನಾಂಶಕ್ಕಾಗಿ ಮುನ್ನಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.ಜೀವನಾಂಶ ನೀಡುವಂತೆ ನ್ಯಾಯಾಲಯ ಆದೇಶ ನೀಡಿದ್ದರೂ ಅಬ್ದುಲ್ ಫಾರೂಖ್ ಪಾಲಿಸಿಲ್ಲ.ಜೀವನೋಪಾಯಕ್ಕಾಗಿ ಮುನ್ನಿ ಸಾಕಷ್ಟು ಸಾಲ ಮಾಡಿದ್ದಾರೆ.ಎರಡು ತಿಂಗಳ ಹಿಂದೆ ಸಾಲದ ಹಣ ಪಡೆಯಲು ಹರ್ಷದ್ ಖಾನ್ ಎಂಬಾತ ಮನೆಗೆ ಬಂದಿದ್ದಾನೆ.ಈ ವೇಳೆ ಮನೆಗೆ ನುಗ್ಗಿದ ಅಬ್ದುಲ್ ಫಾರೂಖ್,ನಾಸಿರ್,ಮಹಮದ್ ಹನೀಫ್ ಹಾಗೂ ಇತರರು ಮುನ್ನಿ ಹಾಗೂ ಹರ್ಷದ್ ಖಾನ್ ಮೇಲೆ ಹಲ್ಲೆ ನಡೆಸಿದ್ದಾರೆ.ನಂತರ ಮುನ್ನಿ ರವರ ಬಟ್ಟೆಗಳನ್ನ ಹರಿದುಹಾಕಿ ವಿಡಿಯೋ ಚಿತ್ರೀಕರಿಸಿದ್ದಾರೆ.ಅಬ್ದುಲ್ ಫಾರೂಖ್ ಜೊತೆ ಬಂದಿದ್ದ ನಾಜಿರ್ ಎಂಬಾತ ಮುನ್ನಿ ಮೇಲೆ ಎರಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.ಈ ದೃಶ್ಯಗಳನ್ನ ಪತಿ ಅಬ್ದುಲ್ ಫಾರೂಖ್ ತನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾನೆ.ಕೆಲ ಸಮಯದಲ್ಲಿ ವಿಡಿಯೋ ಡಿಲೀಟ್ ಮಾಡಿ ನಂತರ ಎಡಿಡ್ ಮಾಡಿ ಮತ್ತೆ ಅಪ್ ಲೋಡ್ ಮಾಡಿ ಪತ್ನಿಯನ್ನ ತೇಜೋವಧೆ ಮಾಡಿದ್ದಾನೆ.ಈ ಎಲ್ಲ ಬೆಳವಣಿಗೆಯಿಂದ ನೊಂದ ಮುನ್ನಿ ಉದಯಗಿರಿ ಠಾಣೆಗೆ ದೂರು ನೀಡಿದ್ದಾರೆ.ಎರಡು ತಿಂಗಳ ನಂತರ ಉದಯಗಿರಿ ಠಾಣೆ ಪೊಲೀಸರು ಅಬ್ದುಲ್ ಫಾರೂಕ್, ನ ಜೀರ್,ಮಹಮದ್ ಹನೀಫ್ ಹಾಊ 6 ಮಂದಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *