ವರದಕ್ಷಿಣೆ ಕಿರುಕುಳ…ಗೃಹಿಣಿ ನೇಣಿಗೆ…ಗಂಡ,ಅತ್ತೆ ವಿರುದ್ದ FIR ದಾಖಲು…

ವರದಕ್ಷಿಣೆ ಕಿರುಕುಳ…ಗೃಹಿಣಿ ನೇಣಿಗೆ…ಗಂಡ,ಅತ್ತೆ ವಿರುದ್ದ FIR ದಾಖಲು…

ಮೈಸೂರು,ಸೆ4,Tv10 ಕನ್ನಡಗಂಡನ ಮನೆಯವರ ವರದಕ್ಷಿಣೆ ದಾಹಕ್ಕೆ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಬೆಳಬಾಡಿ ಗ್ರಾಮದಲ್ಲಿ ನಡೆದಿದೆ.ವರದಕ್ಷಿಣೆ ತರುವಂತೆ ಪೀಡಿಸಿದ ಗಂಡ ಮಹೇಶ್ ಹಾಗೂ ಅತ್ತೆ ರತ್ನಮ್ಮ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳವಾಡಿ ಗ್ರಾಮದ ಶಿಲ್ಪಾ (22) ವರದಕ್ಷಿಣೆ ಕಿರುಕುಳಕ್ಕೆ ಸಾವನ್ನಪ್ಪಿದ ದುರ್ದೈವಿ.2021 ರಲ್ಲಿ ಶಿಲ್ಪಾ ಹಾಗೂ ಮಹೇಶ್ ವಿವಾಹ ನೆರವೇರಿತ್ತು.ಪರಿಚಿತರೊಬ್ಬ ಮೂಲಕ ಸಂಭಂಧ ಬಂದಿದ್ದು ಮದುವೆ ಸಮಯದಲ್ಲಿ ವರದಕ್ಷಿಣೆ ನಿರಾಕರಿಸಿದ್ದರು.ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ವರದಕ್ಷಿಣೆ ಪಡೆಯುವುದಾಗಿ ತಿಳಿಸಿದ್ದು ಸಧ್ಯ ಮದುವೆ ಮಾಡಿಕೊಡುವಂತೆ ಒಪ್ಪಿಸಿದ್ದರು.ರಾಮನಗರದ ಬಿಡದಿ ನಿವಾಸಿ ಮಹೇಶ್ ರವರ ನಿವಾಸದ ಬಳಿ ಮದುವೆ ನೆರವೇರಿತ್ತು.ಪ್ರಾರಂಭದಲ್ಲಿ ಅನ್ಯೋನ್ಯತೆಯಿಂದ ನೋಡಿಕೊಂಡ ಪತಿ ಮನೆಯವರು ನಂತರ ವರದಕ್ಷಿಣೆಗಾಗಿ ಬೇಡಿಕೆ ಇಟ್ಟರು.ಶಿಲ್ಪಾ ತಾಯಿ ಲಕ್ಷ್ಮಮ್ಮ ಕೂಲಿ ಕೆಲಸ ಮಾಡಿ ಸಂಸಾರ ನಡೆಸುತ್ತಿದ್ದರು.ಹೀಗಿದ್ದೂ ಹಣ ಹೊಂದಿಸಿ ಚಿನ್ನ ಕೊಡಿಸಿದ್ದರು.ಈ ಮಧ್ಯೆ ಶಿಲ್ಪ ಗಂಡು ಮಗುವಿಗೆ ಜನ್ಮ ನೀಡಿದ್ದರು.ಈ ಸಮಯದಲ್ಲೂ ವರದಕ್ಷಿಣೆ ನೀಡುವಂತೆ ಮಹೇಶ್ ಹಾಗೂ ಈತನ ತಾಯಿ ರತ್ನಮ್ಮ ಒತ್ತಾಯಿಸಿದ್ದರು.ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಶಿಲ್ಪ ಕೆಲವು ದಿನಗಳ ಹಿಂದೆ ತವರು ಮನೆ ಸೇರಿದ್ದರು.ಲಕ್ಷ್ಮಮ್ಮ ರವರ ಹೆಸರಿನಲ್ಲಿದ್ದ ಹಳೆ ಮನೆಯನ್ನ ಮಹೇಶ್ ಹೆಸರಿಗೆ ಬರೆದುಕೊಡುವಂತೆ ಒತ್ತಡ ಹಾಕಿದ್ದರು.ಹೀಗಾಗಿ ವರದಕ್ಷಿಣೆ ಕೊಟ್ಟಲ್ಲಿ ಮಾತ್ರ ಅತ್ತೆ ಮನೆಯಲ್ಲಿ ನೆಮ್ಮದಿ ಎಂದು ತಾಯಿ ಜೊತೆ ಆಗಾಗ ಶಿಲ್ಪ ಹೇಳುತ್ತಿದ್ದಳು.ಗಂಡನ ಜೊತೆ ಬಾಳುವಂತೆ ತಾಯಿ ಸಹ ಬುದ್ದಿವಾದ ಹೇಳಿದ್ದರು.ಸೆಪ್ಟೆಂಬರ್ 1 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಶಿಲ್ಪ ನೇಣಿಗೆ ಶರಣಾಗಿದ್ದಾಳೆ.ಶಿಲ್ಪ ಸಾವಿಗೆ ವರದಕ್ಷಿಣೆ ಕಿರುಕುಳ ಎಂದು ಆರೋಪಿಸಿರುವ ತಾಯಿ ಲಕ್ಷ್ಮಮ್ಮ ವಿಜಯನಗರ ಪೊಲೀಸ್ ಠಾಣೆಯಲ್ಲಿ ಅಳಿಯ ಮಹೇಶ್ ಹಾಗೂ ತಾಯಿ ರತ್ನಮ್ಮ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *