ಕಳುವು ಮಾಡಿದ ಚಿನ್ನಾಭರಣ ಮಾರಾಟ ಮಾಡಿಸಲು ಯತ್ನ… ಮುಖ್ಯಪೇದೆ ಸೇರಿದಂತೆ ಇಬ್ಬರು ಮನೆಗಳ್ಳರು ಪೊಲೀಸರ ವಶಕ್ಕೆ…

ಕಳುವು ಮಾಡಿದ ಚಿನ್ನಾಭರಣ ಮಾರಾಟ ಮಾಡಿಸಲು ಯತ್ನ… ಮುಖ್ಯಪೇದೆ ಸೇರಿದಂತೆ ಇಬ್ಬರು ಮನೆಗಳ್ಳರು ಪೊಲೀಸರ ವಶಕ್ಕೆ…

ಮೈಸೂರು,ಸೆ5,Tv10 ಕನ್ನಡ

ಕಳುವು ಮಾಡಿದ ಚಿನ್ನಾಭರಣಗಳನ್ನ ಸ್ವೀಕರಿಸಿ ಮಾರಾಟ ಮಾಡಿಸಲು ಯತ್ನಿಸಿದ ಆರೋಪದ ಮೇಲೆ ಮುಖ್ಯಪೇದೆಯನ್ನ ಮಂಡಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ಮನೆಗಳ್ಳರು ಸೇರಿದಂತೆ ಮೂವರ ವಿರುದ್ದ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಶೋಕ ಪುರಂ ಪೊಲೀಸ್ ಠಾಣೆಯ ಮುಖ್ಯಪೇದೆ ರಾಜು ಮೇಲೆ ಆರೋಪ ಕೇಳಿ ಬಂದಿದೆ. ಇಬ್ಬರು ಮನೆಗಳ್ಳರಾದ ನಜರುಲ್ಲಾ ಬಾಬು ಮತ್ತು ಅಲೀಂ ಮೇಲೆ ಈಗಾಗಲೇ ಪ್ರಕರಣ ದಾಖಲಾಗಿದೆ. ಮೈಸೂರಿನ ವಿವಿದ ಪೊಲೀಸ್ ಠಾಣೆಗಳಲ್ಲಿ ನಡೆದ ಮನೆಗಳುವು ಪ್ರಕರಣಗಳಿಗೆ ಸಂಭಂಧಿಸಿದಂತೆ ಸುಮಾರು 400 ಗ್ರಾಂ ಚಿನ್ನಾಭರಣಗಳನ್ನ ವಶಪಡಿಸಿಕೊಳ್ಳಲಾಗಿದೆ.ಈ ಪೈಕಿ ಮುಖ್ಯಪೇದೆ ರಾಜು ಸುಮಾರು 300 ಗ್ರಾಂ ಚಿನ್ನಾಭರಣವನ್ನ ಸ್ವೀಕರಿಸಿದ್ದರೆಂದು ಹೇಳಲಾಗಿದೆ.

ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳುವು ಪ್ರಕರಣವೊಂದರಲ್ಲಿ ನಜರುಲ್ಲಾ ಬಾಬು ಹಾಗೂ ಅಲೀಂ ಸಿಕ್ಕಿಬಿದ್ದಿದ್ದರು.ವಿಚಾರಣೆ ವೇಳೆ ಆರೋಪಿಗಳು ದೇವರಾಜ,ಶ್ರೀರಂಗಪಟ್ಟಣ ಹಾಗೂ ಇನ್ನಿತರ ಪೊಲೀಸ್ ಠಾಣೆಯಲ್ಲಿ ಕಳುವು ಮಾಡಿದ ಬಗ್ಗೆ ಒಪ್ಪಿಕೊಂಡಿದ್ದು ಸುಮಾರು 400 ಗ್ರಾಂ ಚಿನ್ನಾಭರಣ ಕಳುವು ಮಾಡಿರುವ ಮಾಹಿತಿನೀಡಿದ್ದರು.ಅಚ್ಚರಿಯ ಸಂಗತಿ ಏನೆಂದರೆ ಕಳುವು ಮಾಡಿದ 400 ಗ್ರಾಂ ಚಿನ್ನಾಭರಣಗಳ ಪೈಕಿ ಸುಮಾರು 300 ಗ್ರಾಂ ಮುಖ್ಯಪೇದೆ ರಾಜು ಪಡೆದಿದ್ದರೆಂದು ವಿಚಾರಣೆ ವೇಳೆ ತಿಳಿದು ಬಂದಿದೆ.ಕೂಡಲೇ ಎಚ್ಚೆತ್ತ ಮಂಡಿ ಠಾಣೆ ಪೊಲೀಸರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹಾಗೂ ಡಿಸಿಪಿ ರವರಾದ ಮುತ್ತುರಾಜ್ ಮತ್ತು ಜಾಹ್ನವಿ ರವರ ಗಮನಕ್ಕೆ ತಂದಿದ್ದಾರೆ.ಮುಖ್ಯಪೇದೆ ರಾಜು ನನ್ನು ವಿಚಾರಣೆಗೆ ಒಳಪಡಿಸಿದಾಗ ಚಿನ್ನಾಭರಣ ಪಡೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಆದೇಶದಂತೆ ಇಬ್ಬರು ಮನೆಗಳ್ಳರು ಹಾಗೂ ಮುಖ್ಯಪೇದೆ ರಾಜು ಮೇಲೆ ಮಂಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕಳುವು ಮಾಲನ್ನ ವಶಪಡಿಸಿಕೊಂಡಿದ್ದಾರೆ.

ಮುಖ್ಯಪೇದೆ ರಾಜು ಈ ಹಿಂದೆ ಸಹ ಹಲವು ಪ್ರಕರಣಗಳಲ್ಲಿ ಶಾಮೀಲಾದ ಹಿನ್ನಲೆ ಜೈಲುವಾಸ ಅನುಭವಿಸಿದ್ದನೆಂದು ಹೇಳಲಾಗಿದೆ.ಮತ್ತು ಚೆಕ್ ಬೌನ್ಸ್ ಪ್ರಕರಣಗಳು ಸಹ ಇದೆ ಎಂದು ಹೇಳಲಾಗುತ್ತಿದೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *