ಕಳುವು ಮಾಡಿದ ಚಿನ್ನಾಭರಣ ಮಾರಾಟ ಮಾಡಿಸಲು ಯತ್ನ… ಮುಖ್ಯಪೇದೆ ಸೇರಿದಂತೆ ಇಬ್ಬರು ಮನೆಗಳ್ಳರು ಪೊಲೀಸರ ವಶಕ್ಕೆ…

ಕಳುವು ಮಾಡಿದ ಚಿನ್ನಾಭರಣ ಮಾರಾಟ ಮಾಡಿಸಲು ಯತ್ನ… ಮುಖ್ಯಪೇದೆ ಸೇರಿದಂತೆ ಇಬ್ಬರು ಮನೆಗಳ್ಳರು ಪೊಲೀಸರ ವಶಕ್ಕೆ…

ಮೈಸೂರು,ಸೆ5,Tv10 ಕನ್ನಡ

ಕಳುವು ಮಾಡಿದ ಚಿನ್ನಾಭರಣಗಳನ್ನ ಸ್ವೀಕರಿಸಿ ಮಾರಾಟ ಮಾಡಿಸಲು ಯತ್ನಿಸಿದ ಆರೋಪದ ಮೇಲೆ ಮುಖ್ಯಪೇದೆಯನ್ನ ಮಂಡಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ಮನೆಗಳ್ಳರು ಸೇರಿದಂತೆ ಮೂವರ ವಿರುದ್ದ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಶೋಕ ಪುರಂ ಪೊಲೀಸ್ ಠಾಣೆಯ ಮುಖ್ಯಪೇದೆ ರಾಜು ಮೇಲೆ ಆರೋಪ ಕೇಳಿ ಬಂದಿದೆ. ಇಬ್ಬರು ಮನೆಗಳ್ಳರಾದ ನಜರುಲ್ಲಾ ಬಾಬು ಮತ್ತು ಅಲೀಂ ಮೇಲೆ ಈಗಾಗಲೇ ಪ್ರಕರಣ ದಾಖಲಾಗಿದೆ. ಮೈಸೂರಿನ ವಿವಿದ ಪೊಲೀಸ್ ಠಾಣೆಗಳಲ್ಲಿ ನಡೆದ ಮನೆಗಳುವು ಪ್ರಕರಣಗಳಿಗೆ ಸಂಭಂಧಿಸಿದಂತೆ ಸುಮಾರು 400 ಗ್ರಾಂ ಚಿನ್ನಾಭರಣಗಳನ್ನ ವಶಪಡಿಸಿಕೊಳ್ಳಲಾಗಿದೆ.ಈ ಪೈಕಿ ಮುಖ್ಯಪೇದೆ ರಾಜು ಸುಮಾರು 300 ಗ್ರಾಂ ಚಿನ್ನಾಭರಣವನ್ನ ಸ್ವೀಕರಿಸಿದ್ದರೆಂದು ಹೇಳಲಾಗಿದೆ.

ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳುವು ಪ್ರಕರಣವೊಂದರಲ್ಲಿ ನಜರುಲ್ಲಾ ಬಾಬು ಹಾಗೂ ಅಲೀಂ ಸಿಕ್ಕಿಬಿದ್ದಿದ್ದರು.ವಿಚಾರಣೆ ವೇಳೆ ಆರೋಪಿಗಳು ದೇವರಾಜ,ಶ್ರೀರಂಗಪಟ್ಟಣ ಹಾಗೂ ಇನ್ನಿತರ ಪೊಲೀಸ್ ಠಾಣೆಯಲ್ಲಿ ಕಳುವು ಮಾಡಿದ ಬಗ್ಗೆ ಒಪ್ಪಿಕೊಂಡಿದ್ದು ಸುಮಾರು 400 ಗ್ರಾಂ ಚಿನ್ನಾಭರಣ ಕಳುವು ಮಾಡಿರುವ ಮಾಹಿತಿನೀಡಿದ್ದರು.ಅಚ್ಚರಿಯ ಸಂಗತಿ ಏನೆಂದರೆ ಕಳುವು ಮಾಡಿದ 400 ಗ್ರಾಂ ಚಿನ್ನಾಭರಣಗಳ ಪೈಕಿ ಸುಮಾರು 300 ಗ್ರಾಂ ಮುಖ್ಯಪೇದೆ ರಾಜು ಪಡೆದಿದ್ದರೆಂದು ವಿಚಾರಣೆ ವೇಳೆ ತಿಳಿದು ಬಂದಿದೆ.ಕೂಡಲೇ ಎಚ್ಚೆತ್ತ ಮಂಡಿ ಠಾಣೆ ಪೊಲೀಸರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹಾಗೂ ಡಿಸಿಪಿ ರವರಾದ ಮುತ್ತುರಾಜ್ ಮತ್ತು ಜಾಹ್ನವಿ ರವರ ಗಮನಕ್ಕೆ ತಂದಿದ್ದಾರೆ.ಮುಖ್ಯಪೇದೆ ರಾಜು ನನ್ನು ವಿಚಾರಣೆಗೆ ಒಳಪಡಿಸಿದಾಗ ಚಿನ್ನಾಭರಣ ಪಡೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಆದೇಶದಂತೆ ಇಬ್ಬರು ಮನೆಗಳ್ಳರು ಹಾಗೂ ಮುಖ್ಯಪೇದೆ ರಾಜು ಮೇಲೆ ಮಂಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕಳುವು ಮಾಲನ್ನ ವಶಪಡಿಸಿಕೊಂಡಿದ್ದಾರೆ.

ಮುಖ್ಯಪೇದೆ ರಾಜು ಈ ಹಿಂದೆ ಸಹ ಹಲವು ಪ್ರಕರಣಗಳಲ್ಲಿ ಶಾಮೀಲಾದ ಹಿನ್ನಲೆ ಜೈಲುವಾಸ ಅನುಭವಿಸಿದ್ದನೆಂದು ಹೇಳಲಾಗಿದೆ.ಮತ್ತು ಚೆಕ್ ಬೌನ್ಸ್ ಪ್ರಕರಣಗಳು ಸಹ ಇದೆ ಎಂದು ಹೇಳಲಾಗುತ್ತಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *