ಅಕ್ರಮ ಸಂಬಂಧ ಶಂಕೆ…ಮಚ್ಚಿನಿಂದ ಕೊಂದು ವ್ಯಕ್ತಿ ಕೊಲೆ…ಆರೋಪಿ ಪರಾರಿ…

ಅಕ್ರಮ ಸಂಬಂಧ ಶಂಕೆ…ಮಚ್ಚಿನಿಂದ ಕೊಂದು ವ್ಯಕ್ತಿ ಕೊಲೆ…ಆರೋಪಿ ಪರಾರಿ…

ನಂಜನಗೂಡು,ಸೆ6,Tv10 ಕನ್ನಡಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಮೊಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ.
ರಂಗಸ್ವಾಮಿ (42) ಕೊಲೆಯಾದ ವ್ಯಕ್ತಿ. ಆರೋಪಿ ಮಹದೇವ ಶೆಟ್ಟಿ (45) ಪರಾರಿಯಾಗಿದ್ದಾನೆ.
ಮಹದೇವ ಶೆಟ್ಟಿ ಪತ್ನಿ ಜೊತೆ ರಂಗಸ್ವಾಮಿ ಅಕ್ರಮ ಸಂಬಂಧ ಹೊಂದಿದ್ದ ಎಂದು ಹೇಳಲಾಗಿದೆ.ಈ ವಿಚಾರವಾಗಿ ರಂಗಸ್ವಾಮಿ ಮತ್ತು ಮಹದೇವ ಶೆಟ್ಟಿ ನಡುವೆ ಕೆಲವು ದಿನಗಳ ಹಿಂದೆ ಗಲಾಟೆ ನಡೆದಿತ್ತು. ಇಂದು ರಂಗಸ್ವಾಮಿ ಗ್ರಾಮದ ಬೇಕರಿಯ ಬಳಿ ಕುಳಿತುಕೊಂಡಿದ್ದ ವೇಳೆ ಮಹದೇವ ಶೆಟ್ಟಿ ಮತ್ತು ರಂಗಸ್ವಾಮಿ ಇಬ್ಬರ ನಡುವೆ ಗಲಾಟೆ ನಡೆದು ವಿಕೋಪಕ್ಕೆ ತಿರುಗಿದ ಪರಿಣಾಮ ಮಹದೇವ ಶೆಟ್ಟಿ ರಂಗಸ್ವಾಮಿಯ ಮೇಲೆ ಮೊಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿವೈಎಸ್ಪಿ ರಘು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಸುನೀಲ್ ಕುಮಾರ್ ಸ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಪ್ರಕರಣವನ್ನು ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಯ ಸೆರೆಗಾಗಿ ಬಲೆ ಬೀಸಿದ್ದಾರೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *