ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ

ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಮಹದೇವ ಶೆಟ್ಟಿ (45) ಬಂಧಿತ ಕೊಲೆ ಆರೋಪಿ.ಕೃತ್ಯ ನಡೆದ 24 ಗಂಟೆಯಲ್ಲಿ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ರಂಗಸ್ವಾಮಿ ಕೊಲೆಯಾದ ದುರ್ದೈವಿ.ನಂಜನಗೂಡು ತಾಲೂಕಿನ ಹಣಸನಾಳು ಗ್ರಾಮದಲ್ಲಿ ಘಟನೆ ನಡೆದಿತ್ತು.ಆರೋಪಿ ಮಹದೇವಶೆಟ್ಟಿ ಪತ್ನಿಯ ಜೊತೆ ರಂಗಸ್ವಾಮಿ ಅಕ್ರಮ ಸಂಭಂಧ ಇಟ್ಟುಕೊಂಡಿದ್ದನೆಂದು ಹೇಳಲಾಗಿದೆ.ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆಗಿದೆ.ನಿನ್ನೆಯೂ ಸಹ ಇದೇ ವಿಚಾರದಲ್ಲಿ ನಡೆದ ಜಗಳದ ವೇಳೆ ಮಹದೇವಶೆಟ್ಟಿ ಮೊಚ್ಚಿನಿಂದ ರಂಗಸ್ವಾಮಿ ಮೇಲೆ ಹಲ್ಲೆ ನಡೆಸಿದ್ದ.ರಂಗಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದರು.ಕೃತ್ಯದ ನಂತರ ಮಹದೇವಶೆಟ್ಟಿ ಪರಾರಿಯಾಗಿದ್ದ.ಪ್ರಕರಣ ದಾಖಲಿಸಿಕೊಂಡ ನಂಜನಗೂಡು ಗ್ರಾಮಾಂತರ ಠಾಣಾ ಪೊಲೀಸರು ಘಟನೆ ನಡೆದ 24 ಗಂಟೆ ಒಳಗೆ ಆರೋಪಿ ಮಹದೇವಶೆಟ್ಟಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *