ಸ್ವಾತಂತ್ರ್ಯ ತಂದುಕೊಟ್ಟವರಿಗಿಂತ ಸಿನಿಮಾದವರೇ ಆದರ್ಶವಾಗಿದ್ದಾರೆ… ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ವಿಷಾಧ

ಸ್ವಾತಂತ್ರ್ಯ ತಂದುಕೊಟ್ಟವರಿಗಿಂತ ಸಿನಿಮಾದವರೇ ಆದರ್ಶವಾಗಿದ್ದಾರೆ… ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ವಿಷಾಧ

ಮೈಸೂರು,ಸೆ11,Tv10 ಕನ್ನಡ

ಇಂದಿನ ಯುವ ಪೀಳಿಗೆಗೆ ಗಾಂಧಿ, ನೆಹರು, ಅಂಬೇಡ್ಕರ್ ಆದರ್ಶವಾಗಿರದೆ ಸಿನಿಮಾ ನಟ-ನಟಿಯರು ಆರಾಧ್ಯ ದೈವಗಳಾಗಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ನಾಯಕರಿಗಿಂತ ಸಿನಿಮಾದಲ್ಲಿ ನಟಿರುವವರೇ ನಿಜ ನಾಯಕರಾಗುತ್ತಿರುವುದು ಈ ದೇಶದ ದೊಡ್ಡ ದುರಂತ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ವಿಷಾಧ ವ್ಯಕ್ತಪಡಿಸಿದರು.
ಮೈಸೂರಿನ ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು. ಸ್ವಾತಂತ್ರ್ಯ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವ ಅರಿಯದ ಯುವಕ-ಯುವತಿಯರು ಸಿನಿಮಾವೇ ಜೀವನ, ನಟ-ನಟಿಯರೇ ಆದರ್ಶ ಎಂದು ಭಾವಿಸಿರುವುದು ಆತಂಕ ಮೂಡಿಸುವ ವಿಷಯವಾಗಿದೆ ಎಂದು ವಿಷಾಧ ವ್ಯಕ್ತಪಡಿಸಿದರು.
ಪ್ರಸ್ತುತ ಯುವ ಸಮುದಾಯವು ರೀಲ್ಸ್ ಮಾಡುವುದು, ಟ್ರೋಲ್ ಆಗುವುದೇ ನಿಜವಾದ ಸಾಧನೆ ಎಂದು ಭಾವಿಸಿದೆ.ಶಾಲಾ-ಕಾಲೇಜಿನ ಗುರುಗಳಿಗಿಂತಲೂ ಗೂಗಲ್ ಗುರುವೇ ನಿಜವಾದ ಗುರು ಎಂದುಕೊಂಡಿದೆ. ಆದರೆ, ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹಿರಿಯರು ನಡೆಸಿದ ಹೋರಾಟ, ಸಂವಿಧಾನ ಬರೆಯಲು ಡಾ. ಅಂಬೇಡ್ಕರ್ ಪಟ್ಟ ಶ್ರಮ, ಪ್ರಜಾಪ್ರಭುತ್ವದ ಉಳಿವಿಗಾಗಿ ನಡೆಯುತ್ತಿರುವ ಹೋರಾಟಗಳ ಬಗ್ಗೆ ಕಿಂಚಿತ್ತೂ ಅರಿವಿಲ್ಲದಂತ್ತಾಗಿದೆ ಎಂದು ನೊಂದು ನುಡಿದರು.ಇಂದಿನ ಯುವಕ-ಯುವತಿಯರಿಗೆ ನಿಮಗೆ ಇಷ್ಟವಾದ ಹೀರೋ-ಹೀರೋಯಿನ್ ಯಾರು ಎಂದು ಕೇಳಿದರೆ, ಅವರು ಸಿನಿಮಾ ನಟ-ನಟಿಯರ ಹೆಸರನ್ನು ಹೇಳುತ್ತಾರೆ. ಆದರೆ, ಜೀವ ಕೊಟ್ಟ ತಂದೆ-ತಾಯಿ, ಜೀವನ ಕಟ್ಟಿಕೊಡಲು ನೆರವಾಗುವ ಬಂಧು-ಬಳಗ, ಗುರು-ಹಿರಿಯರು ಇವರಿಗೆ ಹೀರೋಗಳಾಗಿ ಕಾಣಿಸುವುದೇ ಇಲ್ಲ. ಆದ್ದರಿಂದ ನಮ್ಮ ಪ್ರತಿಕ್ಷಣದ ಬೆಳವಣಿಗೆಯಲ್ಲಿ ತಮ್ಮ ಜೀವನವನ್ನು ಮುಡುಪಾಗಿಡುವ ತಂದೆ-ತಾಯಿಯೆ ನಿಜವಾದ ಹೀರೋಗಳು ಎಂದು ಭಾವಿಸುವವರು ಮಾತ್ರ ಜೀವನದಲ್ಲಿ ಯಶಸ್ಸು ಕಾಣುತ್ತಾರೆ ಎಂದು ತಿಳಿಸಿದರು.
ಪೋಷಕರು ತಮ್ಮ ಮಕ್ಕಳನ್ನು ಡಾಕ್ಟರ್, ಇಂಜಿನಿಯರ್, ಅಧಿಕಾರಿಗಳನ್ನಾಗಿ ಮಾಡುವುದು ಎಷ್ಟು ಮುಖ್ಯವೋ ಸಮಾಜ ಸೇವಕರನ್ನಾಗಿ ರೂಪಿಸುವುದೂ ಅಷ್ಟೇ ಮುಖ್ಯ. ಏಕೆಂದರೆ, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳದ ಡಾಕ್ಟರ್, ಇಂಜಿನಿಯರ್, ಲಾಯರ್ ಮತ್ತು ಅಧಿಕಾರಿಗಳಿಂದ ಈ ದೇಶಕ್ಕೆ ಉಪಯೋಗಕ್ಕಿಂತಲೂ ಅಪಾಯವೇ ಹೆಚ್ಚು. ದೇಶಕ್ಕೆ ಡಾಕ್ಟರ್, ಇಂಜಿನಿಯರ್, ಅಧಿಕಾರಿ ವರ್ಗ ಎಷ್ಟು ಮುಖ್ಯವೋ ಸಮಾಜ ಸೇವೆ ಮಾಡುವ ಮನೋಭಾವ ಉಳ್ಳ ನಾಗರೀಕರೂ ಅಷ್ಟೇ ಮುಖ್ಯ ಎಂದರು.
1969ರಲ್ಲಿ ಆರಂಭಗೊಂಡ ರಾಷ್ಟ್ರೀಯ ಸೇವಾ ಯೋಜನೆಯು ಸಾವಿರಾರು ಯುವಕ-ಯುವತಿಯರಲ್ಲಿ ಸಮಾಜ ಸೇವಾ ಮನೋಭಾವನೆಯನ್ನು ಹುಟ್ಟು ಹಾಕಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯೂ ಆಧುನಿಕ ಆಕರ್ಷಣೆಗಳಿಗೆ ಬಲಿಯಾಗಿ ಸೇವಾ ಮನೋಭಾವನೆಗಿಂತ್ತಲೂ ಸ್ವಾರ್ಥ ಮನೋಭಾವನೆಯನ್ನು ಬೆಳೆಸಿಕೊಳ್ಳುತ್ತಿದೆ. ಶ್ರಮ ಪಡೆದಯೇ ಎಲ್ಲವನ್ನೂ ಪಡೆದುಕೊಳ್ಳಬೇಕೆಂಬ ಭ್ರಮೆಗೆ ಬಿದ್ದಿರುವ ಯುವ ಸಮ್ಮೂಹ, ಅಡ್ಡ ದಾರಿಗಳನ್ನು ಹಿಡಿದು ಬದುಕನ್ನೇ ನರಕ ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.
ಇಂದು ಹೆಣ್ಣು ಮಕ್ಕಳಲ್ಲಿ ಶಿಕ್ಷಣದ ಜಾಗೃತಿ ಮೂಡಿರುವುದು ಅತ್ಯಂತ ಸಂತೋಷದ ಸಂಗತಿ. ಆದರೆ, ಶಿಕ್ಷಣ ಪಡೆದು ಮತ್ತೆ ಮನೆ ಮತ್ತು ಕುಟುಂಬಕ್ಕೆ ಸೀಮಿತವಾದರೆ ಯಾವುದೇ ಪ್ರಯೋಜನವಿಲ್ಲ. ಆದ್ದರಿಂದ ನೀವು ಪಡೆಯುವ ಶಿಕ್ಷಣ ನಿಮ್ಮ ಪೋಷಕರಲ್ಲಿ ಸಂತೋಷ ತರಬೇಕು, ಸಮಾಜಕ್ಕೆ ಉಪಕಾರಿಯಾಗಬೇಕು, ದೇಶದ ಬೆಳವಣಿಗೆಗೆ ಕೊಡುಗೆ ನೀಡಬೇಕು. ಆಗಲೇ, ನೀವು ಪಡೆದ ಶಿಕ್ಷಣ ಸಾರ್ಥಕತೆಯನ್ನು ಪಡೆದುಕೊಳ್ಳುತ್ತದೆ ಎಂದು ಕರೆ ನೀಡಿದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *