ಅನೈತಿಕ ಸಂಭಂಧ ಪ್ರಶ್ನಿಸಿದ ಪತ್ನಿ ಭೀಕರ ಕೊಲೆ…ಪತಿಯಿಂದಲೇ ಕೃತ್ಯ…ಪೊಲೀಸರಿಗೆ ಶರಣಾದ ಆರೋಪಿ…

ಅನೈತಿಕ ಸಂಭಂಧ ಪ್ರಶ್ನಿಸಿದ ಪತ್ನಿ ಭೀಕರ ಕೊಲೆ…ಪತಿಯಿಂದಲೇ ಕೃತ್ಯ…ಪೊಲೀಸರಿಗೆ ಶರಣಾದ ಆರೋಪಿ…

ಹುಣಸೂರು,ಸೆ15,Tv10 ಕನ್ನಡಅನೈತಿಕ ಸಂಭಂಧ ವಿರೋಧಿಸಿದ ಪತ್ನಿಯನ್ನ ಪತಿರಾಯನೇ ಭೀಕರವಾಗಿ ಕೊಂದು

ಪೊಲೀಸರಿಗೆ ಶರಣಾದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಬೆಂಕಿಪುರ ಗ್ರಾಮದಲ್ಲಿ ನಡೆದಿದೆ.ರೋಜಾ(37) ಪತಿ ಸ್ವಾಮಿನಾಯಕನಿಂದ ಹತ್ಯೆಗೊಳಗಾದ ದುರ್ದೈವಿ.12 ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.ಹಲವು ವರ್ಷಗಳ ಕಾಲ ಅನ್ಯೋನ್ಯ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ಅದೇ ಗ್ರಾಮದ ಮಹಿಳೆಯೊಬ್ಬಳು ಬಿರುಗಾಳಿಯಂತೆ ಎಂಟ್ರಿ ಕೊಟ್ಟಿದ್ದಾಳೆ.5 ವರ್ಷಗಳ ಹಿಂದೆ ಪತಿಯನ್ನ ಕಳೆದುಕೊಂಡ ಮಹಿಳೆ ಸ್ವಾಮಿನಾಯಕನ ಜೊತೆ ಸಂಭಂಧ ಬೆಳೆಸಿದ್ದಾಳೆ.ಈ ವಿಚಾರ ರೋಜಾಗೆ ಗಮನಕ್ಕೆ ಬಂದು ಗಲಾಟೆ ಆಗಿದೆ.ಒಂದೆರಡು ಬಾರಿ ಸ್ವಾಮಿನಾಯಕನಿಗೆ ಕುಟುಂಬಸ್ಥರು ಬುದ್ದಿವಾದ ಹೇಳಿದ್ದಾರೆ.ಹೋಗಿದ್ದೂ ಸ್ವಾಮಿನಾಯಕ ಮಹಿಳೆಯ ಜೊತೆಗಿನ ಸಂಭಂಧ ಮುರಿದುಕೊಂಡಿಲ್ಲ.ಇತ್ತೀಚೆಗೆ ಇದೇ ವಿಚಾರದಲ್ಲಿ ಗಂಡ ಹೆಂಡತಿ ನಡುವೆ ಗಲಾಟೆ ಹೆಚ್ಚಾಗಿದೆ.ಸಂಭಂಧ ಬಿಡುವಂತೆ ಪಟ್ಟು ಹಿಡಿದಿದ್ದಾಳೆ.ಇಂದು ಮಧ್ಯಾಹ್ನ ನೀರು ಹಿಡಿಯಲು ಮನೆಯಿಂದ ಹೊರಬಂದ ರೋಜಾ ಮೇಲೆ ಸ್ವಾಮಿನಾಯಕ ಮೊಚ್ಚಿನಿಂದ ಕೊಚ್ಚಿದ್ದಾನೆ.ತೀವ್ರ ರಕ್ತಸ್ರಾವದಿಂದ ರೋಜಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಪತ್ನಿಯನ್ನ ಭೀಕರವಾಗಿ ಕೊಂದ ಸ್ವಾಮಿನಾಯಕ ಬಿಳಿಕೆರೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.ಘಟನೆ ನಡೆದ ಸ್ಥಳಕ್ಕೆ ಎಸ್ಪಿ ವಿಷ್ಣುವರ್ಧನ್ ಹಾಗೂ ಡಿವೈಎಸ್ಪಿ ಗೋಪಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

Spread the love

Related post

ಲೋಕಾಯುಕ್ತ ಬಲೆಗೆ ಚೆಸ್ಕಾಂ ಎಇಇ…3 ಲಕ್ಷ ಲಂಚ ಸ್ವೀಕರಿಸುವಾಗ ಲಾಕ್…

ಲೋಕಾಯುಕ್ತ ಬಲೆಗೆ ಚೆಸ್ಕಾಂ ಎಇಇ…3 ಲಕ್ಷ ಲಂಚ ಸ್ವೀಕರಿಸುವಾಗ ಲಾಕ್…

ಮೈಸೂರು,ಜೂ18,Tv10 ಕನ್ನಡ ಅನಧಿಕೃತ ಸಂಪರ್ಕದ ಪೆನಾಲ್ಟಿ ಕಡಿಮೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ಚೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಚೆಸ್ಕಾಂ ವಿಜಿಲೆನ್ಸ್ ಅಧಿಕಾರಿ ದೀಪಕ್ ಲೋಕಾ ಬಲೆಗೆ ಬಿದ್ದವರು.3 ಲಕ್ಷ…
ಜ್ಞಾನಸರೋವರ ಇಂಟರ್ ನ್ಯಾಷನಲ್ ಶಾಲೆಗೆ ಬಾಂಬ್ ಬೆದರಿಕೆ…

ಜ್ಞಾನಸರೋವರ ಇಂಟರ್ ನ್ಯಾಷನಲ್ ಶಾಲೆಗೆ ಬಾಂಬ್ ಬೆದರಿಕೆ…

ಮೈಸೂರು,ಜೂ18,Tv10 ಕನ್ನಡ ಮೈಸೂರಿನ ಭೂಗತಗಳ್ಳಿ ಗ್ರಾಮದಲ್ಲಿರುವ ಜ್ಞಾನಸರೋವರ ಇಂಟರ್ ನ್ಯಾಷನಲ್ ವಸತಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ.ಇ ಮೇಲ್ ಮೂಲಕ ಬೆದರಿಕೆ ಸಂದೇಶ ಕಳಹಿಸಲಾಗಿದೆ.2023 ರಲ್ಲಿ ಹೈದರಾಬಾದ್‌ನಲ್ಲಿ ನಡೆದ…
ಜಮೀನಿನ ಬೆಳೆಗಳ ಜೊತೆ ಗಾಂಜಾ ಬೆಳೆದ ಭೂಪ…17 ಕೆಜಿ ಗಾಂಜಾ ಗಿಡಗಳು ವಶ…

ಜಮೀನಿನ ಬೆಳೆಗಳ ಜೊತೆ ಗಾಂಜಾ ಬೆಳೆದ ಭೂಪ…17 ಕೆಜಿ ಗಾಂಜಾ ಗಿಡಗಳು…

ಮಂಡ್ಯ,ಜೂ17,Tv10 ಕನ್ನಡ ಜಮೀನಿನ ಬೆಳೆಗಳ ಮಧ್ಯೆ ಗಾಂಜಾ ಬೆಳೆದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ.ಲಕ್ಷಾಂತರ ಮೌಲ್ಯದ ಗಾಂಜಾ ಗಿಡಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕಾಶಿಮುರಕನಹಳ್ಳಿ ಗ್ರಾಮದಲ್ಲಿ ಪ್ರಕರಣ…

Leave a Reply

Your email address will not be published. Required fields are marked *