ಶ್ರೀ ಯೋಗಾ ನರಸಿಂಹಸ್ವಾಮಿ ಸನ್ನಿಧಾನದಲ್ಲಿ `ಪವಿತ್ರೋತ್ಸವ’ ಸಂಭ್ರಮ…ಸಾವಿರಾರು ಭಕ್ತರು ಭಾಗಿ…

ಶ್ರೀ ಯೋಗಾ ನರಸಿಂಹಸ್ವಾಮಿ ಸನ್ನಿಧಾನದಲ್ಲಿ `ಪವಿತ್ರೋತ್ಸವ’ ಸಂಭ್ರಮ…ಸಾವಿರಾರು ಭಕ್ತರು ಭಾಗಿ…

ಮೈಸೂರು,ಸೆ15,Tv10 ಕನ್ನಡ

ಮೈಸೂರು ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯ ಪವಿತ್ರೋತ್ಸವ ವಿಶೇಷ ಪೂಜಾ ಮಹೋತ್ಸವವ

ನಡೆಯುತ್ತಿದೆ.ಬಾದ್ರಪದ, ಶುಕ್ಲ ಏಕಾದಶಿಯಿಂದ ಆರಂಬಿಸಿ, ಕೃಷ್ಣ ದ್ವಿತೀಯೇವರೆಗೂ ಪವಿತ್ರೋತ್ಸವ ಸ್ವಾಮಿಯ ಸನ್ನಿಧಾನದಲ್ಲಿ ಜರುಗಲಿದೆ.. ಪವಿತ್ರ ಎಂದರೇ ಶುದ್ದವಾಗಿರುವುದು, ಉತ್ಸವ ಎಂದರೇ ಹಬ್ಬ, ಜಾತ್ರೆಯೆಂದೇ ಅರ್ಥವಾಗಿದೆ.ಹೆಸರಲ್ಲೇ ತಿಳಿಸಿರುವಂತೆ ಲೋಕದಲ್ಲಿ ಇರುವಂತಹ ದುಷ್ಟಶಕ್ತಿಗಳು ಯಾವುದಾದರೂ ಪಾತಕಾದಿಗಳು ಜರುಗಿದ್ದಲ್ಲಿ ಈ ಉತ್ಸವ ಆಚರಣೆಯಿಂದಾಗಿ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಇದೆ. ದೇವಾಲಯದ ಆಡಳಿತಾಧಿಕಾರಿ ಶ್ರೀ ಎನ್.ಶ್ರೀನಿವಾಸನ್ ಈ ಉತ್ಸವದ ಬಗ್ಗೆ ಮಾಹಿತಿ ನೀಡಿದರು. ಈ ಉತ್ಸವ ಉಲ್ಲೇಖ ನಮಗೆ ಅಗ್ನಿಪುರಾಣ ಹಾಗೂ ಗರುಡ ಪುರಾಣಗಳಲ್ಲಿ ಸ್ಪಷ್ಟವಾಗಿ ಕಂಡು ಬರುತ್ತದೆ.ಪಂಚಾರಾತ್ರಗಮದಲ್ಲಿ ಪ್ರಸಿದ್ಧ ಸಂಹಿತೆಯಾದ ಜಯಕ್ಯ ಸಂಹಿತೆಯಲ್ಲಿ ಸರ್ವದೋಶ ನಿವಾರಣೆ ಈ ಉತ್ಸವದದಲ್ಲಿ ಪ್ರಮುಖ ಅಂಶವಾಗಿದೆ ಎಂದು ವಿವರಿಸಿದರು.
ಎಲ್ಲರಿಗೂ ಶಾಂತಿ, ಸಂತೋಷ, ಕಲ್ಯಾಣ ಎಲ್ಲವೂ ಲಭಿಸಲಿ ಎಂಬ ಉದ್ದೇಶದಿಂದ ಸುದರ್ಶನ ನಾರಸಿಂಹ ಕ್ಷೇತ್ರಗಳಲ್ಲಿ ಅಂಕನಾರ್ಪಣದಿಂದ ತೊಡಗಿ ಯಾಗಶಾಲ ಮಂಡಲರಾಧನೆಯೊಂದಿಗೆ ಭಗವಂತನಿಗೆ (ಯೋಗಾನರಸಿಂಹ ಸ್ವಾಮಿಯವರಿಗೆ) ಶುದ್ಧವಾದ ರೇಷ್ಮೇಯಿಂದ ಮಾಡಲ್ಪಟ್ಟ ಮಾಲೆಗಳನ್ನು ಪವಿತ್ರೀಕರಿಸಿ ಧರಿಸಲಾಗುವುದು ಎಂದರು. ಇದರಿಂದಾಗಿ ಜಗತ್ತಿಗೆ ಕ್ಷೇಮ ಉಂಟಾಗುತ್ತದೆ ಎಂಬ ನಂಬಿಕೆ ಇದೆ. ಸರ್ವದೋಷ ನಿವಾರಣೆ, ಸರ್ವಯಜ್ಞ ಫಲಪ್ರದ, ಸರ್ವದೋಷ ಉಪಶಮನ, ಸರ್ವ ಸುಷ್ಠಿಕರ, ಸರ್ವ ಕಾಮಪ್ರದ ಮತ್ತು ಸರ್ವ ಲೋಕಶಾಂತಿ ಈ ಪವಿತ್ರೋತ್ಸವದಿಂದ ಲಭಿಸಲಿದ್ದು, ಭಕ್ತಾದಿಗಳು ಆಗಮಿಸಿ, ಈ ಉತ್ಸವದಲ್ಲಿ ಪಾಲ್ಗೊಂಡು ಯೋಗಾನರಸಿಂಹ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದರು.
ಈ ಸಂದರ್ಭದಲ್ಲಿ ತಿಳಿಸಿದರು. ದೇವಾಲಯದ ಸಂಸ್ಥಾಪರಾದ ಶ್ರೀ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರ ನೇತೃತ್ವದಲ್ಲಿ ಪವಿತ್ರೋತ್ಸವದ ಪೂಜಾ ಕೈಂಕರ್ಯಗಳು ನಡೆಯಿತು. ಇದೇ ವೇಳೆ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *