ಲವ್ ಫೇಲ್…ಕೈಕೊಟ್ಟ ಅತ್ತೆ ಮಗಳು…ಡೆತ್ ನೋಟ್ ಬರೆದು ಭಗ್ನಪ್ರೇಮಿ ನಾಪತ್ತೆ…ಒಂದು ವಾರವಾದ್ರೂ ಇಲ್ಲ ಸುಳಿವು…ಕುಟುಂಬಸ್ಥರು ಹೈರಾಣು…

ಲವ್ ಫೇಲ್…ಕೈಕೊಟ್ಟ ಅತ್ತೆ ಮಗಳು…ಡೆತ್ ನೋಟ್ ಬರೆದು ಭಗ್ನಪ್ರೇಮಿ ನಾಪತ್ತೆ…ಒಂದು ವಾರವಾದ್ರೂ ಇಲ್ಲ ಸುಳಿವು…ಕುಟುಂಬಸ್ಥರು ಹೈರಾಣು…

ಮೈಸೂರು,ಸೆ17,Tv10 ಕನ್ನಡ

ನಾಲ್ಕು ವರ್ಷಗಳಿಂದ ಪ್ರೀತಿಸಿ ಕೈಕೊಟ್ಟ ಅತ್ತೆ ಮಗಳ ವರ್ತನೆಗೆ ಬೇಸತ್ತ ಭಗ್ನಪ್ರೇಮಿ ಡೆತ್ ನೋಟ್ ಬರೆದು ನಾಪತ್ತೆಯಾದ ಘಟನೆ ಲಿಂಗಾಂಬುದಿ ಪಾಳ್ಯದ ಸಿದ್ದರಾಮಯ್ಯ ನಗರದಲ್ಲಿ ನಡೆದಿದೆ.ಪ್ರೇಮಿ ನಾಪತ್ತೆಯಾಗಿ ಒಂದು ವಾರವಾದರೂ ಸುಳಿವು ದೊರೆತಿಲ್ಲ.ಪ್ರೇಮಿಯ ನಾಪತ್ತೆಯಿಂದಾಗಿ ಕುಟುಂಬಸ್ಥರು ಆತಂಕದಲ್ಲಿ ದಿನ ದೂಡುತ್ತಿದ್ದಾರೆ.

ಸಿದ್ದರಾಮಯ್ಯ ನಗರದ ಮಹದೇವು ರವರ ಪುತ್ರ ರವಿ (26) ನಾಪತ್ತೆಯಾದವನು.ಕಳೆದ ನಾಲ್ಕು ವರ್ಷಗಳಿಂದ ಅತ್ತೆ ಮಗಳು ವಾಣಿಶ್ರೀಯನ್ನ ಪ್ರೀತಿಸುತ್ತಿದ್ದ.ವಾಣಿಶ್ರೀ ಸಹ ರವಿಯನ್ನ ಪ್ರೀತಿಸುತ್ತಿದ್ದಳು.ಹದಿನೈದು ದಿನಗಳ ಹಿಂದೆ ವಾಣಿಶ್ರೀ ಯೂ ಟರ್ನ್ ಹೊಡೆದಿದ್ದಾಳೆ.ತಾನು ಪ್ರೀತಸುತ್ತಿಲ್ಲವೆಂದು ಹೇಳಿದ್ದಲ್ಲದೆ ರವಿ ಬಗ್ಗೆ ಚಿಕ್ಕಪ್ಪ ಹಾಗೂ ಮಾವನ ಬಳಿ ಇಲ್ಲಸಲ್ಲದ ದೂರು ನೀಡಿದ್ದಾಳೆ.ಈ ಎಲ್ಲಾ ಬೆಳವಣಿಗೆಯಿಂದ ಬೇಸತ್ತ ರವಿ ಸೆಪ್ಟೆಂಬರ್ 10 ರಂದು ಮನೆ ಬಿಟ್ಟಿದ್ದಾನೆ.ರವಿ ಮಲಗುವ ಹಾಸಿಗೆ ಕೆಳಗೆ ಪರಿಶೀಲಿಸಿದಾಗ ಡೆತ್ ನೋಟ್ ದೊರೆತಿದೆ.*ಇಷ್ಟು ದಿನ ಲವ್ ಮಾಡಿ ಈಗ ಪ್ರೀತಿಸಿಲ್ಲವೆಂದು ಹೇಳಿ ನನ್ನ ಮತ್ತು ನಮ್ಮ ಮನೆಯವರ ನೆಮ್ಮದಿ ಹಾಳು ಮಾಡಿದ್ದಲ್ಲದೆ ಮನೆಯವರಿಗೆ ಅವಮಾನ ಮಾಡಿ ಸಂಭಂಧಿಕರ ಬಳಿ ಇಲ್ಲಸಲ್ಲದ ಕಂಪ್ಲೇಂಟ್ ಮಾಡಿ ನೆಮ್ಮದಿ ಹಾಳು ಮಾಡಿದ್ದಾರೆ.ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಯಾರೂ ಹುಡುಕಬೇಡಿ.ಇದಕ್ಕೆಲ್ಲಾ ಕಾರಣ ಮಾವ ಮಹದೇವ,ಚಿಕ್ಕಪ್ಪ ಮಹದೇವಮೂರ್ತಿ,ವಾಣಿಶ್ರೀ ಕಾರಣ* ಎಂದು ಬರೆದು ನಾಪತ್ತೆಯಾಗಿದ್ದಾನೆ.ರವಿಗಾಗಿ ಕುಟುಂಬಸ್ಥರು ಹುಡುಕಾಡಿ ಹೈರಾಣರಾಗಿದ್ದಾರೆ.ಮಗನ ನಾಪತ್ತೆಗೆ ಕಾರಣರಾದವರ ವಿರುದ್ದ ಕ್ರಮ ಕೈಗೊಳ್ಳುವಂತೆ ರವಿ ತಂದೆ ಮಹದೇವು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…
ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ…

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಜಿಲ್ಲಾ 317ಜಿ ವ್ಯಾಪ್ತಿಯಲ್ಲಿ ನಡೆದ ಇತ್ತೀಚಿನ ಜಿಲ್ಲಾ ಚುನಾವಣೆಯಲ್ಲಿ ಸೇವಾ…
ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ… ಮಂಡ್ಯ,ಏ8,Tv10 ಕನ್ನಡ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ…

Leave a Reply

Your email address will not be published. Required fields are marked *