ಲವ್ ಫೇಲ್…ಕೈಕೊಟ್ಟ ಅತ್ತೆ ಮಗಳು…ಡೆತ್ ನೋಟ್ ಬರೆದು ಭಗ್ನಪ್ರೇಮಿ ನಾಪತ್ತೆ…ಒಂದು ವಾರವಾದ್ರೂ ಇಲ್ಲ ಸುಳಿವು…ಕುಟುಂಬಸ್ಥರು ಹೈರಾಣು…

ಲವ್ ಫೇಲ್…ಕೈಕೊಟ್ಟ ಅತ್ತೆ ಮಗಳು…ಡೆತ್ ನೋಟ್ ಬರೆದು ಭಗ್ನಪ್ರೇಮಿ ನಾಪತ್ತೆ…ಒಂದು ವಾರವಾದ್ರೂ ಇಲ್ಲ ಸುಳಿವು…ಕುಟುಂಬಸ್ಥರು ಹೈರಾಣು…

ಮೈಸೂರು,ಸೆ17,Tv10 ಕನ್ನಡ

ನಾಲ್ಕು ವರ್ಷಗಳಿಂದ ಪ್ರೀತಿಸಿ ಕೈಕೊಟ್ಟ ಅತ್ತೆ ಮಗಳ ವರ್ತನೆಗೆ ಬೇಸತ್ತ ಭಗ್ನಪ್ರೇಮಿ ಡೆತ್ ನೋಟ್ ಬರೆದು ನಾಪತ್ತೆಯಾದ ಘಟನೆ ಲಿಂಗಾಂಬುದಿ ಪಾಳ್ಯದ ಸಿದ್ದರಾಮಯ್ಯ ನಗರದಲ್ಲಿ ನಡೆದಿದೆ.ಪ್ರೇಮಿ ನಾಪತ್ತೆಯಾಗಿ ಒಂದು ವಾರವಾದರೂ ಸುಳಿವು ದೊರೆತಿಲ್ಲ.ಪ್ರೇಮಿಯ ನಾಪತ್ತೆಯಿಂದಾಗಿ ಕುಟುಂಬಸ್ಥರು ಆತಂಕದಲ್ಲಿ ದಿನ ದೂಡುತ್ತಿದ್ದಾರೆ.

ಸಿದ್ದರಾಮಯ್ಯ ನಗರದ ಮಹದೇವು ರವರ ಪುತ್ರ ರವಿ (26) ನಾಪತ್ತೆಯಾದವನು.ಕಳೆದ ನಾಲ್ಕು ವರ್ಷಗಳಿಂದ ಅತ್ತೆ ಮಗಳು ವಾಣಿಶ್ರೀಯನ್ನ ಪ್ರೀತಿಸುತ್ತಿದ್ದ.ವಾಣಿಶ್ರೀ ಸಹ ರವಿಯನ್ನ ಪ್ರೀತಿಸುತ್ತಿದ್ದಳು.ಹದಿನೈದು ದಿನಗಳ ಹಿಂದೆ ವಾಣಿಶ್ರೀ ಯೂ ಟರ್ನ್ ಹೊಡೆದಿದ್ದಾಳೆ.ತಾನು ಪ್ರೀತಸುತ್ತಿಲ್ಲವೆಂದು ಹೇಳಿದ್ದಲ್ಲದೆ ರವಿ ಬಗ್ಗೆ ಚಿಕ್ಕಪ್ಪ ಹಾಗೂ ಮಾವನ ಬಳಿ ಇಲ್ಲಸಲ್ಲದ ದೂರು ನೀಡಿದ್ದಾಳೆ.ಈ ಎಲ್ಲಾ ಬೆಳವಣಿಗೆಯಿಂದ ಬೇಸತ್ತ ರವಿ ಸೆಪ್ಟೆಂಬರ್ 10 ರಂದು ಮನೆ ಬಿಟ್ಟಿದ್ದಾನೆ.ರವಿ ಮಲಗುವ ಹಾಸಿಗೆ ಕೆಳಗೆ ಪರಿಶೀಲಿಸಿದಾಗ ಡೆತ್ ನೋಟ್ ದೊರೆತಿದೆ.*ಇಷ್ಟು ದಿನ ಲವ್ ಮಾಡಿ ಈಗ ಪ್ರೀತಿಸಿಲ್ಲವೆಂದು ಹೇಳಿ ನನ್ನ ಮತ್ತು ನಮ್ಮ ಮನೆಯವರ ನೆಮ್ಮದಿ ಹಾಳು ಮಾಡಿದ್ದಲ್ಲದೆ ಮನೆಯವರಿಗೆ ಅವಮಾನ ಮಾಡಿ ಸಂಭಂಧಿಕರ ಬಳಿ ಇಲ್ಲಸಲ್ಲದ ಕಂಪ್ಲೇಂಟ್ ಮಾಡಿ ನೆಮ್ಮದಿ ಹಾಳು ಮಾಡಿದ್ದಾರೆ.ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಯಾರೂ ಹುಡುಕಬೇಡಿ.ಇದಕ್ಕೆಲ್ಲಾ ಕಾರಣ ಮಾವ ಮಹದೇವ,ಚಿಕ್ಕಪ್ಪ ಮಹದೇವಮೂರ್ತಿ,ವಾಣಿಶ್ರೀ ಕಾರಣ* ಎಂದು ಬರೆದು ನಾಪತ್ತೆಯಾಗಿದ್ದಾನೆ.ರವಿಗಾಗಿ ಕುಟುಂಬಸ್ಥರು ಹುಡುಕಾಡಿ ಹೈರಾಣರಾಗಿದ್ದಾರೆ.ಮಗನ ನಾಪತ್ತೆಗೆ ಕಾರಣರಾದವರ ವಿರುದ್ದ ಕ್ರಮ ಕೈಗೊಳ್ಳುವಂತೆ ರವಿ ತಂದೆ ಮಹದೇವು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *