ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮೈಸೂರು,ಸೆ20,Tv10 ಕನ್ನಡ

ವಿಘ್ನನಿವಾರಕ ಗಣಪತಿ ಹಬ್ಬ ನಾಡಿನ ಮೂಲೆ ಮೂಲೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ರಸ್ತೆ ರಸ್ತೆಗಳಲ್ಲೂ ವಿವಿಧ ಆಕಾರಗಳಲ್ಲಿ ವಿಗ್ರಹಗಳು ಭಕ್ತರನ್ನ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.ವಿಸರ್ಜನೆಗಾಗಿ ಹಮ್ಮಿಕೊಳ್ಳುವ ಮೆರವಣಿಗೆಗಳಂತೂ ಜಂಬೂಸವಾರಿಯನ್ನೂ ನಾಚಿಸಯವಂತೆ ನಡೆದಿವೆ.ಆದರೆ ಗಣಪತಿ ಮೂರ್ತಿಗಳ ವಿಸರ್ಜನೆಯಲ್ಲಿ ಭಕ್ತರು ಎಡವುತ್ತಿದ್ದಾರೆ.ಸಂಪ್ರದಾಯಿಕವಾಗಿ ವಿಸರ್ಜಿಸದೆ ಗಣಪತಿ ವಿಗ್ರಹಗಳಿಗೆ ಅಪಚಾರ ಮಾಡುತ್ತಿದ್ದಾರೆ.ಕೆ.ಆರ್.ಎಸ್.ಮುಖ್ಯರಸ್ತೆಯ ಪಂಪ್ ಹೌಸ್ ಬಳಿ ಇರುವ ಆರ್.ಬಿ.ಎಲ್ ನಾಲೆಯಲ್ಲಿ ವಿಸರ್ಜಿಸಲಾದ ಬೃಹತ್ ಆಕಾರದ ಗಣಪತಿ ಮೂರ್ತಿಗಳು ನೀರಿನಲ್ಲಿ ಕರಗದೆ,ತೇಲದೆ,ಮುಳುಗದೆ ಅನಾಥವಾದಂತೆ ಭಾಸವಾಗುತ್ತಿವೆ.ಗಣಪತಿಗಳನ್ನ ಪ್ರತಿಷ್ಠಾಪಿಸಿ ವಿಶೇಷ ಪೂಜೆಗಳನ್ನ ನಡೆಸಿದ ನಂತರ ಸಂಪ್ರದಾಯಿಕವಾಗಿ ವಿಸರ್ಜಿಸುವುದು ಆಚರಣೆಯಲ್ಲಿದೆ.ಆದ್ರೆ ಇಲ್ಲಿ ಆಚರಣೆಯನ್ನ ಬದಿಗೊತ್ತಿ ಬೇಕಾಬಿಟ್ಟಿ ನಾಲೆಯಲ್ಲಿ ಬಿಸಾಡಿ ಹೋಗುವ ಅವ್ಯಸ್ಥೆ ನಡೆದುಕೊಂಡು ಬಂದಿದೆ.ನಾಲೆಯ ಮಧ್ಯದಲ್ಲಿ ಸಿಲುಕಿದ ಗಣಪತಿ ವಿಗ್ರಹಗಳಿಗೆ ಮೋಕ್ಷ ಸಿಗದೆ ಅವ್ಯಸ್ಥೆಗೆ ಮೂಕಸಾಕ್ಷಿಯಾಗಿ ನಿಂತಿವೆ.ಇದರಿಂದ ಪರಿಸರಕ್ಕೂ ಹಾನಿ,ಜಲಚರಗಳಿಗೂ ಸಂಕಷ್ಟ,ನೀರು ಕಲುಷಿತವಾಗುವ ಭೀತಿ ಇದೆ.ನಾಲೆಗಳನ್ನ ಸಂರಕ್ಷಿಸಬೇಕಾದ ನೀರಾವರಿ ಇಲಾಖೆ ಅಧಿಕಾರಿಗಳು ಇದನ್ನ ಗಂಭೀರವಾಗಿ ಪರಿಗಣಿಸಿ ಇಂತಹ ಅವೈಜ್ಞಾನಿಕ ವಿಸರ್ಜನೆಗೆ ಕಡಿವಾಣ ಹಾಕಬೇಕಿದೆ…

Spread the love

Related post

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…
ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ…

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಜಿಲ್ಲಾ 317ಜಿ ವ್ಯಾಪ್ತಿಯಲ್ಲಿ ನಡೆದ ಇತ್ತೀಚಿನ ಜಿಲ್ಲಾ ಚುನಾವಣೆಯಲ್ಲಿ ಸೇವಾ…
ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ… ಮಂಡ್ಯ,ಏ8,Tv10 ಕನ್ನಡ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ…

Leave a Reply

Your email address will not be published. Required fields are marked *