ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮೈಸೂರು,ಸೆ20,Tv10 ಕನ್ನಡ

ವಿಘ್ನನಿವಾರಕ ಗಣಪತಿ ಹಬ್ಬ ನಾಡಿನ ಮೂಲೆ ಮೂಲೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ರಸ್ತೆ ರಸ್ತೆಗಳಲ್ಲೂ ವಿವಿಧ ಆಕಾರಗಳಲ್ಲಿ ವಿಗ್ರಹಗಳು ಭಕ್ತರನ್ನ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.ವಿಸರ್ಜನೆಗಾಗಿ ಹಮ್ಮಿಕೊಳ್ಳುವ ಮೆರವಣಿಗೆಗಳಂತೂ ಜಂಬೂಸವಾರಿಯನ್ನೂ ನಾಚಿಸಯವಂತೆ ನಡೆದಿವೆ.ಆದರೆ ಗಣಪತಿ ಮೂರ್ತಿಗಳ ವಿಸರ್ಜನೆಯಲ್ಲಿ ಭಕ್ತರು ಎಡವುತ್ತಿದ್ದಾರೆ.ಸಂಪ್ರದಾಯಿಕವಾಗಿ ವಿಸರ್ಜಿಸದೆ ಗಣಪತಿ ವಿಗ್ರಹಗಳಿಗೆ ಅಪಚಾರ ಮಾಡುತ್ತಿದ್ದಾರೆ.ಕೆ.ಆರ್.ಎಸ್.ಮುಖ್ಯರಸ್ತೆಯ ಪಂಪ್ ಹೌಸ್ ಬಳಿ ಇರುವ ಆರ್.ಬಿ.ಎಲ್ ನಾಲೆಯಲ್ಲಿ ವಿಸರ್ಜಿಸಲಾದ ಬೃಹತ್ ಆಕಾರದ ಗಣಪತಿ ಮೂರ್ತಿಗಳು ನೀರಿನಲ್ಲಿ ಕರಗದೆ,ತೇಲದೆ,ಮುಳುಗದೆ ಅನಾಥವಾದಂತೆ ಭಾಸವಾಗುತ್ತಿವೆ.ಗಣಪತಿಗಳನ್ನ ಪ್ರತಿಷ್ಠಾಪಿಸಿ ವಿಶೇಷ ಪೂಜೆಗಳನ್ನ ನಡೆಸಿದ ನಂತರ ಸಂಪ್ರದಾಯಿಕವಾಗಿ ವಿಸರ್ಜಿಸುವುದು ಆಚರಣೆಯಲ್ಲಿದೆ.ಆದ್ರೆ ಇಲ್ಲಿ ಆಚರಣೆಯನ್ನ ಬದಿಗೊತ್ತಿ ಬೇಕಾಬಿಟ್ಟಿ ನಾಲೆಯಲ್ಲಿ ಬಿಸಾಡಿ ಹೋಗುವ ಅವ್ಯಸ್ಥೆ ನಡೆದುಕೊಂಡು ಬಂದಿದೆ.ನಾಲೆಯ ಮಧ್ಯದಲ್ಲಿ ಸಿಲುಕಿದ ಗಣಪತಿ ವಿಗ್ರಹಗಳಿಗೆ ಮೋಕ್ಷ ಸಿಗದೆ ಅವ್ಯಸ್ಥೆಗೆ ಮೂಕಸಾಕ್ಷಿಯಾಗಿ ನಿಂತಿವೆ.ಇದರಿಂದ ಪರಿಸರಕ್ಕೂ ಹಾನಿ,ಜಲಚರಗಳಿಗೂ ಸಂಕಷ್ಟ,ನೀರು ಕಲುಷಿತವಾಗುವ ಭೀತಿ ಇದೆ.ನಾಲೆಗಳನ್ನ ಸಂರಕ್ಷಿಸಬೇಕಾದ ನೀರಾವರಿ ಇಲಾಖೆ ಅಧಿಕಾರಿಗಳು ಇದನ್ನ ಗಂಭೀರವಾಗಿ ಪರಿಗಣಿಸಿ ಇಂತಹ ಅವೈಜ್ಞಾನಿಕ ವಿಸರ್ಜನೆಗೆ ಕಡಿವಾಣ ಹಾಕಬೇಕಿದೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *