ಮಳಿಗೆ ಭೋಗ್ಯ ವಿಚಾರದಲ್ಲಿ ಕಿರಿಕ್…ಸಿಎಆರ್ ಪೇದೆ ಮೇಲೆ ಹಲ್ಲೆ…ಆರೋಪ,ಪ್ರತ್ಯಾರೋಪ ಪ್ರಕರಣ ದಾಖಲು…

ಮಳಿಗೆ ಭೋಗ್ಯ ವಿಚಾರದಲ್ಲಿ ಕಿರಿಕ್…ಸಿಎಆರ್ ಪೇದೆ ಮೇಲೆ ಹಲ್ಲೆ…ಆರೋಪ,ಪ್ರತ್ಯಾರೋಪ ಪ್ರಕರಣ ದಾಖಲು…

ಸಾಲಿಗ್ರಾಮ,ಸೆ25,Tv10 ಕನ್ನಡ

ಮಳೆಗೆ ಭೋಗ್ಯದ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆಯಲ್ಲಿ ಸಿಎಆರ್ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ನಡೆದಿದೆ.ಹಲ್ಲೆಗೊಳಗಾದ ಪೇದೆ ಧನಂಜಯ(45) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.ಘಟನೆಗೆ ಸಂಭಂಧಿಸಿದಂತೆ ಎರಡು ಕುಟುಂಬಗಳು ಆರೋಪಿಸಿ ಪರಸ್ಪರ ಪ್ರಕರಣ ದಾಖಲಿಸಿದ್ದಾರೆ.

ಹೊಸೂರು ಗ್ರಾಮದಲ್ಲಿ ಮಳೆಗೆಗಳನ್ನ ಪೇದೆ ಧನಂಜಯ ರವರು ಚಿಕ್ಕಪ್ಪ ಸೋಮಶೇಖರ್ ಗೆ ಭೋಗ್ಯಕ್ಕೆ ನೀಡಿದ್ದಾರೆ.ಬಾಡಿಗೆ ವಸೂಲಿ ಮಾಡಲು ಧನಂಜಯ ರವರು ಪತ್ನಿ ರಾಜೇಶ್ವರಿ ಜೊತೆ ತೆರಳಿದಾಗ ಸೋಮಶೇಖರ್,ಇವರ ಪತ್ನಿ ಮಂಜುಳಾ ಹಾಗೂ ಪುತ್ರ ಲಯನ್ ರಾಜ್ ಮೂವರು ಸೇರಿ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ್ದಾರೆ.ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದ ಧನಂಜಯ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಆರೋಪಕ್ಕೆ ಪ್ರತಿಯಾಗಿ ಮಂಜುಳ ರವರು ಸಹ ಧನಂಜಯ ಹಾಗೂ ರಾಜೇಶ್ವರಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ಹಣ ನೀಡಿ ಮಳಿಗೆಗಳನ್ನ ಬಿಡಿಸಿಕೊಂಡಿದ್ದರೂ ಕಿರುಕುಳ ನೀಡುತ್ತಿದ್ದಾರೆಂದು ಮಂಜುಳಾ ರವರು ಪೇದೆ ಧನಂಜಯ ಹಾಗೂ ಪತ್ನಿ ರಾಜೇಶ್ವರಿ ವಿರುದ್ದ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ… ಹನೂರು,ಅ16,Tv10 ಕನ್ನಡ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ…
ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…
ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ…

Leave a Reply

Your email address will not be published. Required fields are marked *