ಮಳಿಗೆ ಭೋಗ್ಯ ವಿಚಾರದಲ್ಲಿ ಕಿರಿಕ್…ಸಿಎಆರ್ ಪೇದೆ ಮೇಲೆ ಹಲ್ಲೆ…ಆರೋಪ,ಪ್ರತ್ಯಾರೋಪ ಪ್ರಕರಣ ದಾಖಲು…

ಮಳಿಗೆ ಭೋಗ್ಯ ವಿಚಾರದಲ್ಲಿ ಕಿರಿಕ್…ಸಿಎಆರ್ ಪೇದೆ ಮೇಲೆ ಹಲ್ಲೆ…ಆರೋಪ,ಪ್ರತ್ಯಾರೋಪ ಪ್ರಕರಣ ದಾಖಲು…

ಸಾಲಿಗ್ರಾಮ,ಸೆ25,Tv10 ಕನ್ನಡ

ಮಳೆಗೆ ಭೋಗ್ಯದ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆಯಲ್ಲಿ ಸಿಎಆರ್ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ನಡೆದಿದೆ.ಹಲ್ಲೆಗೊಳಗಾದ ಪೇದೆ ಧನಂಜಯ(45) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.ಘಟನೆಗೆ ಸಂಭಂಧಿಸಿದಂತೆ ಎರಡು ಕುಟುಂಬಗಳು ಆರೋಪಿಸಿ ಪರಸ್ಪರ ಪ್ರಕರಣ ದಾಖಲಿಸಿದ್ದಾರೆ.

ಹೊಸೂರು ಗ್ರಾಮದಲ್ಲಿ ಮಳೆಗೆಗಳನ್ನ ಪೇದೆ ಧನಂಜಯ ರವರು ಚಿಕ್ಕಪ್ಪ ಸೋಮಶೇಖರ್ ಗೆ ಭೋಗ್ಯಕ್ಕೆ ನೀಡಿದ್ದಾರೆ.ಬಾಡಿಗೆ ವಸೂಲಿ ಮಾಡಲು ಧನಂಜಯ ರವರು ಪತ್ನಿ ರಾಜೇಶ್ವರಿ ಜೊತೆ ತೆರಳಿದಾಗ ಸೋಮಶೇಖರ್,ಇವರ ಪತ್ನಿ ಮಂಜುಳಾ ಹಾಗೂ ಪುತ್ರ ಲಯನ್ ರಾಜ್ ಮೂವರು ಸೇರಿ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ್ದಾರೆ.ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದ ಧನಂಜಯ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಆರೋಪಕ್ಕೆ ಪ್ರತಿಯಾಗಿ ಮಂಜುಳ ರವರು ಸಹ ಧನಂಜಯ ಹಾಗೂ ರಾಜೇಶ್ವರಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ಹಣ ನೀಡಿ ಮಳಿಗೆಗಳನ್ನ ಬಿಡಿಸಿಕೊಂಡಿದ್ದರೂ ಕಿರುಕುಳ ನೀಡುತ್ತಿದ್ದಾರೆಂದು ಮಂಜುಳಾ ರವರು ಪೇದೆ ಧನಂಜಯ ಹಾಗೂ ಪತ್ನಿ ರಾಜೇಶ್ವರಿ ವಿರುದ್ದ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *