ಮಳಿಗೆ ಭೋಗ್ಯ ವಿಚಾರದಲ್ಲಿ ಕಿರಿಕ್…ಸಿಎಆರ್ ಪೇದೆ ಮೇಲೆ ಹಲ್ಲೆ…ಆರೋಪ,ಪ್ರತ್ಯಾರೋಪ ಪ್ರಕರಣ ದಾಖಲು…

ಮಳಿಗೆ ಭೋಗ್ಯ ವಿಚಾರದಲ್ಲಿ ಕಿರಿಕ್…ಸಿಎಆರ್ ಪೇದೆ ಮೇಲೆ ಹಲ್ಲೆ…ಆರೋಪ,ಪ್ರತ್ಯಾರೋಪ ಪ್ರಕರಣ ದಾಖಲು…

ಸಾಲಿಗ್ರಾಮ,ಸೆ25,Tv10 ಕನ್ನಡ

ಮಳೆಗೆ ಭೋಗ್ಯದ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆಯಲ್ಲಿ ಸಿಎಆರ್ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ನಡೆದಿದೆ.ಹಲ್ಲೆಗೊಳಗಾದ ಪೇದೆ ಧನಂಜಯ(45) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.ಘಟನೆಗೆ ಸಂಭಂಧಿಸಿದಂತೆ ಎರಡು ಕುಟುಂಬಗಳು ಆರೋಪಿಸಿ ಪರಸ್ಪರ ಪ್ರಕರಣ ದಾಖಲಿಸಿದ್ದಾರೆ.

ಹೊಸೂರು ಗ್ರಾಮದಲ್ಲಿ ಮಳೆಗೆಗಳನ್ನ ಪೇದೆ ಧನಂಜಯ ರವರು ಚಿಕ್ಕಪ್ಪ ಸೋಮಶೇಖರ್ ಗೆ ಭೋಗ್ಯಕ್ಕೆ ನೀಡಿದ್ದಾರೆ.ಬಾಡಿಗೆ ವಸೂಲಿ ಮಾಡಲು ಧನಂಜಯ ರವರು ಪತ್ನಿ ರಾಜೇಶ್ವರಿ ಜೊತೆ ತೆರಳಿದಾಗ ಸೋಮಶೇಖರ್,ಇವರ ಪತ್ನಿ ಮಂಜುಳಾ ಹಾಗೂ ಪುತ್ರ ಲಯನ್ ರಾಜ್ ಮೂವರು ಸೇರಿ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ್ದಾರೆ.ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದ ಧನಂಜಯ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಆರೋಪಕ್ಕೆ ಪ್ರತಿಯಾಗಿ ಮಂಜುಳ ರವರು ಸಹ ಧನಂಜಯ ಹಾಗೂ ರಾಜೇಶ್ವರಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ಹಣ ನೀಡಿ ಮಳಿಗೆಗಳನ್ನ ಬಿಡಿಸಿಕೊಂಡಿದ್ದರೂ ಕಿರುಕುಳ ನೀಡುತ್ತಿದ್ದಾರೆಂದು ಮಂಜುಳಾ ರವರು ಪೇದೆ ಧನಂಜಯ ಹಾಗೂ ಪತ್ನಿ ರಾಜೇಶ್ವರಿ ವಿರುದ್ದ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *