ಮೈಸೂರಿನಲ್ಲಿ ಹನಿ ಟ್ರಾಪ್…ಪಾನಿಪುರಿ ವ್ಯಾಪಾರಿಯಿಂದ 75 ಸಾವಿರ ಸುಲಿಗೆ…ಮಹಿಳೆ,ರೌಡಿಶೀಟರ್ ಸೇರಿದಂತೆ ಐವರ ಬಂಧನ…

ಮೈಸೂರಿನಲ್ಲಿ ಹನಿ ಟ್ರಾಪ್…ಪಾನಿಪುರಿ ವ್ಯಾಪಾರಿಯಿಂದ 75 ಸಾವಿರ ಸುಲಿಗೆ…ಮಹಿಳೆ,ರೌಡಿಶೀಟರ್ ಸೇರಿದಂತೆ ಐವರ ಬಂಧನ…

ಮೈಸೂರು,ಅ1,Tv10 ಕನ್ನಡ

ಸಾಂಸ್ಕೃತಿಕ ನಗರಿಯಲ್ಲಿ ಹನಿಟ್ರಾಪ್ ಪ್ರಕರಣ ದಾಖಲಾಗಿದೆ.ಪಾನಿಪುರಿ ವ್ಯಾಪಾರಿಯೊಬ್ಬರನ್ನ ಟ್ರಾಪ್ ಮಾಡಿದ ತಂಡ 75 ಸಾವಿರ ಸುಲಿಗೆ ಮಾಡಿ ಪೊಲೀಸರ ಅತಿಥಿಯಾಗಿದ್ದಾರೆ.

ನಂಜನಗೂಡಿನ ನಿವಾಸಿ ಪಾನಿಪುರಿ ವ್ಯಾಪಾರಿ ಮದನ್ ಲಾಲ್ ಗಯಾರಿ ಹನಿಟ್ರಾಪ್ ಗೆ ಒಳಗಾದವರು.ಕುಖ್ಯಾತ ರೌಡಿ ಶೀಟರ್ ಸೈಯದ್ ಶಾಬಾಜ್,ನೇಹಾ,ಸೈಯದ್ ಮುದಾಸರ್,ಕಫೀಉಲ್ಲಾ,ಸಿದ್ದಿಖ್ ಬಂಧಿತರು.ಡಕಾಯಿತಿ,ಕಳ್ಳತನ,ಸುಲಿಗೆ,ಕೊಲೆ ಬೆದರಿಕೆ,ವಾಹನ ಕಳುವು ಸೇರಿದಂತೆ 14 ಪ್ರಕರಣಗಳನ್ನ ಎದುರಿಸುತ್ತಿರುವ ಸೈಯದ್ ಶಾಬಾಜ್ ಕೃತ್ಯದ ರೂವಾರಿ.ನೇಹಾಳನ್ನ ಬಳಸಿಕೊಂಡ ಸೈಯದ್ ಶಾಬಾಜ್ ಪಾನಿಪುರ ವ್ಯಾಪಾರಿಯನ್ನ ಬುಟ್ಟಿಗೆ ಹಾಕಿಕೊಂಡಿದ್ದಾನೆ.ನೇಹಾ ಮೂಲಕ ರಮಾಬಾಯಿನಗರಕ್ಕೆ ಪಾನಿಪುರಿ ವ್ಯಾಪಾರಿಯನ್ನ ಕರೆಸಿ ಮನೆಯೊಂದರಲ್ಲಿ ಟ್ರಾಪ್ ಮಾಡಿದ್ದಾರೆ.ನೇಹಾಳೊಂದಿಗೆ ಬೆತ್ತಲೆ ಫೋಟೋ ತೆಗೆದು ನಂತರ ಹಣಕ್ಕೆ ಬ್ಲಾಕ್ ಮೇಲ್ ಮಾಡಿದ್ದಾರೆ.ಜುಲೈ ತಿಂಗಳಲ್ಲಿ ಮದನ್ ಲಾಲ್ ಗಯಾರಿಯನ್ನ ಟ್ರಾಪ್ ಮಾಡಿ ನಂತರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.ಹಣ ಕೊಡದಿದ್ದಲ್ಲಿ ಬೆತ್ತಲೆ ಇರುವ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಸಿದ್ದಾರೆ.ಗೌರವಕ್ಕೆ ಹೆದರಿದ ಮದನ್ ಲಾಲ್ ಗಯಾರಿ ಹಂತ ಹಂತವಾಗಿ 75800/- ರೂ ಕೊಟ್ಟಿದ್ದಾರೆ.ನಂತರವೂ ಹಣದ ಬೇಡಿಕೆ ಹೆಚ್ಚಾದಾಗ ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.ಕೂಡಲೇ ಕಾರ್ಯಪ್ರವೃತ್ತರಾದ ಗ್ರಾಮಾಂತರ ಪೊಲೀಸರು ನೇಹಾ,ಸೈಯದ್ ಮುದಾಸರ್,ಕಫೀಉಲ್ಲಾ,ಸಿದ್ದಿಖ್ ರನ್ನ ಬಂಧಿಸಿದ್ದರು.ಪ್ರಮುಖ ಆರೋಪಿ ಸೈಯದ್ ಶಾಬಾಜ್ ತಲೆ ಮರೆಸಿಕೊಂಡಿದ್ದ.ಎಸ್ಪಿ ವಿಷ್ಣುವರ್ಧನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಗ್ರಾಮಾಂತರ ಠಾಣೆ ಪೊಲೀಸರು ಪ್ರಮುಖ ಆರೋಪಿ ಸೈಯದ್ ಶಾಬಾಜ್ ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
8 ಮಂದಿ ತಂಡದಿಂದ ಕೃತ್ಯ ನಡೆದಿದ್ದು ಮೂವರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.ಪರಾರಿಯಾದ ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ.ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಡಾ.ಎಂ.ಎಲ್.ಶೇಖರ್,ಪಿಎಸ್ಸೈ ಚಂದ್ರ ನೇತೃತ್ವದಲ್ಲಿ ಕೆ.ಎ.ಸಿಬ್ಬಂದಿಗಳಾದ ಮಹೇಶ್,ಸುನಿಲ್ ಕುಮಾರ್,ಪ್ರಕಾಶ್,ಮಂಜು,ಪವನ್ ಕುಮಾರ್ ಹಾಗೂ ಸಂಜಯ್ ರವರು ಆರೋಪಿಗಳ ಬಂಧನ ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…

Leave a Reply

Your email address will not be published. Required fields are marked *