ಮೈಸೂರಿನಲ್ಲಿ ಹನಿ ಟ್ರಾಪ್…ಪಾನಿಪುರಿ ವ್ಯಾಪಾರಿಯಿಂದ 75 ಸಾವಿರ ಸುಲಿಗೆ…ಮಹಿಳೆ,ರೌಡಿಶೀಟರ್ ಸೇರಿದಂತೆ ಐವರ ಬಂಧನ…

ಮೈಸೂರಿನಲ್ಲಿ ಹನಿ ಟ್ರಾಪ್…ಪಾನಿಪುರಿ ವ್ಯಾಪಾರಿಯಿಂದ 75 ಸಾವಿರ ಸುಲಿಗೆ…ಮಹಿಳೆ,ರೌಡಿಶೀಟರ್ ಸೇರಿದಂತೆ ಐವರ ಬಂಧನ…

ಮೈಸೂರು,ಅ1,Tv10 ಕನ್ನಡ

ಸಾಂಸ್ಕೃತಿಕ ನಗರಿಯಲ್ಲಿ ಹನಿಟ್ರಾಪ್ ಪ್ರಕರಣ ದಾಖಲಾಗಿದೆ.ಪಾನಿಪುರಿ ವ್ಯಾಪಾರಿಯೊಬ್ಬರನ್ನ ಟ್ರಾಪ್ ಮಾಡಿದ ತಂಡ 75 ಸಾವಿರ ಸುಲಿಗೆ ಮಾಡಿ ಪೊಲೀಸರ ಅತಿಥಿಯಾಗಿದ್ದಾರೆ.

ನಂಜನಗೂಡಿನ ನಿವಾಸಿ ಪಾನಿಪುರಿ ವ್ಯಾಪಾರಿ ಮದನ್ ಲಾಲ್ ಗಯಾರಿ ಹನಿಟ್ರಾಪ್ ಗೆ ಒಳಗಾದವರು.ಕುಖ್ಯಾತ ರೌಡಿ ಶೀಟರ್ ಸೈಯದ್ ಶಾಬಾಜ್,ನೇಹಾ,ಸೈಯದ್ ಮುದಾಸರ್,ಕಫೀಉಲ್ಲಾ,ಸಿದ್ದಿಖ್ ಬಂಧಿತರು.ಡಕಾಯಿತಿ,ಕಳ್ಳತನ,ಸುಲಿಗೆ,ಕೊಲೆ ಬೆದರಿಕೆ,ವಾಹನ ಕಳುವು ಸೇರಿದಂತೆ 14 ಪ್ರಕರಣಗಳನ್ನ ಎದುರಿಸುತ್ತಿರುವ ಸೈಯದ್ ಶಾಬಾಜ್ ಕೃತ್ಯದ ರೂವಾರಿ.ನೇಹಾಳನ್ನ ಬಳಸಿಕೊಂಡ ಸೈಯದ್ ಶಾಬಾಜ್ ಪಾನಿಪುರ ವ್ಯಾಪಾರಿಯನ್ನ ಬುಟ್ಟಿಗೆ ಹಾಕಿಕೊಂಡಿದ್ದಾನೆ.ನೇಹಾ ಮೂಲಕ ರಮಾಬಾಯಿನಗರಕ್ಕೆ ಪಾನಿಪುರಿ ವ್ಯಾಪಾರಿಯನ್ನ ಕರೆಸಿ ಮನೆಯೊಂದರಲ್ಲಿ ಟ್ರಾಪ್ ಮಾಡಿದ್ದಾರೆ.ನೇಹಾಳೊಂದಿಗೆ ಬೆತ್ತಲೆ ಫೋಟೋ ತೆಗೆದು ನಂತರ ಹಣಕ್ಕೆ ಬ್ಲಾಕ್ ಮೇಲ್ ಮಾಡಿದ್ದಾರೆ.ಜುಲೈ ತಿಂಗಳಲ್ಲಿ ಮದನ್ ಲಾಲ್ ಗಯಾರಿಯನ್ನ ಟ್ರಾಪ್ ಮಾಡಿ ನಂತರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.ಹಣ ಕೊಡದಿದ್ದಲ್ಲಿ ಬೆತ್ತಲೆ ಇರುವ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಸಿದ್ದಾರೆ.ಗೌರವಕ್ಕೆ ಹೆದರಿದ ಮದನ್ ಲಾಲ್ ಗಯಾರಿ ಹಂತ ಹಂತವಾಗಿ 75800/- ರೂ ಕೊಟ್ಟಿದ್ದಾರೆ.ನಂತರವೂ ಹಣದ ಬೇಡಿಕೆ ಹೆಚ್ಚಾದಾಗ ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.ಕೂಡಲೇ ಕಾರ್ಯಪ್ರವೃತ್ತರಾದ ಗ್ರಾಮಾಂತರ ಪೊಲೀಸರು ನೇಹಾ,ಸೈಯದ್ ಮುದಾಸರ್,ಕಫೀಉಲ್ಲಾ,ಸಿದ್ದಿಖ್ ರನ್ನ ಬಂಧಿಸಿದ್ದರು.ಪ್ರಮುಖ ಆರೋಪಿ ಸೈಯದ್ ಶಾಬಾಜ್ ತಲೆ ಮರೆಸಿಕೊಂಡಿದ್ದ.ಎಸ್ಪಿ ವಿಷ್ಣುವರ್ಧನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಗ್ರಾಮಾಂತರ ಠಾಣೆ ಪೊಲೀಸರು ಪ್ರಮುಖ ಆರೋಪಿ ಸೈಯದ್ ಶಾಬಾಜ್ ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
8 ಮಂದಿ ತಂಡದಿಂದ ಕೃತ್ಯ ನಡೆದಿದ್ದು ಮೂವರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.ಪರಾರಿಯಾದ ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ.ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಡಾ.ಎಂ.ಎಲ್.ಶೇಖರ್,ಪಿಎಸ್ಸೈ ಚಂದ್ರ ನೇತೃತ್ವದಲ್ಲಿ ಕೆ.ಎ.ಸಿಬ್ಬಂದಿಗಳಾದ ಮಹೇಶ್,ಸುನಿಲ್ ಕುಮಾರ್,ಪ್ರಕಾಶ್,ಮಂಜು,ಪವನ್ ಕುಮಾರ್ ಹಾಗೂ ಸಂಜಯ್ ರವರು ಆರೋಪಿಗಳ ಬಂಧನ ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *