ಮುಡಾ ಹಗರಣ…ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು…ಸಂಸದ ಯದಯವೀರ್ ಆಗ್ರಹ…

ಮುಡಾ ಹಗರಣ…ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು…ಸಂಸದ ಯದಯವೀರ್ ಆಗ್ರಹ…

ಮೈಸೂರು,ಅ2,Tv10 ಕನ್ನಡ

ಮುಡಾ‌ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ.ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಯದುವೀರ್ ಸೈಟ್ ವಾಪಸ್ ಕೊಟ್ಟಿರುವುದು ನೋಡಿದರೇ ತಪ್ಪಾಗಿದೆ ಅಂತಾನೆ ಅರ್ಥ. ಸೈಟ್ ಗೆ ಇರುವ ವ್ಯಾಲ್ಯುಗಿಂತ ಐದಾರು ಪಟ್ಟು ಹಣ ಕೇಳಿದರು. ಸಿಎಂ ಅವರ ಹೆಸರೇ ಖುದ್ದು‌ ಪ್ರಕರಣದಲ್ಲಿ ಕೇಳಿ ಬಂದಿದೆ. ಆ ಕಾರಣಕ್ಕೆ ಸೂಕ್ತ ತನಿಖೆ ಆಗಲೇಬೇಕು. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲೇಬೇಕು ಎಂದು ಅವರು ಹೇಳಿದರು.
ಸಿಎಂಗೆ ಇದು ಕಪ್ಪುಚುಕ್ಕೆ ತರುವ ವಿಚಾರ. ಅವರು ದುರಾಡಳಿತ ಮಾಡಿದ್ದಾರೆ. ನೇರವಾಗಿ ತಪ್ಪು ಮಾಡಿರುವ ಕಾರಣ ರಾಜೀನಾಮೆ ಕೊಡಬೇಕು ಎಂದು ಯದುವೀರ್ ಆಗ್ರಹಿಸಿದರು. ಸಿಎಂ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ವಾಲ್ಮೀಕಿ ಹಗರಣದಲ್ಲೂ ಕೂಡ ತಪ್ಪಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಲೇಬೇಕು ಎಂದು ತಿಳಿಸಿದರು.ಸಿಎಂ ಪತ್ನಿಯನ್ನ ರಾಜಕೀಯಕ್ಕೆ ತಂದಿಲ್ಲ. ಮುಖ್ಯಮಂತ್ರಿಯಾಗಲಿ, ಮಹಿಳೆಯಗಾಗಲಿ , ಯಾರೇ ಆಗಲಿ ಆರೋಪ ಬಂದಾಗ ಎದುರಿಸಬೇಕು. ಅವರ ಮೇಲೆ ಆರೋಪ ಬಂದಿದೆ ಹಾಗಾಗಿ ಅವರ ಪತ್ನಿ ತನಿಖೆಯಲ್ಲಿ ಭಾಗಿಯಾಗಲೇಬೇಕು. ಮುಡಾದ‌ ಮೂಲ ಉದ್ದೇಶ ಬಡವರಿಗೆ ಸೈಟ್ ಸಿಗಬೇಕು ಎಂಬುದು. ಆದರೆ ಅದು ಒಂದು ವರ್ಗಕ್ಕೆ ಲಾಭ ಆಗುತ್ತಿದೆ. ಹಾಗಾಗಿ ಸಮಗ್ರ ತನಿಖೆ ಆಗಬೇಕು ಎಂದು ಹೇಳಿದರು.ಸಿಎಂ ಮೊದಲೇ ಸೈಟ್ ಕೊಟ್ಟಿದ್ದರೆ ಈ ಸಮಸ್ಯೆ ಆಗುತ್ತಿರಲಿಲ್ಲ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಯದುವೀರ್, ಈಗ ಏನಾಗಿದೆ? ಏನಾಗಿಲ್ಲ ಅಂತ ಪರಾಮರ್ಶೆ ಮಾಡುವ ಸಂದರ್ಭವಲ್ಲ. ತಪ್ಪಂತೂ ಆಗಿದೆ , ಅದನ್ನ ಅವರೇ ಒಪ್ಪಿಕೊಂಡಿದ್ದಾರೆ. ಅವರ ಕೈ ಹಾಕಿದ್ದಾರಾ ನೋಡಬೇಕಿದೆ. ಹೀಗಾಗಿ ತಕ್ಷಣ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.

ದಸರಾದಲ್ಲಿ ಪಾಲ್ಗೊಳ್ಳುವ ವಿಚಾರ ಅದು ಅವರ ತೀರ್ಮಾನ. ಜವಾಬ್ದಾರಿ ಸ್ಥಾನದಲ್ಲಿರುವ ಕಾರಣ ಹಗರಣದಲ್ಲಿ ಸಿಲುಕಿರುವ ಕಾರಣ ಅವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಸಂಸದ ಯದುವೀರ್ ತಿಳಿಸಿದರು.

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *