ಮುಡಾ ಹಗರಣ…ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು…ಸಂಸದ ಯದಯವೀರ್ ಆಗ್ರಹ…

ಮುಡಾ ಹಗರಣ…ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು…ಸಂಸದ ಯದಯವೀರ್ ಆಗ್ರಹ…

ಮೈಸೂರು,ಅ2,Tv10 ಕನ್ನಡ

ಮುಡಾ‌ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ.ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಯದುವೀರ್ ಸೈಟ್ ವಾಪಸ್ ಕೊಟ್ಟಿರುವುದು ನೋಡಿದರೇ ತಪ್ಪಾಗಿದೆ ಅಂತಾನೆ ಅರ್ಥ. ಸೈಟ್ ಗೆ ಇರುವ ವ್ಯಾಲ್ಯುಗಿಂತ ಐದಾರು ಪಟ್ಟು ಹಣ ಕೇಳಿದರು. ಸಿಎಂ ಅವರ ಹೆಸರೇ ಖುದ್ದು‌ ಪ್ರಕರಣದಲ್ಲಿ ಕೇಳಿ ಬಂದಿದೆ. ಆ ಕಾರಣಕ್ಕೆ ಸೂಕ್ತ ತನಿಖೆ ಆಗಲೇಬೇಕು. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲೇಬೇಕು ಎಂದು ಅವರು ಹೇಳಿದರು.
ಸಿಎಂಗೆ ಇದು ಕಪ್ಪುಚುಕ್ಕೆ ತರುವ ವಿಚಾರ. ಅವರು ದುರಾಡಳಿತ ಮಾಡಿದ್ದಾರೆ. ನೇರವಾಗಿ ತಪ್ಪು ಮಾಡಿರುವ ಕಾರಣ ರಾಜೀನಾಮೆ ಕೊಡಬೇಕು ಎಂದು ಯದುವೀರ್ ಆಗ್ರಹಿಸಿದರು. ಸಿಎಂ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ವಾಲ್ಮೀಕಿ ಹಗರಣದಲ್ಲೂ ಕೂಡ ತಪ್ಪಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಲೇಬೇಕು ಎಂದು ತಿಳಿಸಿದರು.ಸಿಎಂ ಪತ್ನಿಯನ್ನ ರಾಜಕೀಯಕ್ಕೆ ತಂದಿಲ್ಲ. ಮುಖ್ಯಮಂತ್ರಿಯಾಗಲಿ, ಮಹಿಳೆಯಗಾಗಲಿ , ಯಾರೇ ಆಗಲಿ ಆರೋಪ ಬಂದಾಗ ಎದುರಿಸಬೇಕು. ಅವರ ಮೇಲೆ ಆರೋಪ ಬಂದಿದೆ ಹಾಗಾಗಿ ಅವರ ಪತ್ನಿ ತನಿಖೆಯಲ್ಲಿ ಭಾಗಿಯಾಗಲೇಬೇಕು. ಮುಡಾದ‌ ಮೂಲ ಉದ್ದೇಶ ಬಡವರಿಗೆ ಸೈಟ್ ಸಿಗಬೇಕು ಎಂಬುದು. ಆದರೆ ಅದು ಒಂದು ವರ್ಗಕ್ಕೆ ಲಾಭ ಆಗುತ್ತಿದೆ. ಹಾಗಾಗಿ ಸಮಗ್ರ ತನಿಖೆ ಆಗಬೇಕು ಎಂದು ಹೇಳಿದರು.ಸಿಎಂ ಮೊದಲೇ ಸೈಟ್ ಕೊಟ್ಟಿದ್ದರೆ ಈ ಸಮಸ್ಯೆ ಆಗುತ್ತಿರಲಿಲ್ಲ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಯದುವೀರ್, ಈಗ ಏನಾಗಿದೆ? ಏನಾಗಿಲ್ಲ ಅಂತ ಪರಾಮರ್ಶೆ ಮಾಡುವ ಸಂದರ್ಭವಲ್ಲ. ತಪ್ಪಂತೂ ಆಗಿದೆ , ಅದನ್ನ ಅವರೇ ಒಪ್ಪಿಕೊಂಡಿದ್ದಾರೆ. ಅವರ ಕೈ ಹಾಕಿದ್ದಾರಾ ನೋಡಬೇಕಿದೆ. ಹೀಗಾಗಿ ತಕ್ಷಣ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.

ದಸರಾದಲ್ಲಿ ಪಾಲ್ಗೊಳ್ಳುವ ವಿಚಾರ ಅದು ಅವರ ತೀರ್ಮಾನ. ಜವಾಬ್ದಾರಿ ಸ್ಥಾನದಲ್ಲಿರುವ ಕಾರಣ ಹಗರಣದಲ್ಲಿ ಸಿಲುಕಿರುವ ಕಾರಣ ಅವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಸಂಸದ ಯದುವೀರ್ ತಿಳಿಸಿದರು.

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *