ರಾಬರಿ ಪ್ರಕರಣ…ಆರೋಪಿ ಅಂದರ್…ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ರಾಬರಿ ಪ್ರಕರಣ…ಆರೋಪಿ ಅಂದರ್…ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮೈಸೂರು,ಅ17,Tv10 ಕನ್ನಡ

ಬಾಡಿಗೆ ನೆಪದಲ್ಲಿ ಚಾಲಕನಿಗೆ ಹಲ್ಲೆ ನಡೆಸಿ ಆಟೋ,ನಗದು ಹಾಗೂ ಮೊಬೈಲ್ ದೋಚಿ ಪರಾರಿಯಾದ ಪ್ರಮುಖ ಆರೋಪಿಯನ್ನ ಬಂಧಿಸುವಲ್ಲಿ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಆರೋಪಿಯಿಂದ ಆಟೋ ವಶಪಡಿಸಿಕೊಳ್ಳಲಾಗಿದೆ.ಹೂಟಗಳ್ಳಿ ನಿವಾಸಿ ಉಮೇಶ್ (28) ಬಂಧಿತ ಆರೋಪಿ.

ಅಕ್ಟೋಬರ್ 10 ರಂದು ಹೊಸಹುಂಡಿಗೆ ಬಾಡಿಗೆಗೆ ಆರೋಪಿ ಉಮೇಶ್ ಹಾಗೂ ಸಹಚರ ಆಟೋ ಪಡೆದಿದ್ದಾರೆ.ಏಳಿಗೆ ಹುಂಡಿ ತಲುಪುತ್ತಿದ್ದಂತೆಯೇ ಚಾಲಕ ಸಾಗರ್ ಮೇಲೆ ಹಲ್ಲೆ ನಡೆಸಿ ಆಟೋ ಸಮೇತ ಮೊಬೈಲ್,8500/- ರೂ ನಗದು ದೋಚಿ ಪರಾರಿಯಾಗಿದ್ದಾರೆ.ಹಲ್ಲೆಗೊಳಗಾದ ಸಾಗರ್ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳ ಸೆರೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್,ಅಡಿಷನಲ್ ಎಸ್ಪಿ ನಾಗೇಶ್ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕರೀಂ ರಾವತರ್ ಉಸ್ತುವಾರಿಯಲ್ಲಿ ದಕ್ಷಿಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಡಾ.ಎಂ.ಎಲ್.ಶೇಖರ್ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ಕೆ.ಎ.ಚಂದ್ರು,ಸಿಬ್ಬಂದಿಗಳಾದ ಮಹೇಶ್,ಸುನಿಲ್ ಕುಮಾರ್,ಮಂಜು,ಪ್ರಕಾಶ್ ರವರನ್ನೊಳಗೊಂಡ ತಂಡ ರಚಿಸಲಾಗಿದ್ದು ಘಟನೆ ನಡೆದ 6 ದಿನಗಳಲ್ಲಿ ಪ್ರಮುಖ ಆರೋಪಿ ಉಮೇಶ್ ನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಉಮೇಶ್ ಮೇಲೆ ಕಳ್ಳತನ,ಸುಲಿಗೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.ದಕ್ಷಿಣ ಪೊಲೀಸ್ ಠಾಣೆಯಲ್ಲಿ 4,ವರುಣಾ ಪೊಲೀಸ್ ಠಾಣೆಯಲ್ಲಿ 2,ನಂಜನಗೂಡು ಪೊಲೀಸ್ ಠಾಣೆಯಲ್ಲಿ 3, ಜಯಪುರ,ಹುಲ್ಲಹಳ್ಳಿ ಹಾಗೂ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿವೆ.

ದಕ್ಷಿಣ ಪೊಲೀಸ್ ಠಾಣೆಯ ಯಶಸ್ವಿ ಕಾರ್ಯಾಚರಣೆಯನ್ನ ಎಸ್ಪಿ ವಿಷ್ಣುವರ್ಧನ್ ಶ್ಲಾಘಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *