ರಾಬರಿ ಪ್ರಕರಣ…ಆರೋಪಿ ಅಂದರ್…ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ರಾಬರಿ ಪ್ರಕರಣ…ಆರೋಪಿ ಅಂದರ್…ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮೈಸೂರು,ಅ17,Tv10 ಕನ್ನಡ

ಬಾಡಿಗೆ ನೆಪದಲ್ಲಿ ಚಾಲಕನಿಗೆ ಹಲ್ಲೆ ನಡೆಸಿ ಆಟೋ,ನಗದು ಹಾಗೂ ಮೊಬೈಲ್ ದೋಚಿ ಪರಾರಿಯಾದ ಪ್ರಮುಖ ಆರೋಪಿಯನ್ನ ಬಂಧಿಸುವಲ್ಲಿ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಆರೋಪಿಯಿಂದ ಆಟೋ ವಶಪಡಿಸಿಕೊಳ್ಳಲಾಗಿದೆ.ಹೂಟಗಳ್ಳಿ ನಿವಾಸಿ ಉಮೇಶ್ (28) ಬಂಧಿತ ಆರೋಪಿ.

ಅಕ್ಟೋಬರ್ 10 ರಂದು ಹೊಸಹುಂಡಿಗೆ ಬಾಡಿಗೆಗೆ ಆರೋಪಿ ಉಮೇಶ್ ಹಾಗೂ ಸಹಚರ ಆಟೋ ಪಡೆದಿದ್ದಾರೆ.ಏಳಿಗೆ ಹುಂಡಿ ತಲುಪುತ್ತಿದ್ದಂತೆಯೇ ಚಾಲಕ ಸಾಗರ್ ಮೇಲೆ ಹಲ್ಲೆ ನಡೆಸಿ ಆಟೋ ಸಮೇತ ಮೊಬೈಲ್,8500/- ರೂ ನಗದು ದೋಚಿ ಪರಾರಿಯಾಗಿದ್ದಾರೆ.ಹಲ್ಲೆಗೊಳಗಾದ ಸಾಗರ್ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳ ಸೆರೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್,ಅಡಿಷನಲ್ ಎಸ್ಪಿ ನಾಗೇಶ್ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕರೀಂ ರಾವತರ್ ಉಸ್ತುವಾರಿಯಲ್ಲಿ ದಕ್ಷಿಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಡಾ.ಎಂ.ಎಲ್.ಶೇಖರ್ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ಕೆ.ಎ.ಚಂದ್ರು,ಸಿಬ್ಬಂದಿಗಳಾದ ಮಹೇಶ್,ಸುನಿಲ್ ಕುಮಾರ್,ಮಂಜು,ಪ್ರಕಾಶ್ ರವರನ್ನೊಳಗೊಂಡ ತಂಡ ರಚಿಸಲಾಗಿದ್ದು ಘಟನೆ ನಡೆದ 6 ದಿನಗಳಲ್ಲಿ ಪ್ರಮುಖ ಆರೋಪಿ ಉಮೇಶ್ ನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಉಮೇಶ್ ಮೇಲೆ ಕಳ್ಳತನ,ಸುಲಿಗೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.ದಕ್ಷಿಣ ಪೊಲೀಸ್ ಠಾಣೆಯಲ್ಲಿ 4,ವರುಣಾ ಪೊಲೀಸ್ ಠಾಣೆಯಲ್ಲಿ 2,ನಂಜನಗೂಡು ಪೊಲೀಸ್ ಠಾಣೆಯಲ್ಲಿ 3, ಜಯಪುರ,ಹುಲ್ಲಹಳ್ಳಿ ಹಾಗೂ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿವೆ.

ದಕ್ಷಿಣ ಪೊಲೀಸ್ ಠಾಣೆಯ ಯಶಸ್ವಿ ಕಾರ್ಯಾಚರಣೆಯನ್ನ ಎಸ್ಪಿ ವಿಷ್ಣುವರ್ಧನ್ ಶ್ಲಾಘಿಸಿದ್ದಾರೆ…

Spread the love

Related post

ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಮೈಸೂರು,ಮೇ9,Tv10 ಕನ್ನಡ ಪಾಕ್ ಉಗ್ರರ ಮೇಲೆ ಭಾರತದ ಸೈನಿಕರಿಂದ ಸಿಂಧೂರ್ ಆಪರೇಷನ್ಯೋಧರ ಹೆಸರಿನಲ್ಲಿ ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.ಮೈಸೂರಿನ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರುಕೋಟೆ ಆಂಜನೇಯ ದೇವಸ್ಥಾನದಲ್ಲಿ ಸೈನಿಕರ…
ಸಿಡಿಯಮ್ಮನ ಜಾತ್ರಾ ಮಹೋತ್ಸವ ಸಂಭ್ರಮ…ಸಂಸದ ಯದುವೀರ್ ಭಾಗಿ…ವಿಶೇಷ ಪೂಜೆ…

ಸಿಡಿಯಮ್ಮನ ಜಾತ್ರಾ ಮಹೋತ್ಸವ ಸಂಭ್ರಮ…ಸಂಸದ ಯದುವೀರ್ ಭಾಗಿ…ವಿಶೇಷ ಪೂಜೆ…

ಹುಣಸೂರು,ಮೇ2,Tv10 ಕನ್ನಡ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಸಿಡಿಯಮ್ಮನ ಜಾತ್ರಾ ಮಹೋತ್ಸವ ಅದ್ದೂರಿಯಿಂದ ನೆರವೇರಿತು.ಹಲವಾರು ಐತಿಹ್ಯವುಳ್ಳ, ರಾಜ್ಯಾದ್ಯಂತ ಭಕ್ತರನ್ನು ಹೊಂದಿರುವ, ಪವಾಡದ ಜಾತ್ರೆಯೆಂದೇ ಪ್ರತಿಬಿಂಬಿತವಾಗಿರುವ ಗ್ರಾಮದೇವತೆ ಜಾತ್ರಾ ಮಹೋತ್ಸವದಲ್ಲಿ…
ಮರದ ಬಳಿ ಮಲಗಿದ್ದ ರೈತನ ಕಾಲುಗಳ ಮೇಲೆ ಹರಿದ ಟಿಪ್ಪರ್…ಎರಡು ಕಾಲುಗಳು ಮುರಿತ…

ಮರದ ಬಳಿ ಮಲಗಿದ್ದ ರೈತನ ಕಾಲುಗಳ ಮೇಲೆ ಹರಿದ ಟಿಪ್ಪರ್…ಎರಡು ಕಾಲುಗಳು…

ಮಂಡ್ಯ,ಏ30,Tv10 ಕನ್ನಡ ಅರಳಿ ಮರದ ಕೆಳಗೆ ವಿರಮಿಸುತ್ತಿದ್ದ ರೈತನ ಕಾಲುಗಳ ಮೇಲೆ ಟಿಪ್ಪರ್ ಹರಿದ ಮಂಡ್ಯ ಜಿಲ್ಲೆ ಕೆ.ಆರ್‌‌.ಪೇಟೆ ತಾಲೂಕಿನ ಆಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಪುಟ್ಟೇಗೌಡ ಎಂಬುವವರ ಮೇಲೆ ಹರಿದ…

Leave a Reply

Your email address will not be published. Required fields are marked *