ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ಆರೋಪ…ಕ.ರಾ.ವಿ.ಆರೋಗ್ಯ ಕೇಂದ್ರದ ಅಧಿಕಾರಿ ವಿರುದ್ದ ದೂರು…

ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ಆರೋಪ…ಕ.ರಾ.ವಿ.ಆರೋಗ್ಯ ಕೇಂದ್ರದ ಅಧಿಕಾರಿ ವಿರುದ್ದ ದೂರು…

ನಂಜನಗೂಡು,ಅ21,Tv10 ಕನ್ನಡ

ಮಹಿಳಾ ನೌಕರರೊಂದಿಗೆ ಅಸಭ್ಯವಾಗಿ ಹಾಗೂ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ನಂಜನಗೂಡಿನ ಕರ್ನಾಟಕ ರಾಜ್ಯ ವಿಮಾ ನೌಕರರ ಆರೋಗ್ಯ ಕೇಂದ್ರ ಹಿರಿಯ ಫಾರ್ಮೆಸಿ ಅಧಿಕಾರಿ ಗಣೇಶ್ ಎಸ್.ಟಿ.ವಿರುದ್ದ ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ ಬಗ್ಗೆ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ದೀಪಕ್ ರವರು ಸ್ಪಷ್ಟಪಡಿಸಿದ್ದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಹಲವು ಮಹಿಳಾ ನೌಕರರಿಗೆ ಲೈಂಗಿಕ ದೌರ್ಜನ್ಯ ವ್ಯಾಪ್ತಿಗೆ ಒಳಪಡುವ ಕರ್ತವ್ಯ ನಿರ್ವಹಿಸುವ ವೇಳೆ ಅನುಚಿತವಾಗಿ ವರ್ತಿಸುವುದು,ಅಶ್ಲೀಲ ಪದಪ್ರಯೋಗ ಮಾಡುವುದು,ಅಶ್ಲೀಲ ಮೊಬೈಲ್ ಸಂದೇಶಗಳನ್ನ ಕಳಿಸುವುದು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನ ಮಾಡಿದ್ದಾರೆ.ಈ ಬಗ್ಗೆ ನೊಂದ ಮಹಿಳಾ ನೌಕರರು ಮೌಖಿಕವಾಗಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.ಖಾಸಗಿ ಜೀವನಕ್ಕೆ ತೊಂದರೆ ಆಗುವ ಹಿನ್ನಲೆ ಲಿಖಿತ ದೂರು ಸಲ್ಲಿಸದೆ ಮೌಖಿಕ ದೂರು ನೀಡಿರುವ ಹಿನ್ನಲೆ ಸದರಿ ಹಿರಿಯ ಫಾರ್ಮೆಸಿ ಅಧಿಕಾರಿ ಗಣೇಶ್ ವಿರುದ್ದ ಕ್ರಮ ಕೈಗೊಳ್ಳುವಂತೆ ಬೆಂಗಳೂರಿನಲ್ಲಿರುವ ರಾಜ್ಯ ಸರ್ಕಾರಿ ನೌಕರರ ವಿಮಾ ಆರೋಗ್ಯ ಇಲಾಖೆ ನಿರ್ದೇಶಕರಿಗೆ ನಂಜನಗೂಡಿನ ಕೇಂದ್ರದ ಅಧಿಕಾರಿ ಲಿಖಿತ ದೂರು ನೀಡಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *