ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ

ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ


ಮೈಸೂರು,ಅ23,Tv10 ಕನ್ನಡ

ಮೈಸೂರಿನ ಸತ್ಯವತಿ ವಿಜಯ ರಾಘವಾಚಾರ್ ಛಾರಿಟಬಲ್ ಟ್ರಸ್ಟ್ ವತಿಯಿಂದ, ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ದತ್ತಿ ನಿಧಿಗೆ 2.5 ಲಕ್ಷ ಹಣವನ್ನು ದೇಣಿಗೆ ರೂಪದಲ್ಲಿ ನೀಡ ಲಾಯಿತು. ಹಲವಾರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ಕಾರ್ಯಪ್ರವೃತ್ತರಾಗಿರುವ ಡಾ.ಎ.ಪುಷ್ಪ ಅಯ್ಯಂಗಾರ್ ಮತ್ತು ಎ.ವೈದೇಹಿ ಅಯ್ಯಂಗಾರ್ ಸಹೋದರಿಯರ ನೇತೃತ್ವದಲ್ಲಿ ಬುಧವಾರ ದೇಣಿಗೆಯ ಚೆಕ್ ಅನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ.ಎಸ್.ಅಹಲ್ಯಾ ಅವರಿಗೆ ಮೈಸೂರಿನ ಸರಸ್ವತಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಹಸ್ತಾಂತರಿಸಲಾಯಿತು.
ಈ ವೇಳೆ ಡಾ.ಎ.ಪುಷ್ಪ ಅಯ್ಯಂ ಗಾರ್ ಮತ್ತು ಎ.ವೈದೇಹಿ ಅಯ್ಯಂ ಗಾರ್ ಅವರು ಮಾತನಾಡಿ, ಕನ್ನಡ ಸೇವೆಗೆ ನಮ್ಮ ಜೀವನ ಮುಡಿಪಾಗಿದೆ. ಈವರೆಗೂ ನಮ್ಮ ತಂದೆ-ತಾಯಿ ಸತ್ಯವತಿ ಹಾಗೂ ವಿಜಯ ರಾಘ ವಾಚಾರ್ ಅವರ ಹೆಸರಿನಲ್ಲಿ ಇಂತಹ ಸೇವೆಗಳನ್ನು ಮಾಡಿಕೊಂಡು ಬರಲಾ ಗುತ್ತಿದೆ.ಅದರಲ್ಲೂ ಆಹಾರ, ಅಕ್ಷರ ಮತ್ತು ಆರೋಗ್ಯಕ್ಕೆ ಉತ್ತೇಜನ ನೀಡುವುದೇ ನಮ್ಮ ಮೂಲ ಉದ್ದೇಶವಾಗಿದ್ದು, ಯಾವುದೇ ಜಾತಿ-ಮತ ಬೇಧವಿಲ್ಲದೇ ಉತ್ತೇಜನ ನೀಡಿ, ಮುಂದಿನ ದಿನಗಳಲ್ಲೂ ಎಲ್ಲಾ ಸಂಘ ಸಂಸ್ಥೆಗಳಿಗೂ ಈ ಕಾರ್ಯವನ್ನು ವಿಸ್ತರಿಸಿಕೊಂಡು ಮುಂದುವರೆಸಿಕೊಂಡು ಹೋಗುವುದಾಗಿ ನುಡಿದರು.

ಈ ಸಂದರ್ಭದಲ್ಲಿ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಇನ್ನಿತರರು ಹಾಜರಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *