ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ

ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ


ಮೈಸೂರು,ಅ23,Tv10 ಕನ್ನಡ

ಮೈಸೂರಿನ ಸತ್ಯವತಿ ವಿಜಯ ರಾಘವಾಚಾರ್ ಛಾರಿಟಬಲ್ ಟ್ರಸ್ಟ್ ವತಿಯಿಂದ, ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ದತ್ತಿ ನಿಧಿಗೆ 2.5 ಲಕ್ಷ ಹಣವನ್ನು ದೇಣಿಗೆ ರೂಪದಲ್ಲಿ ನೀಡ ಲಾಯಿತು. ಹಲವಾರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ಕಾರ್ಯಪ್ರವೃತ್ತರಾಗಿರುವ ಡಾ.ಎ.ಪುಷ್ಪ ಅಯ್ಯಂಗಾರ್ ಮತ್ತು ಎ.ವೈದೇಹಿ ಅಯ್ಯಂಗಾರ್ ಸಹೋದರಿಯರ ನೇತೃತ್ವದಲ್ಲಿ ಬುಧವಾರ ದೇಣಿಗೆಯ ಚೆಕ್ ಅನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ.ಎಸ್.ಅಹಲ್ಯಾ ಅವರಿಗೆ ಮೈಸೂರಿನ ಸರಸ್ವತಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಹಸ್ತಾಂತರಿಸಲಾಯಿತು.
ಈ ವೇಳೆ ಡಾ.ಎ.ಪುಷ್ಪ ಅಯ್ಯಂ ಗಾರ್ ಮತ್ತು ಎ.ವೈದೇಹಿ ಅಯ್ಯಂ ಗಾರ್ ಅವರು ಮಾತನಾಡಿ, ಕನ್ನಡ ಸೇವೆಗೆ ನಮ್ಮ ಜೀವನ ಮುಡಿಪಾಗಿದೆ. ಈವರೆಗೂ ನಮ್ಮ ತಂದೆ-ತಾಯಿ ಸತ್ಯವತಿ ಹಾಗೂ ವಿಜಯ ರಾಘ ವಾಚಾರ್ ಅವರ ಹೆಸರಿನಲ್ಲಿ ಇಂತಹ ಸೇವೆಗಳನ್ನು ಮಾಡಿಕೊಂಡು ಬರಲಾ ಗುತ್ತಿದೆ.ಅದರಲ್ಲೂ ಆಹಾರ, ಅಕ್ಷರ ಮತ್ತು ಆರೋಗ್ಯಕ್ಕೆ ಉತ್ತೇಜನ ನೀಡುವುದೇ ನಮ್ಮ ಮೂಲ ಉದ್ದೇಶವಾಗಿದ್ದು, ಯಾವುದೇ ಜಾತಿ-ಮತ ಬೇಧವಿಲ್ಲದೇ ಉತ್ತೇಜನ ನೀಡಿ, ಮುಂದಿನ ದಿನಗಳಲ್ಲೂ ಎಲ್ಲಾ ಸಂಘ ಸಂಸ್ಥೆಗಳಿಗೂ ಈ ಕಾರ್ಯವನ್ನು ವಿಸ್ತರಿಸಿಕೊಂಡು ಮುಂದುವರೆಸಿಕೊಂಡು ಹೋಗುವುದಾಗಿ ನುಡಿದರು.

ಈ ಸಂದರ್ಭದಲ್ಲಿ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಇನ್ನಿತರರು ಹಾಜರಿದ್ದರು…

Spread the love

Related post

ಪ್ರಿಯತಮೆಯನ್ನ ಕೊಲೆ ಮಾಡಿ ಚಿನ್ನಾಭರಣ ದೋಚಿ ತನ್ನ ಜಮೀನಿನಲ್ಲಿ ಶವ ಹೂತಿಟ್ಟ ಐನಾತಿ…ಪ್ರಿಯಕರ ಅಂದರ್…

ಪ್ರಿಯತಮೆಯನ್ನ ಕೊಲೆ ಮಾಡಿ ಚಿನ್ನಾಭರಣ ದೋಚಿ ತನ್ನ ಜಮೀನಿನಲ್ಲಿ ಶವ ಹೂತಿಟ್ಟ…

ಮಂಡ್ಯ,ಜೂ24,Tv10 ಕನ್ನಡ ವಿವಾಹಿತ ಮಹಿಳೆಯನ್ನ ಇನ್ಸ್ಟಾಗ್ರಾಂ ನಲ್ಲಿ ಪರಿಚಯಿಸಿಕೊಂಡು ಪ್ರೀತಿಸಿ ಚೆಕ್ಕಂದವಾಗಿ ವಿಹರಿಸಿ ಹತ್ತೇ ದಿನಗಳಲ್ಲಿ ಕೊಲೈಗೈದು ಶವವನ್ನ ತನ್ನ ಜಮೀನಿನಲ್ಲೇ ಬಚ್ಚಿಟ್ಟ ಪ್ರಿಯಕರ ಪೊಲೀಸರ ಅತಿಥಿಯಾದ ಘಟನೆ…
ಕಾವೇರಿ ನದಿ ಪಾತ್ರದ ಜನತೆಗೆ ಪ್ರವಾಹದ ಮುನ್ಸೂಚನೆ…ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ…

ಕಾವೇರಿ ನದಿ ಪಾತ್ರದ ಜನತೆಗೆ ಪ್ರವಾಹದ ಮುನ್ಸೂಚನೆ…ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ…

ಕೆ.ಆರ್.ಎಸ್,ಜೂ23,Tv10 ಕನ್ನಡ ಕೊಡಗಿನಲ್ಲಿ ಮಳೆ ಪ್ರಮಾಣ ಹೆಚ್ಚಾದ ಹಿನ್ನಲೆ ಕೆ ಆರ್ ಎಸ್ ಗೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದ ಈ ಹಿನ್ನಲೆ ಹೊರಹರಿವಿನ ಪ್ರಮಾಣವನ್ನ ಹೆಚ್ಚಿಸಲಾಗಿದೆ.5000 ಕ್ಯೂಸೆಕ್ಸ್ ನಿಂದ…
ನಿರ್ಲಕ್ಷ್ಯಕ್ಕೆ ಒಳಗಾದ ಕಳಲೆ ಲಕ್ಷ್ಮಿಕಾಂತ ದೇವಸ್ಥಾನ…ಶತಮಾನಗಳ ಇತಿಹಾಸವಿರುವ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ…

ನಿರ್ಲಕ್ಷ್ಯಕ್ಕೆ ಒಳಗಾದ ಕಳಲೆ ಲಕ್ಷ್ಮಿಕಾಂತ ದೇವಸ್ಥಾನ…ಶತಮಾನಗಳ ಇತಿಹಾಸವಿರುವ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ…

ನಂಜನಗೂಡು,ಜೂ23,Tv10 ಕನ್ನಡ ಶಿಥಿಲಗೊಂಡ ದೇವಾಲಯದ ಕಟ್ಟಡ,ಗೋಪುರಗಳ ಮೇಲೆ ಬೆಳೆದು ನಿಂತ ಸಸ್ಯಗಳು,ಬಿರುಕು ಬಿಟ್ಟ ಕಟ್ಟಡ,ಭಿನ್ನವಾಗಿರುವ ದೇವರ ಮೂರ್ತಿಗಳು,ಮುರಿದು ಮೂಲೆ ಸೇರಿರುವ ರಥದ ಚಕ್ರಗಳು,ಮಣ್ಣು ಹಿಡಿದ ರಥ ಎಳೆಯವ ಹಗ್ಗಗಳು,ಭಕ್ತರಿಗೆ…

Leave a Reply

Your email address will not be published. Required fields are marked *