ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ

ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ


ಮೈಸೂರು,ಅ23,Tv10 ಕನ್ನಡ

ಮೈಸೂರಿನ ಸತ್ಯವತಿ ವಿಜಯ ರಾಘವಾಚಾರ್ ಛಾರಿಟಬಲ್ ಟ್ರಸ್ಟ್ ವತಿಯಿಂದ, ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ದತ್ತಿ ನಿಧಿಗೆ 2.5 ಲಕ್ಷ ಹಣವನ್ನು ದೇಣಿಗೆ ರೂಪದಲ್ಲಿ ನೀಡ ಲಾಯಿತು. ಹಲವಾರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ಕಾರ್ಯಪ್ರವೃತ್ತರಾಗಿರುವ ಡಾ.ಎ.ಪುಷ್ಪ ಅಯ್ಯಂಗಾರ್ ಮತ್ತು ಎ.ವೈದೇಹಿ ಅಯ್ಯಂಗಾರ್ ಸಹೋದರಿಯರ ನೇತೃತ್ವದಲ್ಲಿ ಬುಧವಾರ ದೇಣಿಗೆಯ ಚೆಕ್ ಅನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ.ಎಸ್.ಅಹಲ್ಯಾ ಅವರಿಗೆ ಮೈಸೂರಿನ ಸರಸ್ವತಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಹಸ್ತಾಂತರಿಸಲಾಯಿತು.
ಈ ವೇಳೆ ಡಾ.ಎ.ಪುಷ್ಪ ಅಯ್ಯಂ ಗಾರ್ ಮತ್ತು ಎ.ವೈದೇಹಿ ಅಯ್ಯಂ ಗಾರ್ ಅವರು ಮಾತನಾಡಿ, ಕನ್ನಡ ಸೇವೆಗೆ ನಮ್ಮ ಜೀವನ ಮುಡಿಪಾಗಿದೆ. ಈವರೆಗೂ ನಮ್ಮ ತಂದೆ-ತಾಯಿ ಸತ್ಯವತಿ ಹಾಗೂ ವಿಜಯ ರಾಘ ವಾಚಾರ್ ಅವರ ಹೆಸರಿನಲ್ಲಿ ಇಂತಹ ಸೇವೆಗಳನ್ನು ಮಾಡಿಕೊಂಡು ಬರಲಾ ಗುತ್ತಿದೆ.ಅದರಲ್ಲೂ ಆಹಾರ, ಅಕ್ಷರ ಮತ್ತು ಆರೋಗ್ಯಕ್ಕೆ ಉತ್ತೇಜನ ನೀಡುವುದೇ ನಮ್ಮ ಮೂಲ ಉದ್ದೇಶವಾಗಿದ್ದು, ಯಾವುದೇ ಜಾತಿ-ಮತ ಬೇಧವಿಲ್ಲದೇ ಉತ್ತೇಜನ ನೀಡಿ, ಮುಂದಿನ ದಿನಗಳಲ್ಲೂ ಎಲ್ಲಾ ಸಂಘ ಸಂಸ್ಥೆಗಳಿಗೂ ಈ ಕಾರ್ಯವನ್ನು ವಿಸ್ತರಿಸಿಕೊಂಡು ಮುಂದುವರೆಸಿಕೊಂಡು ಹೋಗುವುದಾಗಿ ನುಡಿದರು.

ಈ ಸಂದರ್ಭದಲ್ಲಿ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಇನ್ನಿತರರು ಹಾಜರಿದ್ದರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *