ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ

ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ


ಮೈಸೂರು,ಅ23,Tv10 ಕನ್ನಡ

ಮೈಸೂರಿನ ಸತ್ಯವತಿ ವಿಜಯ ರಾಘವಾಚಾರ್ ಛಾರಿಟಬಲ್ ಟ್ರಸ್ಟ್ ವತಿಯಿಂದ, ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ದತ್ತಿ ನಿಧಿಗೆ 2.5 ಲಕ್ಷ ಹಣವನ್ನು ದೇಣಿಗೆ ರೂಪದಲ್ಲಿ ನೀಡ ಲಾಯಿತು. ಹಲವಾರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ಕಾರ್ಯಪ್ರವೃತ್ತರಾಗಿರುವ ಡಾ.ಎ.ಪುಷ್ಪ ಅಯ್ಯಂಗಾರ್ ಮತ್ತು ಎ.ವೈದೇಹಿ ಅಯ್ಯಂಗಾರ್ ಸಹೋದರಿಯರ ನೇತೃತ್ವದಲ್ಲಿ ಬುಧವಾರ ದೇಣಿಗೆಯ ಚೆಕ್ ಅನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ.ಎಸ್.ಅಹಲ್ಯಾ ಅವರಿಗೆ ಮೈಸೂರಿನ ಸರಸ್ವತಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಹಸ್ತಾಂತರಿಸಲಾಯಿತು.
ಈ ವೇಳೆ ಡಾ.ಎ.ಪುಷ್ಪ ಅಯ್ಯಂ ಗಾರ್ ಮತ್ತು ಎ.ವೈದೇಹಿ ಅಯ್ಯಂ ಗಾರ್ ಅವರು ಮಾತನಾಡಿ, ಕನ್ನಡ ಸೇವೆಗೆ ನಮ್ಮ ಜೀವನ ಮುಡಿಪಾಗಿದೆ. ಈವರೆಗೂ ನಮ್ಮ ತಂದೆ-ತಾಯಿ ಸತ್ಯವತಿ ಹಾಗೂ ವಿಜಯ ರಾಘ ವಾಚಾರ್ ಅವರ ಹೆಸರಿನಲ್ಲಿ ಇಂತಹ ಸೇವೆಗಳನ್ನು ಮಾಡಿಕೊಂಡು ಬರಲಾ ಗುತ್ತಿದೆ.ಅದರಲ್ಲೂ ಆಹಾರ, ಅಕ್ಷರ ಮತ್ತು ಆರೋಗ್ಯಕ್ಕೆ ಉತ್ತೇಜನ ನೀಡುವುದೇ ನಮ್ಮ ಮೂಲ ಉದ್ದೇಶವಾಗಿದ್ದು, ಯಾವುದೇ ಜಾತಿ-ಮತ ಬೇಧವಿಲ್ಲದೇ ಉತ್ತೇಜನ ನೀಡಿ, ಮುಂದಿನ ದಿನಗಳಲ್ಲೂ ಎಲ್ಲಾ ಸಂಘ ಸಂಸ್ಥೆಗಳಿಗೂ ಈ ಕಾರ್ಯವನ್ನು ವಿಸ್ತರಿಸಿಕೊಂಡು ಮುಂದುವರೆಸಿಕೊಂಡು ಹೋಗುವುದಾಗಿ ನುಡಿದರು.

ಈ ಸಂದರ್ಭದಲ್ಲಿ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಇನ್ನಿತರರು ಹಾಜರಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *