ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ

ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ


ಮೈಸೂರು,ಅ23,Tv10 ಕನ್ನಡ

ಮೈಸೂರಿನ ಸತ್ಯವತಿ ವಿಜಯ ರಾಘವಾಚಾರ್ ಛಾರಿಟಬಲ್ ಟ್ರಸ್ಟ್ ವತಿಯಿಂದ, ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ದತ್ತಿ ನಿಧಿಗೆ 2.5 ಲಕ್ಷ ಹಣವನ್ನು ದೇಣಿಗೆ ರೂಪದಲ್ಲಿ ನೀಡ ಲಾಯಿತು. ಹಲವಾರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ಕಾರ್ಯಪ್ರವೃತ್ತರಾಗಿರುವ ಡಾ.ಎ.ಪುಷ್ಪ ಅಯ್ಯಂಗಾರ್ ಮತ್ತು ಎ.ವೈದೇಹಿ ಅಯ್ಯಂಗಾರ್ ಸಹೋದರಿಯರ ನೇತೃತ್ವದಲ್ಲಿ ಬುಧವಾರ ದೇಣಿಗೆಯ ಚೆಕ್ ಅನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ.ಎಸ್.ಅಹಲ್ಯಾ ಅವರಿಗೆ ಮೈಸೂರಿನ ಸರಸ್ವತಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಹಸ್ತಾಂತರಿಸಲಾಯಿತು.
ಈ ವೇಳೆ ಡಾ.ಎ.ಪುಷ್ಪ ಅಯ್ಯಂ ಗಾರ್ ಮತ್ತು ಎ.ವೈದೇಹಿ ಅಯ್ಯಂ ಗಾರ್ ಅವರು ಮಾತನಾಡಿ, ಕನ್ನಡ ಸೇವೆಗೆ ನಮ್ಮ ಜೀವನ ಮುಡಿಪಾಗಿದೆ. ಈವರೆಗೂ ನಮ್ಮ ತಂದೆ-ತಾಯಿ ಸತ್ಯವತಿ ಹಾಗೂ ವಿಜಯ ರಾಘ ವಾಚಾರ್ ಅವರ ಹೆಸರಿನಲ್ಲಿ ಇಂತಹ ಸೇವೆಗಳನ್ನು ಮಾಡಿಕೊಂಡು ಬರಲಾ ಗುತ್ತಿದೆ.ಅದರಲ್ಲೂ ಆಹಾರ, ಅಕ್ಷರ ಮತ್ತು ಆರೋಗ್ಯಕ್ಕೆ ಉತ್ತೇಜನ ನೀಡುವುದೇ ನಮ್ಮ ಮೂಲ ಉದ್ದೇಶವಾಗಿದ್ದು, ಯಾವುದೇ ಜಾತಿ-ಮತ ಬೇಧವಿಲ್ಲದೇ ಉತ್ತೇಜನ ನೀಡಿ, ಮುಂದಿನ ದಿನಗಳಲ್ಲೂ ಎಲ್ಲಾ ಸಂಘ ಸಂಸ್ಥೆಗಳಿಗೂ ಈ ಕಾರ್ಯವನ್ನು ವಿಸ್ತರಿಸಿಕೊಂಡು ಮುಂದುವರೆಸಿಕೊಂಡು ಹೋಗುವುದಾಗಿ ನುಡಿದರು.

ಈ ಸಂದರ್ಭದಲ್ಲಿ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಇನ್ನಿತರರು ಹಾಜರಿದ್ದರು…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *