ಕುವೆಂಪುನಗರ ಠಾಣೆ ಪೊಲೀಸರ ಕಾರ್ಯಾಚರಣೆ…ಚೈನ್ ಸ್ನಾಚರ್ ಬಂಧನ…2.80 ಲಕ್ಷ ಮೌಲ್ಯದ ಚಿನ್ನದ ಸರ ವಶ…

ಕುವೆಂಪುನಗರ ಠಾಣೆ ಪೊಲೀಸರ ಕಾರ್ಯಾಚರಣೆ…ಚೈನ್ ಸ್ನಾಚರ್ ಬಂಧನ…2.80 ಲಕ್ಷ ಮೌಲ್ಯದ ಚಿನ್ನದ ಸರ ವಶ…

ಮೈಸೂರು,ಅ23,Tv10 ಕನ್ನಡ

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಸರಗಳ್ಳನನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 40 ಗ್ರಾಂ ತೂಕದ ಎರಡು ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಹೋಂಡಾ ಆಕ್ಟಿವಾ ವಶಪಡಿಸಿಕೊಂಡಿದ್ದಾರೆ.ಚಾಮರಾಜನಗರ ನಿವಾಸಿ ವಿನಯ್ ಕುಮಾರ್ (27) ಬಂಧಿತ ಆರೋಪಿ.

18-10-2024 ರಂದು ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಧುವನ ಬಡಾವಣೆ ಬಳಿ ಮಹಿಳೆ ಕಮಲ ಎಂಬುವರು ನಡೆದುಕೊಂಡು ಹೋಗುತ್ತಿದ್ದಾಗ ಹೋಂಡಾ ಆಕ್ಟಿವಾದಲ್ಲಿ ಬಂದ ವಿನಯ್ ಕುಮಾರ್ 30 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾನೆ.ಈ ಕುರಿತಂತೆ ಕಮಲ ರವರು ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಕೂಡಲೇ ಕಾರ್ಯೋನ್ಮುಖರಾದ ಪೊಲೀಸರು ಸಿಸಿ ಕ್ಯಾಮರಾ ದೃಶ್ಯಗಳನ್ನ ಪರಿಶೀಲನೆ ನಡೆಸಿ ಆರೋಪಿಯನ್ನ ಸೆದೆಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯ ಬಂಧನಕ್ಕೆ ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ, ಕೃಷ್ಟರಾಜ ವಿಭಾಗದ ಎಸಿಪಿ ರಮೇಶ್ ಕುಮಾರ್ ಉಸ್ತುವಾರಿಯಲ್ಲಿ ಇನ್ಸ್ಪೆಕ್ಟರ್ ಅರುಣ್ ಎಲ್ ಹಾಗೂ ಪಿಎಸ್ಸೈ ಗೋಪಾಲ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಆನಂದ್,ಮಂಜುನಾಥ್,ಮಹೇಶ್ವರ್,ಮಂಜು,ನಾಗೇಶ್,ಯಶವಂತ್,ಹಜರತ್ ಹಾಗೂ ಸುರೇಶ್ ರವರನ್ನೊಳಗೊಂಡ ತಂಡ ರಚಿಸಿದ್ದು ಘಟನೆ ನಡೆದ ಎರಡು ದಿನಗಳಲ್ಲಿ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿಯಿಂದ 70 ಸಾವಿರ ಮೌಲ್ಯದ ಹೋಂಡಾ ಆಕ್ಟಿವಾ ಹಾಗೂ 2.80 ಲಕ್ಷ ಮೌಲ್ಯದ ಎರಡು ಚಿನ್ನದ ಸರಗಳನ್ನ ವಶಪಡಿಸಿಕೊಳ್ಳಲಾಗಿದೆ.

ಪತ್ತೆ ಕಾರ್ಯವನ್ನ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ಹಾಗೂ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ರವರು ಪ್ರಶಂಸಿಸಿರುತ್ತಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *