ಗ್ರಾಮದಲ್ಲೇ ರಾಜಿ ಮಾಡಿಕೊಳ್ಳದೆ ಪೊಲೀಸರ ಮೊರೆ ಹೋದ ಕುಟುಂಬದ ಮೇಲೆ ಸಾಮಾಜಿಕ ಬಹಿಷ್ಕಾರ…ಜಿಲ್ಲಾಧಿಕಾರಿಗಳ ಮುಂದೆ ಆತ್ಮಹತ್ಯೆಗೆ ನಿರ್ಧಾರ…

ಗ್ರಾಮದಲ್ಲೇ ರಾಜಿ ಮಾಡಿಕೊಳ್ಳದೆ ಪೊಲೀಸರ ಮೊರೆ ಹೋದ ಕುಟುಂಬದ ಮೇಲೆ ಸಾಮಾಜಿಕ ಬಹಿಷ್ಕಾರ…ಜಿಲ್ಲಾಧಿಕಾರಿಗಳ ಮುಂದೆ ಆತ್ಮಹತ್ಯೆಗೆ ನಿರ್ಧಾರ…

ಚಾಮರಾಜನಗರ,ಅ24,Tv10 ಕನ್ನಡ

ಗಲಾಟೆ ವಿಚಾರಕ್ಕೆ ಸಂಭಂಧಿಸಿದಂತೆ ಕುಟುಂಬವೊಂದು ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋದ ಹಿನ್ನಲೆ ಗ್ರಾಮದ ಮುಖಂಡರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಚಾಮರಾಜನಗರ ಜಿಲ್ಲೆ ಹರದನಹಳ್ಳಿ ಹೋಬಳಿ ಕಿಲಗೆರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ಎರಡು ವರ್ಷಗಳ ಹಿಂದೆ ಹೇರಿದ ಬಹಿಷ್ಕಾರದಿಂದ ನೊಂದಿರುವ ಕುಟುಂಬ ನ್ಯಾಯಕ್ಕಾಗಿ ಅಲೆದು ಹೈರಾಣರಾಗಿದ್ದಾರೆ.ನ್ಯಾಯ ದೊರೆಯದಿದ್ದಲ್ಲಿ ಜಿಲ್ಲಾಧಿಕಾರಿಗಳ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ಧರಿಸಿದ್ದಾರೆ.

ಕಿಲಗೆರೆ ಗ್ರಾಮದ ಸಿದ್ದರಾಜು ಕುಟುಂಬದ ಮೇಲೆ ಗ್ರಾಮದ ಮುಖಂಡರಾದ ಮಲ್ಲಯ್ಯ,ಮಸಣಯ್ಯ,ಬಸವರಾಜು,ಚೆನ್ನಯ್ಯ,ಬಸವಯ್ಯ ಹಾಗೂ ಇತರರು ಕ್ಷುಲ್ಲಕ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ ಹೇರಿದ್ದಾರೆ.ಮಗಳ ವಿಚಾರದಲ್ಲಿ ಗ್ರಾಮದಲ್ಲಿ ಗಲಾಟೆ ಆಗಿದೆ.ಈ ವೇಳೆ ನ್ಯಾಯಕ್ಕಾಗಿ ಸಿದ್ದರಾಜು ಗ್ರಾಮದ ಪಂಚಾಯ್ತಿ ಗಮನಕ್ಕೆ ತರದೆ ನೇರವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.ಹೀಗಾಗಿ ಮುಖಂಡರು ಬಹಿಷ್ಕಾರದ ಶಿಕ್ಷೆ ಹೇರಿದ್ದಾರೆ.ಗ್ರಾಮದಲ್ಲಿ ಈ ಕುಟುಂಬವನ್ನ ಮಾತನಾಡಿದ್ರೆ 5 ಸಾವಿರ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಕುಡಿಯಲು ನೀರು ಕೊಡುವಂತಿಲ್ಲ,ಅಂಗಡಿಗಳಲ್ಲಿ ಪದಾರ್ಥ ಮಾರುವಂತಿಲ್ಲ,ಶಾಲೆಗೆ ಹೋಗುವಂತಿಲ್ಲ ಹೀಗೆ ಹಲವು ಷರತ್ತುಗಳನ್ನ ಹಾಕಿ ಇಡೀ ಕುಟುಂಬಕ್ಕೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ.ನಮಗೆ ಕಾನೂನು ರಕ್ಷಣೆ ಬೇಕು ಹಾಗೂ ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಮತ್ತು ನಮ್ಮ ಮೇಲೆ ದೌರ್ಜನ್ಯವೆಸಗುತ್ತಿರುವವರಿಗೆ ಶಿಕ್ಷೆ ನೀಡಿ ಗ್ರಾಮದಲ್ಲಿ ನೆಮ್ಮದಿಯಿಂದ ವಾಸ ಮಾಡಲು ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ…

Spread the love

Related post

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…
ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ…
ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…

Leave a Reply

Your email address will not be published. Required fields are marked *