ಗ್ರಾಮದಲ್ಲೇ ರಾಜಿ ಮಾಡಿಕೊಳ್ಳದೆ ಪೊಲೀಸರ ಮೊರೆ ಹೋದ ಕುಟುಂಬದ ಮೇಲೆ ಸಾಮಾಜಿಕ ಬಹಿಷ್ಕಾರ…ಜಿಲ್ಲಾಧಿಕಾರಿಗಳ ಮುಂದೆ ಆತ್ಮಹತ್ಯೆಗೆ ನಿರ್ಧಾರ…

ಗ್ರಾಮದಲ್ಲೇ ರಾಜಿ ಮಾಡಿಕೊಳ್ಳದೆ ಪೊಲೀಸರ ಮೊರೆ ಹೋದ ಕುಟುಂಬದ ಮೇಲೆ ಸಾಮಾಜಿಕ ಬಹಿಷ್ಕಾರ…ಜಿಲ್ಲಾಧಿಕಾರಿಗಳ ಮುಂದೆ ಆತ್ಮಹತ್ಯೆಗೆ ನಿರ್ಧಾರ…

ಚಾಮರಾಜನಗರ,ಅ24,Tv10 ಕನ್ನಡ

ಗಲಾಟೆ ವಿಚಾರಕ್ಕೆ ಸಂಭಂಧಿಸಿದಂತೆ ಕುಟುಂಬವೊಂದು ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋದ ಹಿನ್ನಲೆ ಗ್ರಾಮದ ಮುಖಂಡರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಚಾಮರಾಜನಗರ ಜಿಲ್ಲೆ ಹರದನಹಳ್ಳಿ ಹೋಬಳಿ ಕಿಲಗೆರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ಎರಡು ವರ್ಷಗಳ ಹಿಂದೆ ಹೇರಿದ ಬಹಿಷ್ಕಾರದಿಂದ ನೊಂದಿರುವ ಕುಟುಂಬ ನ್ಯಾಯಕ್ಕಾಗಿ ಅಲೆದು ಹೈರಾಣರಾಗಿದ್ದಾರೆ.ನ್ಯಾಯ ದೊರೆಯದಿದ್ದಲ್ಲಿ ಜಿಲ್ಲಾಧಿಕಾರಿಗಳ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ಧರಿಸಿದ್ದಾರೆ.

ಕಿಲಗೆರೆ ಗ್ರಾಮದ ಸಿದ್ದರಾಜು ಕುಟುಂಬದ ಮೇಲೆ ಗ್ರಾಮದ ಮುಖಂಡರಾದ ಮಲ್ಲಯ್ಯ,ಮಸಣಯ್ಯ,ಬಸವರಾಜು,ಚೆನ್ನಯ್ಯ,ಬಸವಯ್ಯ ಹಾಗೂ ಇತರರು ಕ್ಷುಲ್ಲಕ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ ಹೇರಿದ್ದಾರೆ.ಮಗಳ ವಿಚಾರದಲ್ಲಿ ಗ್ರಾಮದಲ್ಲಿ ಗಲಾಟೆ ಆಗಿದೆ.ಈ ವೇಳೆ ನ್ಯಾಯಕ್ಕಾಗಿ ಸಿದ್ದರಾಜು ಗ್ರಾಮದ ಪಂಚಾಯ್ತಿ ಗಮನಕ್ಕೆ ತರದೆ ನೇರವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.ಹೀಗಾಗಿ ಮುಖಂಡರು ಬಹಿಷ್ಕಾರದ ಶಿಕ್ಷೆ ಹೇರಿದ್ದಾರೆ.ಗ್ರಾಮದಲ್ಲಿ ಈ ಕುಟುಂಬವನ್ನ ಮಾತನಾಡಿದ್ರೆ 5 ಸಾವಿರ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಕುಡಿಯಲು ನೀರು ಕೊಡುವಂತಿಲ್ಲ,ಅಂಗಡಿಗಳಲ್ಲಿ ಪದಾರ್ಥ ಮಾರುವಂತಿಲ್ಲ,ಶಾಲೆಗೆ ಹೋಗುವಂತಿಲ್ಲ ಹೀಗೆ ಹಲವು ಷರತ್ತುಗಳನ್ನ ಹಾಕಿ ಇಡೀ ಕುಟುಂಬಕ್ಕೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ.ನಮಗೆ ಕಾನೂನು ರಕ್ಷಣೆ ಬೇಕು ಹಾಗೂ ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಮತ್ತು ನಮ್ಮ ಮೇಲೆ ದೌರ್ಜನ್ಯವೆಸಗುತ್ತಿರುವವರಿಗೆ ಶಿಕ್ಷೆ ನೀಡಿ ಗ್ರಾಮದಲ್ಲಿ ನೆಮ್ಮದಿಯಿಂದ ವಾಸ ಮಾಡಲು ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ…

Spread the love

Related post

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…

Leave a Reply

Your email address will not be published. Required fields are marked *