ಗ್ರಾಮದಲ್ಲೇ ರಾಜಿ ಮಾಡಿಕೊಳ್ಳದೆ ಪೊಲೀಸರ ಮೊರೆ ಹೋದ ಕುಟುಂಬದ ಮೇಲೆ ಸಾಮಾಜಿಕ ಬಹಿಷ್ಕಾರ…ಜಿಲ್ಲಾಧಿಕಾರಿಗಳ ಮುಂದೆ ಆತ್ಮಹತ್ಯೆಗೆ ನಿರ್ಧಾರ…

ಗ್ರಾಮದಲ್ಲೇ ರಾಜಿ ಮಾಡಿಕೊಳ್ಳದೆ ಪೊಲೀಸರ ಮೊರೆ ಹೋದ ಕುಟುಂಬದ ಮೇಲೆ ಸಾಮಾಜಿಕ ಬಹಿಷ್ಕಾರ…ಜಿಲ್ಲಾಧಿಕಾರಿಗಳ ಮುಂದೆ ಆತ್ಮಹತ್ಯೆಗೆ ನಿರ್ಧಾರ…

ಚಾಮರಾಜನಗರ,ಅ24,Tv10 ಕನ್ನಡ

ಗಲಾಟೆ ವಿಚಾರಕ್ಕೆ ಸಂಭಂಧಿಸಿದಂತೆ ಕುಟುಂಬವೊಂದು ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋದ ಹಿನ್ನಲೆ ಗ್ರಾಮದ ಮುಖಂಡರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಚಾಮರಾಜನಗರ ಜಿಲ್ಲೆ ಹರದನಹಳ್ಳಿ ಹೋಬಳಿ ಕಿಲಗೆರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ಎರಡು ವರ್ಷಗಳ ಹಿಂದೆ ಹೇರಿದ ಬಹಿಷ್ಕಾರದಿಂದ ನೊಂದಿರುವ ಕುಟುಂಬ ನ್ಯಾಯಕ್ಕಾಗಿ ಅಲೆದು ಹೈರಾಣರಾಗಿದ್ದಾರೆ.ನ್ಯಾಯ ದೊರೆಯದಿದ್ದಲ್ಲಿ ಜಿಲ್ಲಾಧಿಕಾರಿಗಳ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ಧರಿಸಿದ್ದಾರೆ.

ಕಿಲಗೆರೆ ಗ್ರಾಮದ ಸಿದ್ದರಾಜು ಕುಟುಂಬದ ಮೇಲೆ ಗ್ರಾಮದ ಮುಖಂಡರಾದ ಮಲ್ಲಯ್ಯ,ಮಸಣಯ್ಯ,ಬಸವರಾಜು,ಚೆನ್ನಯ್ಯ,ಬಸವಯ್ಯ ಹಾಗೂ ಇತರರು ಕ್ಷುಲ್ಲಕ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ ಹೇರಿದ್ದಾರೆ.ಮಗಳ ವಿಚಾರದಲ್ಲಿ ಗ್ರಾಮದಲ್ಲಿ ಗಲಾಟೆ ಆಗಿದೆ.ಈ ವೇಳೆ ನ್ಯಾಯಕ್ಕಾಗಿ ಸಿದ್ದರಾಜು ಗ್ರಾಮದ ಪಂಚಾಯ್ತಿ ಗಮನಕ್ಕೆ ತರದೆ ನೇರವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.ಹೀಗಾಗಿ ಮುಖಂಡರು ಬಹಿಷ್ಕಾರದ ಶಿಕ್ಷೆ ಹೇರಿದ್ದಾರೆ.ಗ್ರಾಮದಲ್ಲಿ ಈ ಕುಟುಂಬವನ್ನ ಮಾತನಾಡಿದ್ರೆ 5 ಸಾವಿರ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಕುಡಿಯಲು ನೀರು ಕೊಡುವಂತಿಲ್ಲ,ಅಂಗಡಿಗಳಲ್ಲಿ ಪದಾರ್ಥ ಮಾರುವಂತಿಲ್ಲ,ಶಾಲೆಗೆ ಹೋಗುವಂತಿಲ್ಲ ಹೀಗೆ ಹಲವು ಷರತ್ತುಗಳನ್ನ ಹಾಕಿ ಇಡೀ ಕುಟುಂಬಕ್ಕೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ.ನಮಗೆ ಕಾನೂನು ರಕ್ಷಣೆ ಬೇಕು ಹಾಗೂ ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಮತ್ತು ನಮ್ಮ ಮೇಲೆ ದೌರ್ಜನ್ಯವೆಸಗುತ್ತಿರುವವರಿಗೆ ಶಿಕ್ಷೆ ನೀಡಿ ಗ್ರಾಮದಲ್ಲಿ ನೆಮ್ಮದಿಯಿಂದ ವಾಸ ಮಾಡಲು ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *