ಗ್ರಾಮದಲ್ಲೇ ರಾಜಿ ಮಾಡಿಕೊಳ್ಳದೆ ಪೊಲೀಸರ ಮೊರೆ ಹೋದ ಕುಟುಂಬದ ಮೇಲೆ ಸಾಮಾಜಿಕ ಬಹಿಷ್ಕಾರ…ಜಿಲ್ಲಾಧಿಕಾರಿಗಳ ಮುಂದೆ ಆತ್ಮಹತ್ಯೆಗೆ ನಿರ್ಧಾರ…

ಗ್ರಾಮದಲ್ಲೇ ರಾಜಿ ಮಾಡಿಕೊಳ್ಳದೆ ಪೊಲೀಸರ ಮೊರೆ ಹೋದ ಕುಟುಂಬದ ಮೇಲೆ ಸಾಮಾಜಿಕ ಬಹಿಷ್ಕಾರ…ಜಿಲ್ಲಾಧಿಕಾರಿಗಳ ಮುಂದೆ ಆತ್ಮಹತ್ಯೆಗೆ ನಿರ್ಧಾರ…

ಚಾಮರಾಜನಗರ,ಅ24,Tv10 ಕನ್ನಡ

ಗಲಾಟೆ ವಿಚಾರಕ್ಕೆ ಸಂಭಂಧಿಸಿದಂತೆ ಕುಟುಂಬವೊಂದು ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋದ ಹಿನ್ನಲೆ ಗ್ರಾಮದ ಮುಖಂಡರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಚಾಮರಾಜನಗರ ಜಿಲ್ಲೆ ಹರದನಹಳ್ಳಿ ಹೋಬಳಿ ಕಿಲಗೆರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ಎರಡು ವರ್ಷಗಳ ಹಿಂದೆ ಹೇರಿದ ಬಹಿಷ್ಕಾರದಿಂದ ನೊಂದಿರುವ ಕುಟುಂಬ ನ್ಯಾಯಕ್ಕಾಗಿ ಅಲೆದು ಹೈರಾಣರಾಗಿದ್ದಾರೆ.ನ್ಯಾಯ ದೊರೆಯದಿದ್ದಲ್ಲಿ ಜಿಲ್ಲಾಧಿಕಾರಿಗಳ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ಧರಿಸಿದ್ದಾರೆ.

ಕಿಲಗೆರೆ ಗ್ರಾಮದ ಸಿದ್ದರಾಜು ಕುಟುಂಬದ ಮೇಲೆ ಗ್ರಾಮದ ಮುಖಂಡರಾದ ಮಲ್ಲಯ್ಯ,ಮಸಣಯ್ಯ,ಬಸವರಾಜು,ಚೆನ್ನಯ್ಯ,ಬಸವಯ್ಯ ಹಾಗೂ ಇತರರು ಕ್ಷುಲ್ಲಕ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ ಹೇರಿದ್ದಾರೆ.ಮಗಳ ವಿಚಾರದಲ್ಲಿ ಗ್ರಾಮದಲ್ಲಿ ಗಲಾಟೆ ಆಗಿದೆ.ಈ ವೇಳೆ ನ್ಯಾಯಕ್ಕಾಗಿ ಸಿದ್ದರಾಜು ಗ್ರಾಮದ ಪಂಚಾಯ್ತಿ ಗಮನಕ್ಕೆ ತರದೆ ನೇರವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.ಹೀಗಾಗಿ ಮುಖಂಡರು ಬಹಿಷ್ಕಾರದ ಶಿಕ್ಷೆ ಹೇರಿದ್ದಾರೆ.ಗ್ರಾಮದಲ್ಲಿ ಈ ಕುಟುಂಬವನ್ನ ಮಾತನಾಡಿದ್ರೆ 5 ಸಾವಿರ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಕುಡಿಯಲು ನೀರು ಕೊಡುವಂತಿಲ್ಲ,ಅಂಗಡಿಗಳಲ್ಲಿ ಪದಾರ್ಥ ಮಾರುವಂತಿಲ್ಲ,ಶಾಲೆಗೆ ಹೋಗುವಂತಿಲ್ಲ ಹೀಗೆ ಹಲವು ಷರತ್ತುಗಳನ್ನ ಹಾಕಿ ಇಡೀ ಕುಟುಂಬಕ್ಕೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ.ನಮಗೆ ಕಾನೂನು ರಕ್ಷಣೆ ಬೇಕು ಹಾಗೂ ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಮತ್ತು ನಮ್ಮ ಮೇಲೆ ದೌರ್ಜನ್ಯವೆಸಗುತ್ತಿರುವವರಿಗೆ ಶಿಕ್ಷೆ ನೀಡಿ ಗ್ರಾಮದಲ್ಲಿ ನೆಮ್ಮದಿಯಿಂದ ವಾಸ ಮಾಡಲು ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *