ಗ್ರಾ.ಪಂ.ಉಪಾಧ್ಯಕ್ಷೆ ಪತಿ ಕೊಲೆ ಪ್ರಕರಣ…ಮತ್ತೋರ್ವ ಆರೋಪಿ ಬಂಧನ…ರೌಡಿ ಶೀಟರ್ ಧನರಾಜ್ ಭೋಲಾ ಅಂದರ್…

ಗ್ರಾ.ಪಂ.ಉಪಾಧ್ಯಕ್ಷೆ ಪತಿ ಕೊಲೆ ಪ್ರಕರಣ…ಮತ್ತೋರ್ವ ಆರೋಪಿ ಬಂಧನ…ರೌಡಿ ಶೀಟರ್ ಧನರಾಜ್ ಭೋಲಾ ಅಂದರ್…

ನಂಜನಗೂಡು,ಅ25,Tv10 ಕನ್ನಡ

ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಪತಿ ನಂಜುಂಡಸ್ವಾಮಿ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ಮತ್ತೋರ್ವ ಆರೋಪಿಯನ್ನ ಬಂಧಿಸಲಾಗಿದೆ.ಈಗಾಗಲೇ ಬಿಜೆಪಿ ಮುಖಂಡ ಸೇರಿದಂತೆ ನಾಲ್ವರನ್ನ ಬಙಧಿಸಿದ್ದ ಪೊಲೀಸರು ನಿನ್ನೆ ರಾತ್ರಿ ಮತ್ತೋರ್ವ ಆರೋಪಿಯನ್ನ ಬಂಧಿಸಿದ್ದಾರೆ.ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ಬಂಧಿತರ ಸಂಖ್ಯೆ 5 ಕ್ಕೆ ಏರಿದೆ.

ನಂಜನಗೂಡಿನ ರೌಡಿಶೀಟರ್ ಧನರಾಜ್ ಭೋಲಾ ಬಂಧಿತ ಅರೋಪಿ.ಈ ಹಿಂದೆ ಪಿಸ್ತೂಲ್ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿದ್ದ ಧನರಾಜ್ ಭೋಲಾ ಜೈಲು ವಾಸ ಅನುಭವಿಸಿದ್ದ.ಇದೀಗ ನಂಜುಂಡಸ್ವಾಮಿ ಕೊಲೆ ಪ್ರಕರಣದಲ್ಲಿ ಇದೇ ಧನರಾಜ್ ಭೋಲಾ ಭಾಗಿಯಾಗಿ ಪೊಲೀಸರ ಅತಿಥಿಯಾಗಿದ್ದಾನೆ.

ದೇವರಸನ ಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದ ಸುಮತಿ ಅವಧಿ ಮುಗಿದಿದ್ದು ಒಪ್ಪಂದದ ಪ್ರಕಾರ ಉಪಾಧ್ಯಕ್ಷೆಯಾಗಿದ್ದ ನಂಜುಂಡಸ್ವಾಮಿ ಪತ್ನಿ ಸೌಭಾಗ್ಯ ರವರಿಗೆ ಅಧಿಕಾರ ನೀಡಬೇಕಿತ್ತು.ಆದರೆ ಈ ವಿಚಾರದಲ್ಲಿ ಸುಮತಿ ಸಂಭಂಧಿ ಹಾಗೂ ಹಾಲಿ ಸದಸ್ಯ ಗೋವರ್ಧನ್ ಅಡ್ಡಗಾಲು ಹಾಕಿ ಅಧಿಕಾರ ನೀಡಲು ಕ್ಯಾತೆ ತೆಗೆದಿದ್ದ.ಅಕ್ಟೋಬರ್ 6 ರಂದು ಇದೇ ವಿಚಾರವಾಗಿ ಮಾತನಾಡಲು ನಂಜುಂಡಸ್ವಾಮಿ ಹಣದ ಸಮೇತ ತೆರಳಿದ್ದಾರೆ.ಗೋವರತಧನ್ ಹಾಗೂ ಇತರರನ್ನ ಭೇಟಿ ಮಾಡಿದ್ದಾರೆ.ಆ ದಿನ ರಾತ್ರಿ ನಂಜುಂಡಸ್ವಾಮಿ ಮನೆಗೆ ಹಿಂದಿರುಗಿಲ್ಲ.ಮರುದಿನ ಜಮೀನೊಂದರಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಕಂಡುಬಂದಿದ್ದಾರೆ.ಆಸ್ಪತ್ರೆಗೆ ಸಾಗಿಸುವ ವೇಳೆ ನಂಜುಂಡಸ್ವಾಮಿ ಮೃತಪಟ್ಟಿದ್ದಾರೆ.

ನಂಜುಂಡಸ್ವಾಮಿ ಸಾವು ಅನುಮಾನಾಸ್ಪದವಾಗಿದೆ ಎಂದು ಪತ್ನಿ ಸೌಭಾಗ್ಯ ಪೊಲೀಸ್ ಠಾಣೆಯಲ್ಲಿ ಗೀವರ್ಧನ್ ವಿರುದ್ದ ದೂರು ನೀಡಿ ಕೊಲೆ ಎಂದು ಆರೋಪಿಸಿದ್ದರು.ಮತ್ತೊಂದೆಡೆ ಆರೋಪ ಹೊತ್ತ ಗೋವರ್ಧನ್ ಇದು ಅಪಘಾತ ಎಂದು ಬಿಂಬಿಸಿ ಪೊಲೀಸರನ್ನೇ ದಿಕ್ಕಿ ತಪ್ಪಿಸುವಂತೆ ಮಾಡಿದ್ದ.ಆದ್ರೆ ಸಂಚಾರಿ ಠಾಣೆ ಪೊಲೀಸರು ಕೂಲಂಕುಷವಾಗು ಪರಿಶೀಲನೆ ನಡೆಸಿದಾಗ ಅನುಮಾನದ ಹುತ್ತ ದಟ್ಟವಾಗಿ ಕಾಣಿಸಿತ್ತು.ಜೊತೆಗೆ ಉಪ್ಪಾರ ಜನಾಂಗದ ಮುಖಂಡರು ಕೊಲೆ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ನಂಜನಗೂಡು ಗ್ರಾಮಾಂತರ ಠಾಣೆಗೆ ಮುತ್ತಿಗೆ ಹಾಕಿದ್ದರು.ಪ್ರಕರಣ ದಾಖಲಿಸಿಕೊಂಡು ತೆನಿಖೆ ಆರಂಭಿಸಿದ ಪೊಲೀಸರಿಗೆ ಕೊಲೆ ಎಂದು ಖಚಿತವಾಗಿ ಗೋವರ್ಧನ್ ರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಸತ್ಯತೆ ಹೊರಬಿದ್ದಿತು.ಕೂಡಲೇ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಜಾಹಿರ್,ಮಣಿಕಙಠ ಹಾಗೂ ಮಹೇಂದ್ರ ಸೇರಿದಂತೆ ನಾಲ್ವರನ್ನ ಬಂಧಿಸಿದ್ದರು.ಇದೀಗ 5 ನೇ ಆರೋಪಿ ಧನರಾಜ್ ಭೋಲಾನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *