ಆರ್ಥಿಕ ನೆರವಿಗಾಗಿ ಮನವಿ ಮಾಡಿದ ಪುಸ್ತಕ ಪ್ರೇಮಿ…ನೆರವಿಗೆ ಧಾವಿಸಿದ ಕನ್ನಡ ಪ್ರೇಮಿಗಳು…

ಆರ್ಥಿಕ ನೆರವಿಗಾಗಿ ಮನವಿ ಮಾಡಿದ ಪುಸ್ತಕ ಪ್ರೇಮಿ…ನೆರವಿಗೆ ಧಾವಿಸಿದ ಕನ್ನಡ ಪ್ರೇಮಿಗಳು…

ಮೈಸೂರು,ಅ25,Tv10 ಕನ್ನಡ

ಭಾಷೆಗೆ ಎಲ್ಲೆ ಇಲ್ಲ ಪುಸ್ತಕ ಪ್ರೇಮಕ್ಕೆ ಕೊನೆ ಇಲ್ಲ ಎಂಬ ನಾಣ್ಣುಡಿಗೆ ಉದಾಹರಣೆಯಾದ ಉದಯಗಿರಿಯ ಸೈಯದ್ ಇಸಾಕ್ ಲೈಬ್ರರಿಗೆ ಆರ್ಥಿಕ ನೆರವು ಬೇಕಿದೆ.ಇಳಿ ವಯಸ್ಸಿನಲ್ಲಿ ತಮ್ಮ ಸ್ವಂತ ದುಡಿಮೆಯಲ್ಲಿ ಸಾರ್ವಜನಿಕ ಗ್ರಂಥಾಲಯವನ್ನ ತೆರೆದು ಕನ್ನಡ ಹೂರಣವನ್ನ ಪಸರಿಸುತ್ತಿರುವ ಸೈಯದ್ ಇಸಾಕ್ ತಮ್ಮ ಲೈಬ್ರರಿಯನ್ನ ಉಳಿಸಿಕೊಡುವಂತೆ ಕನ್ನಡ ಪ್ರೇಮಿಗಳಿಗೆ ಮನವಿ ಮಾಡಿದ್ದಾರೆ.ಸ್ವಂತ ಖರ್ಚಿನಿಂದ ಸ್ಥಾಪನೆಯಾದ ಗ್ರಂಥಾಲಯದಲ್ಲಿ ಸಾವಿರಾರು ಪುಸ್ತಕಗಳ ಸಂಗ್ರಹವಿದೆ.ಕನ್ನಡವನ್ನ ಉಳಿಸಿ ಬೆಳೆಸಿದ ಸಾಹಿತಿಗಳ ಭಾವಚಿತ್ರಗಳು ಕನ್ನಡ ಪ್ರೇಮಿಗಳನ್ನ ಸೆಳೆಯುತ್ತಿವೆ.ಕನ್ನಡ ದಿನ ಪತ್ರಿಕೆಗಳು ಕನ್ನಡಿಗರಿಗೆ ಜ್ಞಾನವನ್ನ ಹಂಚುತ್ತಿದೆ.ಹಲವಾರು ವರ್ಷಗಳಿಂದ ತಮ್ಮದೇ ಆದ ಶೈಲಿಯಲ್ಲಿ ಗ್ರಂಥಾಲಯದ ಮೂಲಕ ಕನ್ನಡ ಸೇವೆ ಮಾಡಿಕೊಂಡು ಬಂದಿರುವ ಸೈಯದ್ ಇಸಾಕ್ ತಮ್ಮ ಲೈಬ್ರರಿ ಉಳಿಸಲು ಸಾರ್ವಜನಿಕವಾಗಿ ಮನವಿ ಮಾಡಿದ್ದಾರೆ.ಕೆಲವೇ ದಿನಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಸಂಧರ್ಭದಲ್ಲಿ ಕನ್ನಡಿಗರು ಸೈಯದ್ ಇಸಾಕ್ ರವರ ಗ್ರಂಥಾಲಯ ಉಳಿವಿಗಾಗಿ ಒತ್ತು ನೀಡಬೇಕಿದೆ.
ಈ ಮಾಹಿತಿ ಅರಿತ ಕನ್ನಡ ಪ್ರೇಮಿಗಳು ಮತ್ತು ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಕನ್ನಡಪರ ಸಂಘಟನೆಗಳು ನೆರವಿಗೆ ಮುಂದಾಗಿವೆ.ಜೀವಧಾರ ರಕ್ತನಿಧಿ ಕೇಂದ್ರವು ಸೈಯದ್ ಲೈಬ್ರೆರಿಯ ವಿದ್ಯುತ್ ಬಿಲ್ ಹಾಗೂ ಪತ್ರಿಕೆಗೆ ಸಹಾಯ ಮಾಡಲು ಮುಂದಾಗಿದೆ. ಜೀವದಾರರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷ ಜಿ ರಾಘವೇಂದ್ರ, ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಮಹಾನ್ ಶ್ರೇಯಸ್ ಹಾಗೂ ಇನ್ನಿತರರು ಗ್ರಂಥಾಲಯಕ್ಕೆ ಭೇಟಿ ನೀಡಿ ಸೈಯದ್ ಇಸಾಕ್ ರವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ…

Spread the love

Related post

ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮೈಸೂರು,ಏ30,Tv10 ಕನ್ನಡ ನಿನ್ನೆ ಸುರಿದ ಭಾರಿ ಮಳೆಗೆ ಮನೆಯೊಂದರ ಮೇಲೆ ವಿದ್ಯುತ್ ಕಂಬ ಹಾಗೂ ಮರ ಉರುಳಿಬಿದ್ದಿದೆ.ಮೈಸೂರಿನ ಬೃಂದಾವನ ಬಡಾವಣೆ 7 ನೇ ಕ್ರಾಸ್ ನ ಪ್ರಿಯದರ್ಶಿನಿ ಆಸ್ಪತ್ರೆ…
ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ವಿರುದ್ದ ಶಿಸ್ತುಕ್ರಮಕ್ಕೆ ಮುಂದಾದ ಪ್ರಾಧಿಕಾರ…ಮೃತ ವ್ಯಕ್ತಿಯ ಆಸ್ತಿ ಕಬಳಿಸಲು ದಾಖಲೆ ಮಾಡಿಕೊಟ್ಟ ಆರೋಪ…ಮುಡಾ ಆಯುಕ್ತರಿಂದ ಸರ್ಕಾರಕ್ಕೆ ಅನುಮತಿ ಕೋರಿ ಪತ್ರ…

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ವಿರುದ್ದ ಶಿಸ್ತುಕ್ರಮಕ್ಕೆ ಮುಂದಾದ ಪ್ರಾಧಿಕಾರ…ಮೃತ ವ್ಯಕ್ತಿಯ…

ಮೈಸೂರು,ಏ29,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಮತ್ತೊಂದು ವಿಕೆಟ್ ಉರುಳಲಿದೆ.ಕೆಲವೇ ದಿನಗಳ ಹಿಂದೆ ಒಬ್ಬರನ್ನ ಅಮಾನತುಗೊಳಿಸಿದ್ದ ಆಯುಕ್ತರು ಇಂದು ಮತ್ತೊಬ್ಬ ಅಧಿಕಾರಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲು ಸಜ್ಜಾಗಿದ್ದಾರೆ.ಸೂಕ್ತ…
ಮೈಸೂರು ಸಿನಿಮಾ ಸೊಸೈಟಿಯ ಅಂತರಾಷ್ಟ್ರೀಯ ಚಿತ್ರೋತ್ಸವದ ಪರಿದೃಶ್ಯ ನಾಲ್ಕನೇ ಆವೃತ್ತಿಯ ಬ್ರೋಷರ್ ಬಿಡುಗಡೆ…ಕಿರುಚಿತ್ರ,ಸಾಕ್ಷ್ಯಚಿತ್ರಗಳಿಗೆ ಆಹ್ವಾನ…

ಮೈಸೂರು ಸಿನಿಮಾ ಸೊಸೈಟಿಯ ಅಂತರಾಷ್ಟ್ರೀಯ ಚಿತ್ರೋತ್ಸವದ ಪರಿದೃಶ್ಯ ನಾಲ್ಕನೇ ಆವೃತ್ತಿಯ ಬ್ರೋಷರ್…

ಮೈಸೂರು,ಏ28,Tv10 ಕನ್ನಡ ಮೈಸೂರು ಸಿನಿಮಾ ಸೊಸೈಟಿಯ ಪ್ರಮುಖ ಚಿತ್ರೋತ್ಸವವಾದ ಪರಿದೃಶ್ಯ ನಾಲ್ಕನೇ ಆವೃತ್ತಿಯ ಬ್ರೋಷರ್ ಬಿಡುಗಡೆ ಮಾಡಲಾಯಿತು. 6/02/2026 ರಿಂದ 8/02/2026 ವರೆಗೆ ನಡೆಯುವ ಚಿತ್ರೋತ್ಸವವನ್ನ ವಿದ್ಯಾರ್ಥಿ ಮತ್ತು…

Leave a Reply

Your email address will not be published. Required fields are marked *