ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ನಿಂದ ತಡೆಯಾಜ್ಞೆ…

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ನಿಂದ ತಡೆಯಾಜ್ಞೆ…

ನಂಜನಗೂಡು,ಅ25,Tv10 ಕನ್ನಡ

ಇದೇ ತಿಂಗಳು 28 ರಂದು ನಡೆಯಬೇಕಿದ್ದ ನಂಜನಗೂಡು ತಾಲ್ಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ನಂಜನಗೂಡಿನ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆ,ಎಂ,ಎಫ್,ಸಿ ಇಂದು ನ್ಯಾಯಾಲಯದಿಂದ ತಡೆಯಾಜ್ಞೆ ನೀಡಲಾಗಿದೆ.

ಅರ್ಜಿದಾರರಾದ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ ನಂಜನಗೂಡು ತಾಲ್ಲೂಕಿನ ಅಧ್ಯಕ್ಷರಾದ ಎನ್. ಹರೀಶ್ ಕುಮಾರ್ ರವರು ತಮ್ಮ ಅರ್ಜಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನಂಜನಗೂಡು ಶಾಖೆಯವರು ಬೈಲಾ ನಿಯಮಾವಳಿ ಉಲ್ಲಂಘನೆ ಮಾಡಿ ತಮ್ಮ ಅನುಕೂಲಕ್ಕೆ ತಕ್ಕಂತೆ ಮತಕ್ಷೇತ್ರ ಹಂಚಿಕೆ ಮಾಡಿಕೊಂಡು ಮತ್ತು ಮತದಾರ ಪಟ್ಟಿಯಲ್ಲಿ ಲೋಪವೆಸಗಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಕೋರ್ಟ್ ಮೊರೆ ಹೋಗಿದ್ದರು, ಈ ವಾದವನ್ನು ಆಲಿಸಿದ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆ,ಎಂ,ಎಫ್,ಸಿ ನ್ಯಾಯಾಲಯ ಚುನಾವಣೆಗೆ ತಡೆಯಾಜ್ಞೆ ನೀಡಿದೆ

ಕಳೆದ 2013-2018 ಹಾಗೂ 2019-2024 ರ ಸಾಲಿನಲ್ಲಿ ಇ, ಎಸ್.ಐ ಇಲಾಖೆ ಮತಕ್ಷೇತ್ರದಲ್ಲಿ ಎನ್.ಹರೀಶ್ ಕುಮಾರ್ ರವರು ನಿರ್ದೇಶಕರಾಗಿ ಆಯ್ಕೆಯಾಗಿದ್ದರು.ಆದರೆ ಈ ಬಾರಿ ಅಂದರೆ 2024-2029 ನಡೆಯಲಿರುವ ಇ, ಎಸ್,ಐ ಇಲಾಖೆ ಮತಕ್ಷೇತ್ರವನ್ನು ತೆಗೆದು ಹಾಕಿ, ಅವೈಜ್ಞಾನಿಕವಾಗಿ ಆರೋಗ್ಯ ಇಲಾಖೆ ಮತದಾರ ಪಟ್ಟಿಗೆ ಸೇರಿಸಲಾಗಿದ್ದು.

ಇ, ಎಸ್ ಐ ಇಲಾಖೆ ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುತ್ತಿದ್ದು, ಆರೋಗ್ಯ ಇಲಾಖೆಗೂ ಇ, ಎಸ್ ಐ ಇಲಾಖೆಗೂ ಸಂಬಂಧವೇ ಇಲ್ಲ, ಅಷ್ಟೇ ಅಲ್ಲದೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬೈಲಾದ ನಿಯಮಾವಳಿ ಪ್ರಾತಿನಿಧ್ಯ ನೀಡದ ಇಲಾಖೆಗಳಿಗೆ ಮೂರು ಸ್ಥಾನಗಳು ಮೀಸಲಿದ್ದು, ಆ ಸ್ಥಾನಗಳಲ್ಲಿಯೂ ಸಹ ಇ,ಎಸ್,ಐ ಇಲಾಖೆಗೆ ಪ್ರಾತಿನಿಧ್ಯ ನೀಡದೆ ವಂಚಿಸಲಾಗಿದೆ ಎಂದು ಈ ಬಗ್ಗೆ ಅರ್ಜಿದಾರರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಕ್ಷೇಪಣೆ ಸಲ್ಲಿಸಿದ್ದರು.ಆದರೂ ಸಹ ಈ ಆಕ್ಷೇಪಣೆಯನ್ನು ಲೆಕ್ಕಿಸದೇ ಈಗಾಗಲೇ ಪ್ರಾತಿನಿಧ್ಯ ನೀಡಿರುವ ಇಲಾಖೆಗಳಿಗೆ ಹೆಚ್ಚುವರಿ ಸ್ಥಾನಗಳನ್ನು ನೀಡಿ, ಇ,ಎಸ್,ಐ ಗೆ ಕ್ಷೇತ್ರವನ್ನೇ ಹಂಚದೇ ಬೈಲಾವನ್ನು ಉಲ್ಲಂಘನೆ ಮಾಡಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ಹೀಗಾಗಿ ಅಕ್ಟೋಬರ್ 28 ರಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನಂಜನಗೂಡು ಶಾಖೆಯ ಚುನಾವಣೆಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ನ್ಯಾಯಾಲಯದ ಮೊರೆ ಹೋಗಿದ್ದರು. ನಂಜನಗೂಡಿನ ವಕೀಲರಾದ ಗೋಳೂರು ಆರ್. ಪ್ರಸನ್ನರವರು ವಾದ ಮಂಡಿಸಿದ್ದರು…

Spread the love

Related post

ಯುವಕನ ಮೇಲೆ ಹಲ್ಲೆ…ನಾಲ್ವರಿಂದ ಕೃತ್ಯ…ಪ್ರಕರಣ ದಾಖಲು…

ಯುವಕನ ಮೇಲೆ ಹಲ್ಲೆ…ನಾಲ್ವರಿಂದ ಕೃತ್ಯ…ಪ್ರಕರಣ ದಾಖಲು…

ಪಿರಿಯಾಪಟ್ಟಣ,ಮಾ18,Tv10 ಕನ್ನಡ ಯುವಕನನ್ನು ಕರೆದುಕೊಂಡು ಹೋಗಿ ಹಲ್ಲೆ ನಡೆಸಿರುವ ಘಟನೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಜ್ವಲ್ (21) ಹಲ್ಲೆಗೊಳಗಾದ ಯುವಕ. ಪಿರಿಯಾಪಟ್ಟಣ ತಾಲ್ಲೂಕು…
ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಮೈಸೂರು,ಮಾ17,Tv10 ಕನ್ನಡ ಕನ್ನಡ ಚಿತ್ರರಂಗದ ಮರೆಯಲಾಗದ ಮಾಣಿಕ್ಯ ಪವರ್ ಸ್ಟಾರ್ ಯುವರತ್ನ ಪುನೀತ್ ರಾಜಕುಮಾರ್ ರವರ ಜನ್ಮದಿನೋತ್ಸವದ ನೆನಪಿಗಾಗಿ ‘ಶ್ರೀರಾಮ ಗೆಳಯರ ಬಳಗದ’ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕರಿಗೆ…
ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಮೈಸೂರು,ಮಾ17,Tv10 ಕನ್ನಡ ಕಳೆದುಹೋಗಿದ್ದ 37 ಮೊಬೈಲ್ ಫೋನ್ ಗಳನ್ನು ದೇವರಾಜ ಠಾಣೆ ಪೊಲೀಸರು ಇಂದು ವಾರಸುದಾರರಿಗೆ ಮರಳಿಸಿದರು. ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಘು.ಕೆ.ಆರ್. ಉಪ ನಿರೀಕ್ಷಕರಾದ…

Leave a Reply

Your email address will not be published. Required fields are marked *