ಇಎಸ್ ಐ ವೈದ್ಯರ ಕ್ವಾರ್ಟರ್ಸ್ ನ ತಾರಸಿಯಲ್ಲಿ ನಿಂತ ಮಳೆ ನೀರು…ಸ್ಥಳೀಯರಿಗೆ ರೋಗರುಜಿನಗಳ ಭೀತಿ…ಪಾಲಿಕೆ ಅಧಿಕಾರಿಗಳೇ ಎಲ್ಲಿದ್ದೀರಿ…?

ಇಎಸ್ ಐ ವೈದ್ಯರ ಕ್ವಾರ್ಟರ್ಸ್ ನ ತಾರಸಿಯಲ್ಲಿ ನಿಂತ ಮಳೆ ನೀರು…ಸ್ಥಳೀಯರಿಗೆ ರೋಗರುಜಿನಗಳ ಭೀತಿ…ಪಾಲಿಕೆ ಅಧಿಕಾರಿಗಳೇ ಎಲ್ಲಿದ್ದೀರಿ…?

ಮೈಸೂರು,ನ14,Tv10 ಕನ್ನಡ

ಸಾರ್ವಜನಿಕರ ಆರೋಗ್ಯ ರಕ್ಷಿಸುವ ಹೊಣೆ ವೈದ್ಯರದ್ದು.ಆದ್ರೆ ವೈದ್ಯರು ವಾಸಿಸುವ ಕ್ವಾರ್ಟರ್ಸ್ ಗಳೇ ಸಾರ್ವಜನಿಕರಿಗೆ ರೋಗಹರಡುವ ತಾಣವಾದ್ರೆ ಹೇಗೆ…?ಹೌದು ಇಂತಹ ಪರಿಸ್ಥಿತಿ ಬಂದಿರೋದು ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 4 ರ ವ್ಯಾಪ್ತಿ ವಾರ್ಡ್ ನಂಬರ್ 6 ಗೋಕುಲಂ 3 ನೇ ಹಂತದ 10 ಮುಖ್ಯರಸ್ತೆ ನಿವಾಸಿಗಳಿಗೆ. ಕೆ.ಆರ್.ಎಸ್.ಮುಖ್ಯ ರಸ್ತೆಯ ಇಎಸ್ ಐ ಆಸ್ಪತ್ರೆ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗಾಗಿ ಇಲ್ಲಿ ಕ್ವಾರ್ಟರ್ಸ್ ನಿರ್ಮಿಸಲಾಗಿದೆ.ಒಂದು ವರ್ಷದ ಹಿಂದೆ ನಿರ್ಮಿಸಿದ ಕಟ್ಟಡದ ತಾರಸಿಯಲ್ಲಿ ಮಳೆ ನೀರು ಈಜುಕೊಳದಂತೆ ನಿಂತಿದೆ.ಸರಾಗವಾಗಿ ಹರಿದುಹೋಗುವಂತೆ ಮಾಡುವಲ್ಲಿ ಕಂಟ್ರಾಕ್ಟರ್ ವಿಫಲವಾಗಿದ್ದಾನೆ.ಪರಿಣಾಮ ಮಳೆ ನೀರು ನಿಂತು ಕೊಳೆತುಹೋಗಿ ದುರ್ಗಂಧ ಬೀರುತ್ತಿದೆ.ಸೊಳ್ಳೆಗಳ ಆವಾಸಸ್ಥಾನವಾಗಿ ಪರಿಣಮಿಸಿದೆ.ಈಗಾಗಲೇ ಮಲೇರಿಯಾ, ಡೆಂಗ್ಯೂ ಭೀತಿ ಆವರಿಸಿರುವ ಸಮಯದಲ್ಲಿ ಸೊಳ್ಳೆಗಳ ಸಂತಾನಕ್ಕೆ ತಾರಸಿಯಲ್ಲಿ ನಿಂತ ಮಳೆ ನೀರು ಸಹಕಾರಿಯಾಗುತ್ತಿದೆ.ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ವೈದ್ಯರು ಹಗಲಿರುಳು ಶ್ರಮಿಸುತ್ತಿದ್ದರೆ ಈ ಕ್ವಾರ್ಟರ್ಸ್ ನ ಸಮೀಪದಲ್ಲಿರುವ 10 ನೇ ಮುಖ್ಯ ರಸ್ತೆ ನಿವಾಸಿಗಳಿಗೆ ತಾರಸಿ ಮೇಲೆ ನಿಂತ ನೀರು ಪುಕ್ಕಟ್ಟೆಯಾಗಿ ರೋಗ ಹರಡುವ ಭೀತಿ ಸೃಷ್ಟಿಸಿದೆ.ನಿಂತು ಕೊಳೆತು ನಾರುತ್ತಿರುವ ಮಳೆ ನೀರನ್ನ ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡಿ ಸ್ಥಳೀಯರ ಆರೋಗ್ಯ ರಕ್ಷಣೆಯತ್ತ ವಲಯ ಕಚೇರಿ 4 ರ ಅಧಿಕಾರಿಗಳು ಮುಂದಾಗಬೇಕಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *