ಇಎಸ್ ಐ ವೈದ್ಯರ ಕ್ವಾರ್ಟರ್ಸ್ ನ ತಾರಸಿಯಲ್ಲಿ ನಿಂತ ಮಳೆ ನೀರು…ಸ್ಥಳೀಯರಿಗೆ ರೋಗರುಜಿನಗಳ ಭೀತಿ…ಪಾಲಿಕೆ ಅಧಿಕಾರಿಗಳೇ ಎಲ್ಲಿದ್ದೀರಿ…?

ಇಎಸ್ ಐ ವೈದ್ಯರ ಕ್ವಾರ್ಟರ್ಸ್ ನ ತಾರಸಿಯಲ್ಲಿ ನಿಂತ ಮಳೆ ನೀರು…ಸ್ಥಳೀಯರಿಗೆ ರೋಗರುಜಿನಗಳ ಭೀತಿ…ಪಾಲಿಕೆ ಅಧಿಕಾರಿಗಳೇ ಎಲ್ಲಿದ್ದೀರಿ…?

ಮೈಸೂರು,ನ14,Tv10 ಕನ್ನಡ

ಸಾರ್ವಜನಿಕರ ಆರೋಗ್ಯ ರಕ್ಷಿಸುವ ಹೊಣೆ ವೈದ್ಯರದ್ದು.ಆದ್ರೆ ವೈದ್ಯರು ವಾಸಿಸುವ ಕ್ವಾರ್ಟರ್ಸ್ ಗಳೇ ಸಾರ್ವಜನಿಕರಿಗೆ ರೋಗಹರಡುವ ತಾಣವಾದ್ರೆ ಹೇಗೆ…?ಹೌದು ಇಂತಹ ಪರಿಸ್ಥಿತಿ ಬಂದಿರೋದು ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 4 ರ ವ್ಯಾಪ್ತಿ ವಾರ್ಡ್ ನಂಬರ್ 6 ಗೋಕುಲಂ 3 ನೇ ಹಂತದ 10 ಮುಖ್ಯರಸ್ತೆ ನಿವಾಸಿಗಳಿಗೆ. ಕೆ.ಆರ್.ಎಸ್.ಮುಖ್ಯ ರಸ್ತೆಯ ಇಎಸ್ ಐ ಆಸ್ಪತ್ರೆ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗಾಗಿ ಇಲ್ಲಿ ಕ್ವಾರ್ಟರ್ಸ್ ನಿರ್ಮಿಸಲಾಗಿದೆ.ಒಂದು ವರ್ಷದ ಹಿಂದೆ ನಿರ್ಮಿಸಿದ ಕಟ್ಟಡದ ತಾರಸಿಯಲ್ಲಿ ಮಳೆ ನೀರು ಈಜುಕೊಳದಂತೆ ನಿಂತಿದೆ.ಸರಾಗವಾಗಿ ಹರಿದುಹೋಗುವಂತೆ ಮಾಡುವಲ್ಲಿ ಕಂಟ್ರಾಕ್ಟರ್ ವಿಫಲವಾಗಿದ್ದಾನೆ.ಪರಿಣಾಮ ಮಳೆ ನೀರು ನಿಂತು ಕೊಳೆತುಹೋಗಿ ದುರ್ಗಂಧ ಬೀರುತ್ತಿದೆ.ಸೊಳ್ಳೆಗಳ ಆವಾಸಸ್ಥಾನವಾಗಿ ಪರಿಣಮಿಸಿದೆ.ಈಗಾಗಲೇ ಮಲೇರಿಯಾ, ಡೆಂಗ್ಯೂ ಭೀತಿ ಆವರಿಸಿರುವ ಸಮಯದಲ್ಲಿ ಸೊಳ್ಳೆಗಳ ಸಂತಾನಕ್ಕೆ ತಾರಸಿಯಲ್ಲಿ ನಿಂತ ಮಳೆ ನೀರು ಸಹಕಾರಿಯಾಗುತ್ತಿದೆ.ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ವೈದ್ಯರು ಹಗಲಿರುಳು ಶ್ರಮಿಸುತ್ತಿದ್ದರೆ ಈ ಕ್ವಾರ್ಟರ್ಸ್ ನ ಸಮೀಪದಲ್ಲಿರುವ 10 ನೇ ಮುಖ್ಯ ರಸ್ತೆ ನಿವಾಸಿಗಳಿಗೆ ತಾರಸಿ ಮೇಲೆ ನಿಂತ ನೀರು ಪುಕ್ಕಟ್ಟೆಯಾಗಿ ರೋಗ ಹರಡುವ ಭೀತಿ ಸೃಷ್ಟಿಸಿದೆ.ನಿಂತು ಕೊಳೆತು ನಾರುತ್ತಿರುವ ಮಳೆ ನೀರನ್ನ ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡಿ ಸ್ಥಳೀಯರ ಆರೋಗ್ಯ ರಕ್ಷಣೆಯತ್ತ ವಲಯ ಕಚೇರಿ 4 ರ ಅಧಿಕಾರಿಗಳು ಮುಂದಾಗಬೇಕಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *