ಇಎಸ್ ಐ ವೈದ್ಯರ ಕ್ವಾರ್ಟರ್ಸ್ ನ ತಾರಸಿಯಲ್ಲಿ ನಿಂತ ಮಳೆ ನೀರು…ಸ್ಥಳೀಯರಿಗೆ ರೋಗರುಜಿನಗಳ ಭೀತಿ…ಪಾಲಿಕೆ ಅಧಿಕಾರಿಗಳೇ ಎಲ್ಲಿದ್ದೀರಿ…?

ಇಎಸ್ ಐ ವೈದ್ಯರ ಕ್ವಾರ್ಟರ್ಸ್ ನ ತಾರಸಿಯಲ್ಲಿ ನಿಂತ ಮಳೆ ನೀರು…ಸ್ಥಳೀಯರಿಗೆ ರೋಗರುಜಿನಗಳ ಭೀತಿ…ಪಾಲಿಕೆ ಅಧಿಕಾರಿಗಳೇ ಎಲ್ಲಿದ್ದೀರಿ…?

ಮೈಸೂರು,ನ14,Tv10 ಕನ್ನಡ

ಸಾರ್ವಜನಿಕರ ಆರೋಗ್ಯ ರಕ್ಷಿಸುವ ಹೊಣೆ ವೈದ್ಯರದ್ದು.ಆದ್ರೆ ವೈದ್ಯರು ವಾಸಿಸುವ ಕ್ವಾರ್ಟರ್ಸ್ ಗಳೇ ಸಾರ್ವಜನಿಕರಿಗೆ ರೋಗಹರಡುವ ತಾಣವಾದ್ರೆ ಹೇಗೆ…?ಹೌದು ಇಂತಹ ಪರಿಸ್ಥಿತಿ ಬಂದಿರೋದು ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 4 ರ ವ್ಯಾಪ್ತಿ ವಾರ್ಡ್ ನಂಬರ್ 6 ಗೋಕುಲಂ 3 ನೇ ಹಂತದ 10 ಮುಖ್ಯರಸ್ತೆ ನಿವಾಸಿಗಳಿಗೆ. ಕೆ.ಆರ್.ಎಸ್.ಮುಖ್ಯ ರಸ್ತೆಯ ಇಎಸ್ ಐ ಆಸ್ಪತ್ರೆ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗಾಗಿ ಇಲ್ಲಿ ಕ್ವಾರ್ಟರ್ಸ್ ನಿರ್ಮಿಸಲಾಗಿದೆ.ಒಂದು ವರ್ಷದ ಹಿಂದೆ ನಿರ್ಮಿಸಿದ ಕಟ್ಟಡದ ತಾರಸಿಯಲ್ಲಿ ಮಳೆ ನೀರು ಈಜುಕೊಳದಂತೆ ನಿಂತಿದೆ.ಸರಾಗವಾಗಿ ಹರಿದುಹೋಗುವಂತೆ ಮಾಡುವಲ್ಲಿ ಕಂಟ್ರಾಕ್ಟರ್ ವಿಫಲವಾಗಿದ್ದಾನೆ.ಪರಿಣಾಮ ಮಳೆ ನೀರು ನಿಂತು ಕೊಳೆತುಹೋಗಿ ದುರ್ಗಂಧ ಬೀರುತ್ತಿದೆ.ಸೊಳ್ಳೆಗಳ ಆವಾಸಸ್ಥಾನವಾಗಿ ಪರಿಣಮಿಸಿದೆ.ಈಗಾಗಲೇ ಮಲೇರಿಯಾ, ಡೆಂಗ್ಯೂ ಭೀತಿ ಆವರಿಸಿರುವ ಸಮಯದಲ್ಲಿ ಸೊಳ್ಳೆಗಳ ಸಂತಾನಕ್ಕೆ ತಾರಸಿಯಲ್ಲಿ ನಿಂತ ಮಳೆ ನೀರು ಸಹಕಾರಿಯಾಗುತ್ತಿದೆ.ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ವೈದ್ಯರು ಹಗಲಿರುಳು ಶ್ರಮಿಸುತ್ತಿದ್ದರೆ ಈ ಕ್ವಾರ್ಟರ್ಸ್ ನ ಸಮೀಪದಲ್ಲಿರುವ 10 ನೇ ಮುಖ್ಯ ರಸ್ತೆ ನಿವಾಸಿಗಳಿಗೆ ತಾರಸಿ ಮೇಲೆ ನಿಂತ ನೀರು ಪುಕ್ಕಟ್ಟೆಯಾಗಿ ರೋಗ ಹರಡುವ ಭೀತಿ ಸೃಷ್ಟಿಸಿದೆ.ನಿಂತು ಕೊಳೆತು ನಾರುತ್ತಿರುವ ಮಳೆ ನೀರನ್ನ ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡಿ ಸ್ಥಳೀಯರ ಆರೋಗ್ಯ ರಕ್ಷಣೆಯತ್ತ ವಲಯ ಕಚೇರಿ 4 ರ ಅಧಿಕಾರಿಗಳು ಮುಂದಾಗಬೇಕಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *